Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Suvarna News   | Asianet News
Published : Dec 10, 2021, 11:09 AM ISTUpdated : Dec 10, 2021, 11:18 AM IST

ಮೂಡಿಗೆರೆ (Mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout)  ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ.

ಚಿಕ್ಕಮಗಳೂರು (ಡಿ. 10): 2019 ರ ಮಹಾಮಳೆ (Rain) ಮಲೆನಾಡಿಗರ ಬಹುತೇಕ ಜನರ ಬದುಕನ್ನೇ ಅಲ್ಲೋಲ-ಕಲ್ಲೋಲವಾಗಿಸಿತ್ತು. ಅದೆಷ್ಟೋ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ  ನಿರಾಶ್ರಿತರಿಗೆ ಸರ್ಕಾರ ಬದುಕು ಕಟ್ಟಿಕೊಡುವ ಜವಾಬ್ದಾರಿ ಹೊತ್ತಿತ್ತು. ಕೆಲವರಿಗೆ ಮನೆ ಕಟ್ಟಿ ಕೊಡಲು ಜಾಗವನ್ನ (Land) ನೀಡಿತ್ತಾದರೂ ಈವರೆಗೆ ಅಲ್ಲಿ ವಾಸ ಮಾಡ್ತಿರೋ ಜನರಿಗೆ ಮೂಲಸೌಕರ್ಯವನ್ನೇ ನೀಡಿಲ್ಲ.

ಮೂಡಿಗೆರೆ (mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout) ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ. 2019ರಲ್ಲಿ ಮನೆಯನ್ನ ಕಳೆದುಕೊಂಡ ಮಧುಗುಂಡಿ, ದುರ್ಗದಹಳ್ಳಿ, ಬಿದರುತಳ, ಸುಂಕಸಾಲೆ ಗ್ರಾಮದ 40 ಸಂತ್ರಸ್ಥರಿಗೆ ಈ ಬಡಾವಣೆಯಲ್ಲಿ ಸರ್ಕಾರ ನಿವೇಶನ ನೀಡಿದೆ.

5 ಲಕ್ಷ ರೂಪಾಯಿ ಕೊಟ್ಟು ಮನೆ ಕಟ್ಟಿಕೊಳ್ಳಲು ನೆರವಾಗಿದೆ. ಅದೇನೋ ಸರಿ. ಆದ್ರೆ, ಮನೆ ಕಟ್ಟಿಕೊಳ್ಳಲು 5 ಲಕ್ಷ ಸಾಲದಿದ್ರು ಹೇಗೋ ಸಾಲ-ಸೋಲ ಮಾಡಿ ಸಂತ್ರಸ್ಥರು ಮನೆ ಕಟ್ಟಿ ಕೊಂಡಿದ್ದಾರೆ. ಆದ್ರೆ, ಮನೆ ಕಟ್ಟಿಕೊಂಡರೂ ಅಲ್ಲಿ ನೆಮ್ಮದಿಯಾಗಿ ವಾಸ ಮಾಡಲು ಆಗುತ್ತಿಲ್ಲ. ಯಾಕಂದ್ರೆ, ನೀರಿನ ಸೌಲಭ್ಯವಿಲ್ಲ. ವಿದ್ಯುತ್ ಕೊಟ್ಟಿಲ್ಲ. ಚರಂಡಿ ವ್ಯವಸ್ಥೆಯೂ ಇಲ್ಲ. ಯಾವುದೇ ಮೂಲ ಸೌಕರ್ಯವಿಲ್ಲದೇ  (Basic Amenities) ಮನೆ ಕಟ್ಟಿಕೊಂಡಿಡೋ ಜನ ನಿತ್ಯ ಪರದಾಡುವಂತಾಗಿದೆ.  ತಮ್ಮ ಪರಿಸ್ಥಿತಿ ಬಗ್ಗೆ ಜನ ಸಂಬಂಧಪಟ್ಟವರ ಗಮನಕ್ಕೆ ತಂದ್ರು ಸಂಬಂಧಪಟ್ಟವರು ಸಂಬಂಧವಿಲ್ಲದಂತಿದ್ದಾರೆ ಅಂತ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. 

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more