Belagavi| ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ..!

Belagavi| ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ..!

Published : Nov 07, 2021, 01:54 PM ISTUpdated : Nov 07, 2021, 02:07 PM IST

*  ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಮೈನಾಬಾಯಿ ಮೂರ್ತಿ ಸ್ಥಾಪನೆ
*  ಪತಿ ಶಿವಾ ಚೌಗಲೆಯಿಂದ ಪತ್ನಿ ದಿ.ಮೈನಾಬಾಯಿ ಮೂರ್ತಿ ಸ್ಥಾಪನೆ
*  ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಾದ ಮೂರ್ತಿ
 

ಬೆಳಗಾವಿ(ನ.07):  ನಿಮೋನಿಯಾದಿಂದ(Pneumonia) ಮೃತಪಟ್ಟ(Death) ಪತ್ನಿಯ ನೆನಪಲ್ಲಿ ಪತಿ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಹೌದು, ಬೆಳಗಾವಿ(Belagavi) ನಗರದ ಶಿವಾ ಚೌಗಲೆ ಎಂಬುವರೇ ತಮ್ಮ ಹೆಂಡತಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ದಿ.ಮೈನಾಬಾಯಿ ಚೌಗಲೆ ಅವರ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದಾರೆ. ದೀಪಾವಳಿ ಹಬ್ಬದ ದಿನವೇ ಮೃತ ಪತ್ನಿಯ ಮೂರ್ತಿಯನ್ನ ಶಿವಾ ಚೌಗಲೆ ಸ್ಥಾಪನೆ ಮಾಡಿದ್ದಾರೆ. ಬೆಳಗಾವಿ ಮರಗಾಯಿ ನಗರದ ನಿವಾಸದಲ್ಲಿ ಮೂರ್ತಿ ಸ್ಥಾಪನೆಯಾಗಿದೆ. 

BJP Core Committee Meeting: ಸಿಎಂ ಬೊಮ್ಮಾಯಿ ಜೊತೆ RSS ಮುಖಂಡ ಮುಕುಂದ್ ಮಹತ್ವದ ಚರ್ಚೆ

2021ರ ಮೇ ತಿಂಗಳಲ್ಲಿ ಶಿವಾ ಚೌಗಲೆ ಹಾಗೂ ಮೈನಾಬಾಯಿ ಚೌಗಲೆಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಶಿವಾ ಚೌಗಲೆಗೆ ಕೋವಿಡ್(Covid19) ಸೋಂಕು ತಗಲಿದ್ರೆ ಪತ್ನಿ ಮೈನಾಬಾಯಿಗೆ ನಿಮೋನಿಯಾ ಜ್ವರವಿತ್ತು. ಆದರೆ ಮೈನಾಬಾಯಿ ಚೌಗುಲೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಪತ್ನಿ ನೆನೆಪು ಸದಾ ಕಾಡುತ್ತಿದ್ದರಿಂದ ಮೂರ್ತಿ(statue) ಸ್ಥಾಪನೆ ಬಗ್ಗೆ ಶಿವಾ ಚೌಗಲೆ ನಿರ್ಧಾರ ಮಾಡಿದ್ದರು. ಜ್ಯೋತಿಷಿಗಳ(Astrologer) ಸಲಹೆ ಮೇರೆಗೆ ಪತ್ನಿಯ ಮೂರ್ತಿಯನ್ನ ನಿರ್ಮಾಣ ಮಾಡಿದ್ದಾರೆ ಶಿವಾ ಚೌಗಲೆ. 

Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

ಮೈನಾಬಾಯಿ ಮೂರ್ತಿ ಸ್ಥಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಮನೆಯ ಮುಂದೆ ಪೆಂಡಾಲ್, ಬಂಧು, ಬಳಗಕ್ಕೆ ಊಟದ ವ್ಯವಸ್ಥೆ ಮಾಡಿ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ. ಮನೆಯ ಮೇಲಿನ ಕೋಣೆಯಲ್ಲಿ ಮೈನಾಬಾಯಿ ಮೂರ್ತಿ ಸ್ಥಾಪನೆಯಾಗಿದೆ. ಮೂರ್ತಿಯ ಜತೆಗೆ ಮೈನಾಬಾಯಿ ಧರಿಸುತ್ತಿದ್ದ ಒಡವೆ, ಸೀರೆ ಸೇರಿ ಎಲ್ಲಾ ವಸ್ತುಗಳು ಇಡಲು ವಾರ್ಡರೂಬ್ ವ್ಯವಸ್ಥೆಯನ್ನ ಕೂಡ ಮಾಡಿಸಲಾಗಿದೆ. ಶಿವಾ ಚೌಗಲೆ, ಮೈನಾಬಾಯಿ ಇಬ್ಬರು ಮಾಹನಗರ ಪಾಲಿಕೆ ಸದಸ್ಯರಾಗಿ ಕೆಲಸ ಮಾಡಿದ್ದರು. ಒಂದು ಅವಧಿಗೆ ಮೈನಾಬಾಯಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು. ಪತ್ನಿಯ ಹೆಸರಿನಲ್ಲಿ ಫೌಂಡೇಶನ್ ಸ್ಥಾಪನೆ‌ ಮಾಡಿ ಅಭಿವೃದ್ಧಿ ಕಾರ್ಯ ನಡೆಸಲು ಪತಿ ಶಿವಾ ಚೌಗಲೆ ನಿರ್ಧರಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮೂರ್ತಿ ತಯಾರಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more