ವಿಶ್ವನಾಥ್ ವರಿ ಮಾಡ್ಬೇಡ ಎಂದ್ರು ಸಿಎಂ, ಸೋಲಿನ ಬಗ್ಗೆ ಹಳ್ಳಿಹಕ್ಕಿ ಮಾತು..!

ವಿಶ್ವನಾಥ್ ವರಿ ಮಾಡ್ಬೇಡ ಎಂದ್ರು ಸಿಎಂ, ಸೋಲಿನ ಬಗ್ಗೆ ಹಳ್ಳಿಹಕ್ಕಿ ಮಾತು..!

Published : Dec 09, 2019, 04:08 PM IST

ಎಲ್ಲ ಅಭ್ಯರ್ಥಿಗಳೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಕೆಲವೊಮ್ಮೆ ನಿರೀಕ್ಷೆ ಹುಸಿಯಾಗುತ್ತದೆ. ಕೆಲವೊಮ್ಮೆ ಒಳ್ಳೆಯದಾಗುತ್ತದೆ. ರಾಜಕೀಯದಲ್ಲಿ ಇದು ಸಹಜ. ಚುನಾವಣೆಯಲ್ಲಂತೂ ಇದು ಸಾಮಾನ್ಯ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಹೇಳಿದ್ದಾರೆ.

ಮೈಸೂರು(ಡಿ.09): ಎಲ್ಲ ಅಭ್ಯರ್ಥಿಗಳೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಕೆಲವೊಮ್ಮೆ ನಿರೀಕ್ಷೆ ಹುಸಿಯಾಗುತ್ತದೆ. ಕೆಲವೊಮ್ಮೆ ಒಳ್ಳೆಯದಾಗುತ್ತದೆ. ರಾಜಕೀಯದಲ್ಲಿ ಇದು ಸಹಜ. ಚುನಾವಣೆಯಲ್ಲಂತೂ ಇದು ಸಾಮಾನ್ಯ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೈತ್ರಿ ಸರ್ಕಾರದ ಪತನವೇ ಸೋಲಿಗೆ ಪ್ರಮುಖ ಕಾರಣ. ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಮೈತ್ರಿ ಸರ್ಕಾರದ ಪತನ ಗಂಭೀರವಾಗಿ ತೆಗೆದುಕೊಂಡರು. ಮೈತ್ರಿ ಸರ್ಕಾರದ ಸೋಲಿನ ಹಿನ್ನೆಲೆ ನನ್ನ ಸೋಲಿಗೆ ಕಾರಣ. ಇದು ಚುನಾವಣೆ. ಏನಾಗುತ್ತದೆಯೋ ಅದನ್ನು ಒಪ್ಪಿಕೊಳ್ಳಬೇಕು ಎಂದು ಎಚ್. ವಿಶ್ವನಾಥ್ ಹೇಳಿದ್ದಾರೆ.

ಬೈ ಎಲೆಕ್ಷನ್ ರಿಸಲ್ಟ್: ಅನರ್ಹರು ಈಗ ಅರ್ಹರು, ಸೋತ್ರೂ ವಿಶ್ವನಾಥ್‌ಗೆ ಸಿಕ್ತು ಭರವಸೆ

ದೊಡ್ಡ ಅಂತರದಲ್ಲಿ ವಿಶ್ವನಾಥ್ ಸೋಲನುಭವಿಸುವುದರ ಹಿಂದೆ ಜಿ.ಟಿ. ದೇವೇಗೌಡರ ಪಾತ್ರ ದೊಡ್ಡದು ಎನ್ನುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಿಟಿಡಿ ಜೆಡಿಎಸ್‌ನಲ್ಲಿದ್ದಾರೆ. ಅಲ್ಲಿದ್ದುಕೊಂಡು ಈ ಕೆಲಸ ಮಾಡಬಾರದಾಗಿತ್ತು. ಜಿಟಿಡಿ ಪಕ್ಷ ದ್ರೋಹ ಮಾಡಿದ್ದಾರೆ. ನಾವು ರಾಜೀನಾಮೆ ಕೊಟ್ಟು ನಮ್ಮ ದಾರಿ ಹಿಡಿದೆವು. ಆದ್ರೆ ಅವರು ಪಕ್ಷದೊಳಗಿದ್ದುಕೊಂಡೇ ಕೆಲಸ ಮಾಡಿದ್ರು. ಅವರ ದಳ್ಳುರಿ, ದ್ವೇಷ ಸೋಲಿಗೆ ಕಾರಣವಾಗಿದೆ.

ಮೈಸೂರು: 'ತೊಡೆ ತಟ್ಟಿ ಬಿದ್ದ ಸಿದ್ದರಾಮಯ್ಯ'..!.

ಸಿಎಂ ಮಾತನಾಡಿದ್ದಾರೆ. ವಿಶ್ವನಾಥ್ ಏನೂ ವರಿ ಮಾಡ್ಬೇಡ. ನಾನು ನಿಮ್ಮ ಜೊತೆ ಇದ್ದೇನೆ. ನಿಮ್ಮ ಕ್ಷೇತ್ರದ ಕೆಲಸ ಮಾಡು ಎಂದಿದ್ದಾರೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ನನ್ನನ್ನು ಮುಗಿಸೋದಿಕ್ಕಾಗಲ್ಲ. ನನ್ನನ್ನು ಮುಗಿಸಬೇಕಾಗಿದ್ದರೆ ಜನ ಮುಗಿಸಬೇಕು ಎಂದಿದ್ದಾರೆ. ರಾಜಕೀಯ, ಸಾರ್ವಜನಿಕ ಜೀವನ. ಜನರ ಕಷ್ಟ, ಸುಖ ಸ್ಪಂದನೆ, ಅಧಿಕಾರ ಇದ್ದರೂ, ಇರದೇ ಇದ್ದರೂ ಸದಾ ಜನರ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!