Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Suvarna News   | Asianet News
Published : Dec 10, 2021, 11:09 AM ISTUpdated : Dec 10, 2021, 11:18 AM IST

ಮೂಡಿಗೆರೆ (Mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout)  ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ.

ಚಿಕ್ಕಮಗಳೂರು (ಡಿ. 10): 2019 ರ ಮಹಾಮಳೆ (Rain) ಮಲೆನಾಡಿಗರ ಬಹುತೇಕ ಜನರ ಬದುಕನ್ನೇ ಅಲ್ಲೋಲ-ಕಲ್ಲೋಲವಾಗಿಸಿತ್ತು. ಅದೆಷ್ಟೋ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ  ನಿರಾಶ್ರಿತರಿಗೆ ಸರ್ಕಾರ ಬದುಕು ಕಟ್ಟಿಕೊಡುವ ಜವಾಬ್ದಾರಿ ಹೊತ್ತಿತ್ತು. ಕೆಲವರಿಗೆ ಮನೆ ಕಟ್ಟಿ ಕೊಡಲು ಜಾಗವನ್ನ (Land) ನೀಡಿತ್ತಾದರೂ ಈವರೆಗೆ ಅಲ್ಲಿ ವಾಸ ಮಾಡ್ತಿರೋ ಜನರಿಗೆ ಮೂಲಸೌಕರ್ಯವನ್ನೇ ನೀಡಿಲ್ಲ.

ಮೂಡಿಗೆರೆ (mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout) ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ. 2019ರಲ್ಲಿ ಮನೆಯನ್ನ ಕಳೆದುಕೊಂಡ ಮಧುಗುಂಡಿ, ದುರ್ಗದಹಳ್ಳಿ, ಬಿದರುತಳ, ಸುಂಕಸಾಲೆ ಗ್ರಾಮದ 40 ಸಂತ್ರಸ್ಥರಿಗೆ ಈ ಬಡಾವಣೆಯಲ್ಲಿ ಸರ್ಕಾರ ನಿವೇಶನ ನೀಡಿದೆ.

5 ಲಕ್ಷ ರೂಪಾಯಿ ಕೊಟ್ಟು ಮನೆ ಕಟ್ಟಿಕೊಳ್ಳಲು ನೆರವಾಗಿದೆ. ಅದೇನೋ ಸರಿ. ಆದ್ರೆ, ಮನೆ ಕಟ್ಟಿಕೊಳ್ಳಲು 5 ಲಕ್ಷ ಸಾಲದಿದ್ರು ಹೇಗೋ ಸಾಲ-ಸೋಲ ಮಾಡಿ ಸಂತ್ರಸ್ಥರು ಮನೆ ಕಟ್ಟಿ ಕೊಂಡಿದ್ದಾರೆ. ಆದ್ರೆ, ಮನೆ ಕಟ್ಟಿಕೊಂಡರೂ ಅಲ್ಲಿ ನೆಮ್ಮದಿಯಾಗಿ ವಾಸ ಮಾಡಲು ಆಗುತ್ತಿಲ್ಲ. ಯಾಕಂದ್ರೆ, ನೀರಿನ ಸೌಲಭ್ಯವಿಲ್ಲ. ವಿದ್ಯುತ್ ಕೊಟ್ಟಿಲ್ಲ. ಚರಂಡಿ ವ್ಯವಸ್ಥೆಯೂ ಇಲ್ಲ. ಯಾವುದೇ ಮೂಲ ಸೌಕರ್ಯವಿಲ್ಲದೇ  (Basic Amenities) ಮನೆ ಕಟ್ಟಿಕೊಂಡಿಡೋ ಜನ ನಿತ್ಯ ಪರದಾಡುವಂತಾಗಿದೆ.  ತಮ್ಮ ಪರಿಸ್ಥಿತಿ ಬಗ್ಗೆ ಜನ ಸಂಬಂಧಪಟ್ಟವರ ಗಮನಕ್ಕೆ ತಂದ್ರು ಸಂಬಂಧಪಟ್ಟವರು ಸಂಬಂಧವಿಲ್ಲದಂತಿದ್ದಾರೆ ಅಂತ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more