Plight Of Flood Victims: ಸಿಎಂ ತವರು ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಗೋಳು, ಕುರುಡಾಗಿದೆ ಜಿಲ್ಲಾಡಳಿತ

Plight Of Flood Victims: ಸಿಎಂ ತವರು ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಗೋಳು, ಕುರುಡಾಗಿದೆ ಜಿಲ್ಲಾಡಳಿತ

Suvarna News   | Asianet News
Published : Dec 10, 2021, 04:03 PM IST

- ನೆರೆ ಸಂತ್ರಸ್ತರ ಕಣ್ಣೀರು, ಅವಕಾಶವಿದ್ರು ಪರಿಹಾರ ನೀಡದ ಜಿಲ್ಲಾಡಳಿತ

- ಕಳೆದ ಮೂರು ವರ್ಷಗಳಿಂದ ಮಳೆಗೆ ಮನೆ ಬಿದ್ದು ಕಂಗಾಲಾಗಿರುವ ಕುಟುಂಬ

- ಅಧಿಕಾರಿಗಳ ನಿರ್ಲಕ್ಷಕ್ಕೆ  5 ಲಕ್ಷದ ಬದಲು ಸಿಕ್ಕಿದ್ದು 50 ಸಾವಿರ ಪರಿಹಾರ ಮಾತ್ರ!

ಧಾರವಾಡ (ಡಿ. 10): ಕಳೆದ ಮೂರು ವರ್ಷಗಳಿಂದ ಬಾರಿ ಬಾರಿ ಮಳೆಗೆ ನೆರೆ ಸಂತ್ರಸ್ಥರು (Flood Victims) ಸೋತು ಸುಣ್ಣವಾಗಿದ್ದಾರೆ.  ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ನೆರೆ ಸಂತ್ರಸ್ತರಿಗೆ, ಮನೆ ಕಳೆದುಕೊಂಡವರಿಗೆ ಮನೆಗಳನ್ನ ಕೊಡಲು ಎ,ಬಿ,ಸಿ ಕೆಟಗೇರಿ ಅಂತ ವಿಭಜನೆ ಮಾಡಿ ಪರಿಹಾರವನ್ನ ಕೊಡುವ ವ್ಯವಸ್ಥೆ ತಂದಿದ್ದರು. ಆದರದು ಪ್ರಯೋಜನಕ್ಕೆ ಬರುತ್ತಿಲ್ಲ. 

ಸಿಎಂ ಸ್ವಂತ ಜಿಲ್ಲೆಯಲ್ಲಿ (Dharwad) ಮಹಿಳೆಯೊಬ್ಬಳು ಮನೆಯಿಲ್ಲ‌ ವಾಸ ಮಾಡಲಿಕ್ಕೆ ಎಂದು ಕಣ್ಣೀರು ಹಾಕಿದ್ದಾಳೆ.  2019 ರಲ್ಲಿ ಮಳೆಗೆ ಬಿದ್ದಿರುವ ಪಾಳು ಮನೆಯಲ್ಲಿ ವಾಸ ಮಾಡುತ್ತಿರುವ ಬಡ ಕುಟುಂಬಗಳು ಸರಕಾರದ ಪರಿಹಾರದ ಆಯ್ಕೆ ಪ್ರಕಾರ "ಎ" ಗ್ರೇಡ್ ಆಗಬೇಕಿತ್ತು, ಆದರೆ 'ಸಿ' ಗ್ರೇಡ್ ಹಾಕಿ ಕೇವಲ 50 ಸಾವಿರ ಪರಿಹಾರ ಕೊಟ್ಟು ಕೈ ಕಟ್ಟಿ ಕುಳಿತ ಜಿಲ್ಲಾಡಳಿತದ ವಿರುದ್ದ ಹಿಡಿಶಾಪವನ್ನ ಹಾಕುತ್ತಿದ್ದಾರೆ. ಪಾಳು ಬಿದ್ದ ಮನೆಯಲ್ಲಿ ವಾಸ ಮಾಡುತ್ತಿರುವ ಸಂತ್ರಸ್ಥ ಮಹಿಳೆ, ಚಂದ್ರಶೇಖರ ಚೌಡಿಮನಿ, ನೀಲವ್ವ ಸಲಕಿ, ಪ್ರಭು ಬಡಿಗೇರ ,ಮೂರು ಕುಟುಂಬಗಳು ಸದ್ಯ ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣ ವಾಗಿದೆ.

ಹೆಚ್ಚಿನ ಪರಿಹಾರಕ್ಕಾಗಿ ಸರಕಾರದ ಮೊರೆ ಹೊದ ಬಡ ಕುಟುಂಬಗಳಿಗೆ ಯಾವುದೇ ಪ್ರಯೋಜನ ಆಗಿಲ್ಲ. ಅಧಿಕಾರಿಗಳು ಈ ಗ್ರಾಮದತ್ತ ಸುಳಿದಿಲ್ಲ, ಅಧಿಕಾರಿಗಳ ನಿರ್ಲಕ್ಷಕ್ಕೆ  5 ಲಕ್ಷ ಪರಿಹಾರ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ನಮ್ಮ ಮನೆಯಲ್ಲಿ 7 ಜನ ವಾಸ ಮಾಡುತ್ತಿದ್ದೆವೆ, ಮಳೆ ಬಂದ್ರೆ ಎಲ್ಲಿ ಹೋಗೋಣ ಎಂದು ಗಳಗಳನೆ ಅತ್ತ ಮಹಿಳೆ ಕಣ್ಣೀರಿಟ್ಟಿದ್ದಾಳೆ.

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more