Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Suvarna News   | Asianet News
Published : Dec 10, 2021, 11:09 AM ISTUpdated : Dec 10, 2021, 11:18 AM IST

ಮೂಡಿಗೆರೆ (Mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout)  ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ.

ಚಿಕ್ಕಮಗಳೂರು (ಡಿ. 10): 2019 ರ ಮಹಾಮಳೆ (Rain) ಮಲೆನಾಡಿಗರ ಬಹುತೇಕ ಜನರ ಬದುಕನ್ನೇ ಅಲ್ಲೋಲ-ಕಲ್ಲೋಲವಾಗಿಸಿತ್ತು. ಅದೆಷ್ಟೋ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ  ನಿರಾಶ್ರಿತರಿಗೆ ಸರ್ಕಾರ ಬದುಕು ಕಟ್ಟಿಕೊಡುವ ಜವಾಬ್ದಾರಿ ಹೊತ್ತಿತ್ತು. ಕೆಲವರಿಗೆ ಮನೆ ಕಟ್ಟಿ ಕೊಡಲು ಜಾಗವನ್ನ (Land) ನೀಡಿತ್ತಾದರೂ ಈವರೆಗೆ ಅಲ್ಲಿ ವಾಸ ಮಾಡ್ತಿರೋ ಜನರಿಗೆ ಮೂಲಸೌಕರ್ಯವನ್ನೇ ನೀಡಿಲ್ಲ.

ಮೂಡಿಗೆರೆ (mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout) ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ. 2019ರಲ್ಲಿ ಮನೆಯನ್ನ ಕಳೆದುಕೊಂಡ ಮಧುಗುಂಡಿ, ದುರ್ಗದಹಳ್ಳಿ, ಬಿದರುತಳ, ಸುಂಕಸಾಲೆ ಗ್ರಾಮದ 40 ಸಂತ್ರಸ್ಥರಿಗೆ ಈ ಬಡಾವಣೆಯಲ್ಲಿ ಸರ್ಕಾರ ನಿವೇಶನ ನೀಡಿದೆ.

5 ಲಕ್ಷ ರೂಪಾಯಿ ಕೊಟ್ಟು ಮನೆ ಕಟ್ಟಿಕೊಳ್ಳಲು ನೆರವಾಗಿದೆ. ಅದೇನೋ ಸರಿ. ಆದ್ರೆ, ಮನೆ ಕಟ್ಟಿಕೊಳ್ಳಲು 5 ಲಕ್ಷ ಸಾಲದಿದ್ರು ಹೇಗೋ ಸಾಲ-ಸೋಲ ಮಾಡಿ ಸಂತ್ರಸ್ಥರು ಮನೆ ಕಟ್ಟಿ ಕೊಂಡಿದ್ದಾರೆ. ಆದ್ರೆ, ಮನೆ ಕಟ್ಟಿಕೊಂಡರೂ ಅಲ್ಲಿ ನೆಮ್ಮದಿಯಾಗಿ ವಾಸ ಮಾಡಲು ಆಗುತ್ತಿಲ್ಲ. ಯಾಕಂದ್ರೆ, ನೀರಿನ ಸೌಲಭ್ಯವಿಲ್ಲ. ವಿದ್ಯುತ್ ಕೊಟ್ಟಿಲ್ಲ. ಚರಂಡಿ ವ್ಯವಸ್ಥೆಯೂ ಇಲ್ಲ. ಯಾವುದೇ ಮೂಲ ಸೌಕರ್ಯವಿಲ್ಲದೇ  (Basic Amenities) ಮನೆ ಕಟ್ಟಿಕೊಂಡಿಡೋ ಜನ ನಿತ್ಯ ಪರದಾಡುವಂತಾಗಿದೆ.  ತಮ್ಮ ಪರಿಸ್ಥಿತಿ ಬಗ್ಗೆ ಜನ ಸಂಬಂಧಪಟ್ಟವರ ಗಮನಕ್ಕೆ ತಂದ್ರು ಸಂಬಂಧಪಟ್ಟವರು ಸಂಬಂಧವಿಲ್ಲದಂತಿದ್ದಾರೆ ಅಂತ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more