ವಿಶ್ವನಾಥ್ ವರಿ ಮಾಡ್ಬೇಡ ಎಂದ್ರು ಸಿಎಂ, ಸೋಲಿನ ಬಗ್ಗೆ ಹಳ್ಳಿಹಕ್ಕಿ ಮಾತು..!

ವಿಶ್ವನಾಥ್ ವರಿ ಮಾಡ್ಬೇಡ ಎಂದ್ರು ಸಿಎಂ, ಸೋಲಿನ ಬಗ್ಗೆ ಹಳ್ಳಿಹಕ್ಕಿ ಮಾತು..!

Published : Dec 09, 2019, 04:08 PM IST

ಎಲ್ಲ ಅಭ್ಯರ್ಥಿಗಳೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಕೆಲವೊಮ್ಮೆ ನಿರೀಕ್ಷೆ ಹುಸಿಯಾಗುತ್ತದೆ. ಕೆಲವೊಮ್ಮೆ ಒಳ್ಳೆಯದಾಗುತ್ತದೆ. ರಾಜಕೀಯದಲ್ಲಿ ಇದು ಸಹಜ. ಚುನಾವಣೆಯಲ್ಲಂತೂ ಇದು ಸಾಮಾನ್ಯ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಹೇಳಿದ್ದಾರೆ.

ಮೈಸೂರು(ಡಿ.09): ಎಲ್ಲ ಅಭ್ಯರ್ಥಿಗಳೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಕೆಲವೊಮ್ಮೆ ನಿರೀಕ್ಷೆ ಹುಸಿಯಾಗುತ್ತದೆ. ಕೆಲವೊಮ್ಮೆ ಒಳ್ಳೆಯದಾಗುತ್ತದೆ. ರಾಜಕೀಯದಲ್ಲಿ ಇದು ಸಹಜ. ಚುನಾವಣೆಯಲ್ಲಂತೂ ಇದು ಸಾಮಾನ್ಯ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೈತ್ರಿ ಸರ್ಕಾರದ ಪತನವೇ ಸೋಲಿಗೆ ಪ್ರಮುಖ ಕಾರಣ. ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಮೈತ್ರಿ ಸರ್ಕಾರದ ಪತನ ಗಂಭೀರವಾಗಿ ತೆಗೆದುಕೊಂಡರು. ಮೈತ್ರಿ ಸರ್ಕಾರದ ಸೋಲಿನ ಹಿನ್ನೆಲೆ ನನ್ನ ಸೋಲಿಗೆ ಕಾರಣ. ಇದು ಚುನಾವಣೆ. ಏನಾಗುತ್ತದೆಯೋ ಅದನ್ನು ಒಪ್ಪಿಕೊಳ್ಳಬೇಕು ಎಂದು ಎಚ್. ವಿಶ್ವನಾಥ್ ಹೇಳಿದ್ದಾರೆ.

ಬೈ ಎಲೆಕ್ಷನ್ ರಿಸಲ್ಟ್: ಅನರ್ಹರು ಈಗ ಅರ್ಹರು, ಸೋತ್ರೂ ವಿಶ್ವನಾಥ್‌ಗೆ ಸಿಕ್ತು ಭರವಸೆ

ದೊಡ್ಡ ಅಂತರದಲ್ಲಿ ವಿಶ್ವನಾಥ್ ಸೋಲನುಭವಿಸುವುದರ ಹಿಂದೆ ಜಿ.ಟಿ. ದೇವೇಗೌಡರ ಪಾತ್ರ ದೊಡ್ಡದು ಎನ್ನುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಿಟಿಡಿ ಜೆಡಿಎಸ್‌ನಲ್ಲಿದ್ದಾರೆ. ಅಲ್ಲಿದ್ದುಕೊಂಡು ಈ ಕೆಲಸ ಮಾಡಬಾರದಾಗಿತ್ತು. ಜಿಟಿಡಿ ಪಕ್ಷ ದ್ರೋಹ ಮಾಡಿದ್ದಾರೆ. ನಾವು ರಾಜೀನಾಮೆ ಕೊಟ್ಟು ನಮ್ಮ ದಾರಿ ಹಿಡಿದೆವು. ಆದ್ರೆ ಅವರು ಪಕ್ಷದೊಳಗಿದ್ದುಕೊಂಡೇ ಕೆಲಸ ಮಾಡಿದ್ರು. ಅವರ ದಳ್ಳುರಿ, ದ್ವೇಷ ಸೋಲಿಗೆ ಕಾರಣವಾಗಿದೆ.

ಮೈಸೂರು: 'ತೊಡೆ ತಟ್ಟಿ ಬಿದ್ದ ಸಿದ್ದರಾಮಯ್ಯ'..!.

ಸಿಎಂ ಮಾತನಾಡಿದ್ದಾರೆ. ವಿಶ್ವನಾಥ್ ಏನೂ ವರಿ ಮಾಡ್ಬೇಡ. ನಾನು ನಿಮ್ಮ ಜೊತೆ ಇದ್ದೇನೆ. ನಿಮ್ಮ ಕ್ಷೇತ್ರದ ಕೆಲಸ ಮಾಡು ಎಂದಿದ್ದಾರೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ನನ್ನನ್ನು ಮುಗಿಸೋದಿಕ್ಕಾಗಲ್ಲ. ನನ್ನನ್ನು ಮುಗಿಸಬೇಕಾಗಿದ್ದರೆ ಜನ ಮುಗಿಸಬೇಕು ಎಂದಿದ್ದಾರೆ. ರಾಜಕೀಯ, ಸಾರ್ವಜನಿಕ ಜೀವನ. ಜನರ ಕಷ್ಟ, ಸುಖ ಸ್ಪಂದನೆ, ಅಧಿಕಾರ ಇದ್ದರೂ, ಇರದೇ ಇದ್ದರೂ ಸದಾ ಜನರ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!