ವಿಶ್ವನಾಥ್ ವರಿ ಮಾಡ್ಬೇಡ ಎಂದ್ರು ಸಿಎಂ, ಸೋಲಿನ ಬಗ್ಗೆ ಹಳ್ಳಿಹಕ್ಕಿ ಮಾತು..!

ವಿಶ್ವನಾಥ್ ವರಿ ಮಾಡ್ಬೇಡ ಎಂದ್ರು ಸಿಎಂ, ಸೋಲಿನ ಬಗ್ಗೆ ಹಳ್ಳಿಹಕ್ಕಿ ಮಾತು..!

Published : Dec 09, 2019, 04:08 PM IST

ಎಲ್ಲ ಅಭ್ಯರ್ಥಿಗಳೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಕೆಲವೊಮ್ಮೆ ನಿರೀಕ್ಷೆ ಹುಸಿಯಾಗುತ್ತದೆ. ಕೆಲವೊಮ್ಮೆ ಒಳ್ಳೆಯದಾಗುತ್ತದೆ. ರಾಜಕೀಯದಲ್ಲಿ ಇದು ಸಹಜ. ಚುನಾವಣೆಯಲ್ಲಂತೂ ಇದು ಸಾಮಾನ್ಯ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಹೇಳಿದ್ದಾರೆ.

ಮೈಸೂರು(ಡಿ.09): ಎಲ್ಲ ಅಭ್ಯರ್ಥಿಗಳೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಕೆಲವೊಮ್ಮೆ ನಿರೀಕ್ಷೆ ಹುಸಿಯಾಗುತ್ತದೆ. ಕೆಲವೊಮ್ಮೆ ಒಳ್ಳೆಯದಾಗುತ್ತದೆ. ರಾಜಕೀಯದಲ್ಲಿ ಇದು ಸಹಜ. ಚುನಾವಣೆಯಲ್ಲಂತೂ ಇದು ಸಾಮಾನ್ಯ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೈತ್ರಿ ಸರ್ಕಾರದ ಪತನವೇ ಸೋಲಿಗೆ ಪ್ರಮುಖ ಕಾರಣ. ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಮೈತ್ರಿ ಸರ್ಕಾರದ ಪತನ ಗಂಭೀರವಾಗಿ ತೆಗೆದುಕೊಂಡರು. ಮೈತ್ರಿ ಸರ್ಕಾರದ ಸೋಲಿನ ಹಿನ್ನೆಲೆ ನನ್ನ ಸೋಲಿಗೆ ಕಾರಣ. ಇದು ಚುನಾವಣೆ. ಏನಾಗುತ್ತದೆಯೋ ಅದನ್ನು ಒಪ್ಪಿಕೊಳ್ಳಬೇಕು ಎಂದು ಎಚ್. ವಿಶ್ವನಾಥ್ ಹೇಳಿದ್ದಾರೆ.

ಬೈ ಎಲೆಕ್ಷನ್ ರಿಸಲ್ಟ್: ಅನರ್ಹರು ಈಗ ಅರ್ಹರು, ಸೋತ್ರೂ ವಿಶ್ವನಾಥ್‌ಗೆ ಸಿಕ್ತು ಭರವಸೆ

ದೊಡ್ಡ ಅಂತರದಲ್ಲಿ ವಿಶ್ವನಾಥ್ ಸೋಲನುಭವಿಸುವುದರ ಹಿಂದೆ ಜಿ.ಟಿ. ದೇವೇಗೌಡರ ಪಾತ್ರ ದೊಡ್ಡದು ಎನ್ನುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಿಟಿಡಿ ಜೆಡಿಎಸ್‌ನಲ್ಲಿದ್ದಾರೆ. ಅಲ್ಲಿದ್ದುಕೊಂಡು ಈ ಕೆಲಸ ಮಾಡಬಾರದಾಗಿತ್ತು. ಜಿಟಿಡಿ ಪಕ್ಷ ದ್ರೋಹ ಮಾಡಿದ್ದಾರೆ. ನಾವು ರಾಜೀನಾಮೆ ಕೊಟ್ಟು ನಮ್ಮ ದಾರಿ ಹಿಡಿದೆವು. ಆದ್ರೆ ಅವರು ಪಕ್ಷದೊಳಗಿದ್ದುಕೊಂಡೇ ಕೆಲಸ ಮಾಡಿದ್ರು. ಅವರ ದಳ್ಳುರಿ, ದ್ವೇಷ ಸೋಲಿಗೆ ಕಾರಣವಾಗಿದೆ.

ಮೈಸೂರು: 'ತೊಡೆ ತಟ್ಟಿ ಬಿದ್ದ ಸಿದ್ದರಾಮಯ್ಯ'..!.

ಸಿಎಂ ಮಾತನಾಡಿದ್ದಾರೆ. ವಿಶ್ವನಾಥ್ ಏನೂ ವರಿ ಮಾಡ್ಬೇಡ. ನಾನು ನಿಮ್ಮ ಜೊತೆ ಇದ್ದೇನೆ. ನಿಮ್ಮ ಕ್ಷೇತ್ರದ ಕೆಲಸ ಮಾಡು ಎಂದಿದ್ದಾರೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ನನ್ನನ್ನು ಮುಗಿಸೋದಿಕ್ಕಾಗಲ್ಲ. ನನ್ನನ್ನು ಮುಗಿಸಬೇಕಾಗಿದ್ದರೆ ಜನ ಮುಗಿಸಬೇಕು ಎಂದಿದ್ದಾರೆ. ರಾಜಕೀಯ, ಸಾರ್ವಜನಿಕ ಜೀವನ. ಜನರ ಕಷ್ಟ, ಸುಖ ಸ್ಪಂದನೆ, ಅಧಿಕಾರ ಇದ್ದರೂ, ಇರದೇ ಇದ್ದರೂ ಸದಾ ಜನರ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?