Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Published : Dec 10, 2021, 11:09 AM ISTUpdated : Dec 10, 2021, 11:18 AM IST

ಮೂಡಿಗೆರೆ (Mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout)  ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ.

ಚಿಕ್ಕಮಗಳೂರು (ಡಿ. 10): 2019 ರ ಮಹಾಮಳೆ (Rain) ಮಲೆನಾಡಿಗರ ಬಹುತೇಕ ಜನರ ಬದುಕನ್ನೇ ಅಲ್ಲೋಲ-ಕಲ್ಲೋಲವಾಗಿಸಿತ್ತು. ಅದೆಷ್ಟೋ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ  ನಿರಾಶ್ರಿತರಿಗೆ ಸರ್ಕಾರ ಬದುಕು ಕಟ್ಟಿಕೊಡುವ ಜವಾಬ್ದಾರಿ ಹೊತ್ತಿತ್ತು. ಕೆಲವರಿಗೆ ಮನೆ ಕಟ್ಟಿ ಕೊಡಲು ಜಾಗವನ್ನ (Land) ನೀಡಿತ್ತಾದರೂ ಈವರೆಗೆ ಅಲ್ಲಿ ವಾಸ ಮಾಡ್ತಿರೋ ಜನರಿಗೆ ಮೂಲಸೌಕರ್ಯವನ್ನೇ ನೀಡಿಲ್ಲ.

ಮೂಡಿಗೆರೆ (mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout) ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ. 2019ರಲ್ಲಿ ಮನೆಯನ್ನ ಕಳೆದುಕೊಂಡ ಮಧುಗುಂಡಿ, ದುರ್ಗದಹಳ್ಳಿ, ಬಿದರುತಳ, ಸುಂಕಸಾಲೆ ಗ್ರಾಮದ 40 ಸಂತ್ರಸ್ಥರಿಗೆ ಈ ಬಡಾವಣೆಯಲ್ಲಿ ಸರ್ಕಾರ ನಿವೇಶನ ನೀಡಿದೆ.

5 ಲಕ್ಷ ರೂಪಾಯಿ ಕೊಟ್ಟು ಮನೆ ಕಟ್ಟಿಕೊಳ್ಳಲು ನೆರವಾಗಿದೆ. ಅದೇನೋ ಸರಿ. ಆದ್ರೆ, ಮನೆ ಕಟ್ಟಿಕೊಳ್ಳಲು 5 ಲಕ್ಷ ಸಾಲದಿದ್ರು ಹೇಗೋ ಸಾಲ-ಸೋಲ ಮಾಡಿ ಸಂತ್ರಸ್ಥರು ಮನೆ ಕಟ್ಟಿ ಕೊಂಡಿದ್ದಾರೆ. ಆದ್ರೆ, ಮನೆ ಕಟ್ಟಿಕೊಂಡರೂ ಅಲ್ಲಿ ನೆಮ್ಮದಿಯಾಗಿ ವಾಸ ಮಾಡಲು ಆಗುತ್ತಿಲ್ಲ. ಯಾಕಂದ್ರೆ, ನೀರಿನ ಸೌಲಭ್ಯವಿಲ್ಲ. ವಿದ್ಯುತ್ ಕೊಟ್ಟಿಲ್ಲ. ಚರಂಡಿ ವ್ಯವಸ್ಥೆಯೂ ಇಲ್ಲ. ಯಾವುದೇ ಮೂಲ ಸೌಕರ್ಯವಿಲ್ಲದೇ  (Basic Amenities) ಮನೆ ಕಟ್ಟಿಕೊಂಡಿಡೋ ಜನ ನಿತ್ಯ ಪರದಾಡುವಂತಾಗಿದೆ.  ತಮ್ಮ ಪರಿಸ್ಥಿತಿ ಬಗ್ಗೆ ಜನ ಸಂಬಂಧಪಟ್ಟವರ ಗಮನಕ್ಕೆ ತಂದ್ರು ಸಂಬಂಧಪಟ್ಟವರು ಸಂಬಂಧವಿಲ್ಲದಂತಿದ್ದಾರೆ ಅಂತ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more