Belagavi| ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ..!

Belagavi| ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ..!

Suvarna News   | Asianet News
Published : Nov 07, 2021, 01:54 PM ISTUpdated : Nov 07, 2021, 02:07 PM IST

*  ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಮೈನಾಬಾಯಿ ಮೂರ್ತಿ ಸ್ಥಾಪನೆ
*  ಪತಿ ಶಿವಾ ಚೌಗಲೆಯಿಂದ ಪತ್ನಿ ದಿ.ಮೈನಾಬಾಯಿ ಮೂರ್ತಿ ಸ್ಥಾಪನೆ
*  ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಾದ ಮೂರ್ತಿ
 

ಬೆಳಗಾವಿ(ನ.07):  ನಿಮೋನಿಯಾದಿಂದ(Pneumonia) ಮೃತಪಟ್ಟ(Death) ಪತ್ನಿಯ ನೆನಪಲ್ಲಿ ಪತಿ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಹೌದು, ಬೆಳಗಾವಿ(Belagavi) ನಗರದ ಶಿವಾ ಚೌಗಲೆ ಎಂಬುವರೇ ತಮ್ಮ ಹೆಂಡತಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ದಿ.ಮೈನಾಬಾಯಿ ಚೌಗಲೆ ಅವರ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದಾರೆ. ದೀಪಾವಳಿ ಹಬ್ಬದ ದಿನವೇ ಮೃತ ಪತ್ನಿಯ ಮೂರ್ತಿಯನ್ನ ಶಿವಾ ಚೌಗಲೆ ಸ್ಥಾಪನೆ ಮಾಡಿದ್ದಾರೆ. ಬೆಳಗಾವಿ ಮರಗಾಯಿ ನಗರದ ನಿವಾಸದಲ್ಲಿ ಮೂರ್ತಿ ಸ್ಥಾಪನೆಯಾಗಿದೆ. 

BJP Core Committee Meeting: ಸಿಎಂ ಬೊಮ್ಮಾಯಿ ಜೊತೆ RSS ಮುಖಂಡ ಮುಕುಂದ್ ಮಹತ್ವದ ಚರ್ಚೆ

2021ರ ಮೇ ತಿಂಗಳಲ್ಲಿ ಶಿವಾ ಚೌಗಲೆ ಹಾಗೂ ಮೈನಾಬಾಯಿ ಚೌಗಲೆಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಶಿವಾ ಚೌಗಲೆಗೆ ಕೋವಿಡ್(Covid19) ಸೋಂಕು ತಗಲಿದ್ರೆ ಪತ್ನಿ ಮೈನಾಬಾಯಿಗೆ ನಿಮೋನಿಯಾ ಜ್ವರವಿತ್ತು. ಆದರೆ ಮೈನಾಬಾಯಿ ಚೌಗುಲೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಪತ್ನಿ ನೆನೆಪು ಸದಾ ಕಾಡುತ್ತಿದ್ದರಿಂದ ಮೂರ್ತಿ(statue) ಸ್ಥಾಪನೆ ಬಗ್ಗೆ ಶಿವಾ ಚೌಗಲೆ ನಿರ್ಧಾರ ಮಾಡಿದ್ದರು. ಜ್ಯೋತಿಷಿಗಳ(Astrologer) ಸಲಹೆ ಮೇರೆಗೆ ಪತ್ನಿಯ ಮೂರ್ತಿಯನ್ನ ನಿರ್ಮಾಣ ಮಾಡಿದ್ದಾರೆ ಶಿವಾ ಚೌಗಲೆ. 

Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

ಮೈನಾಬಾಯಿ ಮೂರ್ತಿ ಸ್ಥಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಮನೆಯ ಮುಂದೆ ಪೆಂಡಾಲ್, ಬಂಧು, ಬಳಗಕ್ಕೆ ಊಟದ ವ್ಯವಸ್ಥೆ ಮಾಡಿ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ. ಮನೆಯ ಮೇಲಿನ ಕೋಣೆಯಲ್ಲಿ ಮೈನಾಬಾಯಿ ಮೂರ್ತಿ ಸ್ಥಾಪನೆಯಾಗಿದೆ. ಮೂರ್ತಿಯ ಜತೆಗೆ ಮೈನಾಬಾಯಿ ಧರಿಸುತ್ತಿದ್ದ ಒಡವೆ, ಸೀರೆ ಸೇರಿ ಎಲ್ಲಾ ವಸ್ತುಗಳು ಇಡಲು ವಾರ್ಡರೂಬ್ ವ್ಯವಸ್ಥೆಯನ್ನ ಕೂಡ ಮಾಡಿಸಲಾಗಿದೆ. ಶಿವಾ ಚೌಗಲೆ, ಮೈನಾಬಾಯಿ ಇಬ್ಬರು ಮಾಹನಗರ ಪಾಲಿಕೆ ಸದಸ್ಯರಾಗಿ ಕೆಲಸ ಮಾಡಿದ್ದರು. ಒಂದು ಅವಧಿಗೆ ಮೈನಾಬಾಯಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು. ಪತ್ನಿಯ ಹೆಸರಿನಲ್ಲಿ ಫೌಂಡೇಶನ್ ಸ್ಥಾಪನೆ‌ ಮಾಡಿ ಅಭಿವೃದ್ಧಿ ಕಾರ್ಯ ನಡೆಸಲು ಪತಿ ಶಿವಾ ಚೌಗಲೆ ನಿರ್ಧರಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮೂರ್ತಿ ತಯಾರಾಗಿದೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more