Plight Of Flood Victims: ಸಿಎಂ ತವರು ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಗೋಳು, ಕುರುಡಾಗಿದೆ ಜಿಲ್ಲಾಡಳಿತ

Plight Of Flood Victims: ಸಿಎಂ ತವರು ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಗೋಳು, ಕುರುಡಾಗಿದೆ ಜಿಲ್ಲಾಡಳಿತ

Suvarna News   | Asianet News
Published : Dec 10, 2021, 04:03 PM IST

- ನೆರೆ ಸಂತ್ರಸ್ತರ ಕಣ್ಣೀರು, ಅವಕಾಶವಿದ್ರು ಪರಿಹಾರ ನೀಡದ ಜಿಲ್ಲಾಡಳಿತ

- ಕಳೆದ ಮೂರು ವರ್ಷಗಳಿಂದ ಮಳೆಗೆ ಮನೆ ಬಿದ್ದು ಕಂಗಾಲಾಗಿರುವ ಕುಟುಂಬ

- ಅಧಿಕಾರಿಗಳ ನಿರ್ಲಕ್ಷಕ್ಕೆ  5 ಲಕ್ಷದ ಬದಲು ಸಿಕ್ಕಿದ್ದು 50 ಸಾವಿರ ಪರಿಹಾರ ಮಾತ್ರ!

ಧಾರವಾಡ (ಡಿ. 10): ಕಳೆದ ಮೂರು ವರ್ಷಗಳಿಂದ ಬಾರಿ ಬಾರಿ ಮಳೆಗೆ ನೆರೆ ಸಂತ್ರಸ್ಥರು (Flood Victims) ಸೋತು ಸುಣ್ಣವಾಗಿದ್ದಾರೆ.  ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ನೆರೆ ಸಂತ್ರಸ್ತರಿಗೆ, ಮನೆ ಕಳೆದುಕೊಂಡವರಿಗೆ ಮನೆಗಳನ್ನ ಕೊಡಲು ಎ,ಬಿ,ಸಿ ಕೆಟಗೇರಿ ಅಂತ ವಿಭಜನೆ ಮಾಡಿ ಪರಿಹಾರವನ್ನ ಕೊಡುವ ವ್ಯವಸ್ಥೆ ತಂದಿದ್ದರು. ಆದರದು ಪ್ರಯೋಜನಕ್ಕೆ ಬರುತ್ತಿಲ್ಲ. 

ಸಿಎಂ ಸ್ವಂತ ಜಿಲ್ಲೆಯಲ್ಲಿ (Dharwad) ಮಹಿಳೆಯೊಬ್ಬಳು ಮನೆಯಿಲ್ಲ‌ ವಾಸ ಮಾಡಲಿಕ್ಕೆ ಎಂದು ಕಣ್ಣೀರು ಹಾಕಿದ್ದಾಳೆ.  2019 ರಲ್ಲಿ ಮಳೆಗೆ ಬಿದ್ದಿರುವ ಪಾಳು ಮನೆಯಲ್ಲಿ ವಾಸ ಮಾಡುತ್ತಿರುವ ಬಡ ಕುಟುಂಬಗಳು ಸರಕಾರದ ಪರಿಹಾರದ ಆಯ್ಕೆ ಪ್ರಕಾರ "ಎ" ಗ್ರೇಡ್ ಆಗಬೇಕಿತ್ತು, ಆದರೆ 'ಸಿ' ಗ್ರೇಡ್ ಹಾಕಿ ಕೇವಲ 50 ಸಾವಿರ ಪರಿಹಾರ ಕೊಟ್ಟು ಕೈ ಕಟ್ಟಿ ಕುಳಿತ ಜಿಲ್ಲಾಡಳಿತದ ವಿರುದ್ದ ಹಿಡಿಶಾಪವನ್ನ ಹಾಕುತ್ತಿದ್ದಾರೆ. ಪಾಳು ಬಿದ್ದ ಮನೆಯಲ್ಲಿ ವಾಸ ಮಾಡುತ್ತಿರುವ ಸಂತ್ರಸ್ಥ ಮಹಿಳೆ, ಚಂದ್ರಶೇಖರ ಚೌಡಿಮನಿ, ನೀಲವ್ವ ಸಲಕಿ, ಪ್ರಭು ಬಡಿಗೇರ ,ಮೂರು ಕುಟುಂಬಗಳು ಸದ್ಯ ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣ ವಾಗಿದೆ.

ಹೆಚ್ಚಿನ ಪರಿಹಾರಕ್ಕಾಗಿ ಸರಕಾರದ ಮೊರೆ ಹೊದ ಬಡ ಕುಟುಂಬಗಳಿಗೆ ಯಾವುದೇ ಪ್ರಯೋಜನ ಆಗಿಲ್ಲ. ಅಧಿಕಾರಿಗಳು ಈ ಗ್ರಾಮದತ್ತ ಸುಳಿದಿಲ್ಲ, ಅಧಿಕಾರಿಗಳ ನಿರ್ಲಕ್ಷಕ್ಕೆ  5 ಲಕ್ಷ ಪರಿಹಾರ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ನಮ್ಮ ಮನೆಯಲ್ಲಿ 7 ಜನ ವಾಸ ಮಾಡುತ್ತಿದ್ದೆವೆ, ಮಳೆ ಬಂದ್ರೆ ಎಲ್ಲಿ ಹೋಗೋಣ ಎಂದು ಗಳಗಳನೆ ಅತ್ತ ಮಹಿಳೆ ಕಣ್ಣೀರಿಟ್ಟಿದ್ದಾಳೆ.

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more