Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Suvarna News   | Asianet News
Published : Dec 10, 2021, 11:09 AM ISTUpdated : Dec 10, 2021, 11:18 AM IST

ಮೂಡಿಗೆರೆ (Mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout)  ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ.

ಚಿಕ್ಕಮಗಳೂರು (ಡಿ. 10): 2019 ರ ಮಹಾಮಳೆ (Rain) ಮಲೆನಾಡಿಗರ ಬಹುತೇಕ ಜನರ ಬದುಕನ್ನೇ ಅಲ್ಲೋಲ-ಕಲ್ಲೋಲವಾಗಿಸಿತ್ತು. ಅದೆಷ್ಟೋ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ  ನಿರಾಶ್ರಿತರಿಗೆ ಸರ್ಕಾರ ಬದುಕು ಕಟ್ಟಿಕೊಡುವ ಜವಾಬ್ದಾರಿ ಹೊತ್ತಿತ್ತು. ಕೆಲವರಿಗೆ ಮನೆ ಕಟ್ಟಿ ಕೊಡಲು ಜಾಗವನ್ನ (Land) ನೀಡಿತ್ತಾದರೂ ಈವರೆಗೆ ಅಲ್ಲಿ ವಾಸ ಮಾಡ್ತಿರೋ ಜನರಿಗೆ ಮೂಲಸೌಕರ್ಯವನ್ನೇ ನೀಡಿಲ್ಲ.

ಮೂಡಿಗೆರೆ (mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout) ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ. 2019ರಲ್ಲಿ ಮನೆಯನ್ನ ಕಳೆದುಕೊಂಡ ಮಧುಗುಂಡಿ, ದುರ್ಗದಹಳ್ಳಿ, ಬಿದರುತಳ, ಸುಂಕಸಾಲೆ ಗ್ರಾಮದ 40 ಸಂತ್ರಸ್ಥರಿಗೆ ಈ ಬಡಾವಣೆಯಲ್ಲಿ ಸರ್ಕಾರ ನಿವೇಶನ ನೀಡಿದೆ.

5 ಲಕ್ಷ ರೂಪಾಯಿ ಕೊಟ್ಟು ಮನೆ ಕಟ್ಟಿಕೊಳ್ಳಲು ನೆರವಾಗಿದೆ. ಅದೇನೋ ಸರಿ. ಆದ್ರೆ, ಮನೆ ಕಟ್ಟಿಕೊಳ್ಳಲು 5 ಲಕ್ಷ ಸಾಲದಿದ್ರು ಹೇಗೋ ಸಾಲ-ಸೋಲ ಮಾಡಿ ಸಂತ್ರಸ್ಥರು ಮನೆ ಕಟ್ಟಿ ಕೊಂಡಿದ್ದಾರೆ. ಆದ್ರೆ, ಮನೆ ಕಟ್ಟಿಕೊಂಡರೂ ಅಲ್ಲಿ ನೆಮ್ಮದಿಯಾಗಿ ವಾಸ ಮಾಡಲು ಆಗುತ್ತಿಲ್ಲ. ಯಾಕಂದ್ರೆ, ನೀರಿನ ಸೌಲಭ್ಯವಿಲ್ಲ. ವಿದ್ಯುತ್ ಕೊಟ್ಟಿಲ್ಲ. ಚರಂಡಿ ವ್ಯವಸ್ಥೆಯೂ ಇಲ್ಲ. ಯಾವುದೇ ಮೂಲ ಸೌಕರ್ಯವಿಲ್ಲದೇ  (Basic Amenities) ಮನೆ ಕಟ್ಟಿಕೊಂಡಿಡೋ ಜನ ನಿತ್ಯ ಪರದಾಡುವಂತಾಗಿದೆ.  ತಮ್ಮ ಪರಿಸ್ಥಿತಿ ಬಗ್ಗೆ ಜನ ಸಂಬಂಧಪಟ್ಟವರ ಗಮನಕ್ಕೆ ತಂದ್ರು ಸಂಬಂಧಪಟ್ಟವರು ಸಂಬಂಧವಿಲ್ಲದಂತಿದ್ದಾರೆ ಅಂತ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. 

 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more