Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Suvarna News   | Asianet News
Published : Dec 10, 2021, 11:09 AM ISTUpdated : Dec 10, 2021, 11:18 AM IST

ಮೂಡಿಗೆರೆ (Mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout)  ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ.

ಚಿಕ್ಕಮಗಳೂರು (ಡಿ. 10): 2019 ರ ಮಹಾಮಳೆ (Rain) ಮಲೆನಾಡಿಗರ ಬಹುತೇಕ ಜನರ ಬದುಕನ್ನೇ ಅಲ್ಲೋಲ-ಕಲ್ಲೋಲವಾಗಿಸಿತ್ತು. ಅದೆಷ್ಟೋ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ  ನಿರಾಶ್ರಿತರಿಗೆ ಸರ್ಕಾರ ಬದುಕು ಕಟ್ಟಿಕೊಡುವ ಜವಾಬ್ದಾರಿ ಹೊತ್ತಿತ್ತು. ಕೆಲವರಿಗೆ ಮನೆ ಕಟ್ಟಿ ಕೊಡಲು ಜಾಗವನ್ನ (Land) ನೀಡಿತ್ತಾದರೂ ಈವರೆಗೆ ಅಲ್ಲಿ ವಾಸ ಮಾಡ್ತಿರೋ ಜನರಿಗೆ ಮೂಲಸೌಕರ್ಯವನ್ನೇ ನೀಡಿಲ್ಲ.

ಮೂಡಿಗೆರೆ (mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout) ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ. 2019ರಲ್ಲಿ ಮನೆಯನ್ನ ಕಳೆದುಕೊಂಡ ಮಧುಗುಂಡಿ, ದುರ್ಗದಹಳ್ಳಿ, ಬಿದರುತಳ, ಸುಂಕಸಾಲೆ ಗ್ರಾಮದ 40 ಸಂತ್ರಸ್ಥರಿಗೆ ಈ ಬಡಾವಣೆಯಲ್ಲಿ ಸರ್ಕಾರ ನಿವೇಶನ ನೀಡಿದೆ.

5 ಲಕ್ಷ ರೂಪಾಯಿ ಕೊಟ್ಟು ಮನೆ ಕಟ್ಟಿಕೊಳ್ಳಲು ನೆರವಾಗಿದೆ. ಅದೇನೋ ಸರಿ. ಆದ್ರೆ, ಮನೆ ಕಟ್ಟಿಕೊಳ್ಳಲು 5 ಲಕ್ಷ ಸಾಲದಿದ್ರು ಹೇಗೋ ಸಾಲ-ಸೋಲ ಮಾಡಿ ಸಂತ್ರಸ್ಥರು ಮನೆ ಕಟ್ಟಿ ಕೊಂಡಿದ್ದಾರೆ. ಆದ್ರೆ, ಮನೆ ಕಟ್ಟಿಕೊಂಡರೂ ಅಲ್ಲಿ ನೆಮ್ಮದಿಯಾಗಿ ವಾಸ ಮಾಡಲು ಆಗುತ್ತಿಲ್ಲ. ಯಾಕಂದ್ರೆ, ನೀರಿನ ಸೌಲಭ್ಯವಿಲ್ಲ. ವಿದ್ಯುತ್ ಕೊಟ್ಟಿಲ್ಲ. ಚರಂಡಿ ವ್ಯವಸ್ಥೆಯೂ ಇಲ್ಲ. ಯಾವುದೇ ಮೂಲ ಸೌಕರ್ಯವಿಲ್ಲದೇ  (Basic Amenities) ಮನೆ ಕಟ್ಟಿಕೊಂಡಿಡೋ ಜನ ನಿತ್ಯ ಪರದಾಡುವಂತಾಗಿದೆ.  ತಮ್ಮ ಪರಿಸ್ಥಿತಿ ಬಗ್ಗೆ ಜನ ಸಂಬಂಧಪಟ್ಟವರ ಗಮನಕ್ಕೆ ತಂದ್ರು ಸಂಬಂಧಪಟ್ಟವರು ಸಂಬಂಧವಿಲ್ಲದಂತಿದ್ದಾರೆ ಅಂತ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more