Belagavi| ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ..!

Belagavi| ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ..!

Suvarna News   | Asianet News
Published : Nov 07, 2021, 01:54 PM ISTUpdated : Nov 07, 2021, 02:07 PM IST

*  ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಮೈನಾಬಾಯಿ ಮೂರ್ತಿ ಸ್ಥಾಪನೆ
*  ಪತಿ ಶಿವಾ ಚೌಗಲೆಯಿಂದ ಪತ್ನಿ ದಿ.ಮೈನಾಬಾಯಿ ಮೂರ್ತಿ ಸ್ಥಾಪನೆ
*  ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಾದ ಮೂರ್ತಿ
 

ಬೆಳಗಾವಿ(ನ.07):  ನಿಮೋನಿಯಾದಿಂದ(Pneumonia) ಮೃತಪಟ್ಟ(Death) ಪತ್ನಿಯ ನೆನಪಲ್ಲಿ ಪತಿ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಹೌದು, ಬೆಳಗಾವಿ(Belagavi) ನಗರದ ಶಿವಾ ಚೌಗಲೆ ಎಂಬುವರೇ ತಮ್ಮ ಹೆಂಡತಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ದಿ.ಮೈನಾಬಾಯಿ ಚೌಗಲೆ ಅವರ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದಾರೆ. ದೀಪಾವಳಿ ಹಬ್ಬದ ದಿನವೇ ಮೃತ ಪತ್ನಿಯ ಮೂರ್ತಿಯನ್ನ ಶಿವಾ ಚೌಗಲೆ ಸ್ಥಾಪನೆ ಮಾಡಿದ್ದಾರೆ. ಬೆಳಗಾವಿ ಮರಗಾಯಿ ನಗರದ ನಿವಾಸದಲ್ಲಿ ಮೂರ್ತಿ ಸ್ಥಾಪನೆಯಾಗಿದೆ. 

BJP Core Committee Meeting: ಸಿಎಂ ಬೊಮ್ಮಾಯಿ ಜೊತೆ RSS ಮುಖಂಡ ಮುಕುಂದ್ ಮಹತ್ವದ ಚರ್ಚೆ

2021ರ ಮೇ ತಿಂಗಳಲ್ಲಿ ಶಿವಾ ಚೌಗಲೆ ಹಾಗೂ ಮೈನಾಬಾಯಿ ಚೌಗಲೆಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಶಿವಾ ಚೌಗಲೆಗೆ ಕೋವಿಡ್(Covid19) ಸೋಂಕು ತಗಲಿದ್ರೆ ಪತ್ನಿ ಮೈನಾಬಾಯಿಗೆ ನಿಮೋನಿಯಾ ಜ್ವರವಿತ್ತು. ಆದರೆ ಮೈನಾಬಾಯಿ ಚೌಗುಲೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಪತ್ನಿ ನೆನೆಪು ಸದಾ ಕಾಡುತ್ತಿದ್ದರಿಂದ ಮೂರ್ತಿ(statue) ಸ್ಥಾಪನೆ ಬಗ್ಗೆ ಶಿವಾ ಚೌಗಲೆ ನಿರ್ಧಾರ ಮಾಡಿದ್ದರು. ಜ್ಯೋತಿಷಿಗಳ(Astrologer) ಸಲಹೆ ಮೇರೆಗೆ ಪತ್ನಿಯ ಮೂರ್ತಿಯನ್ನ ನಿರ್ಮಾಣ ಮಾಡಿದ್ದಾರೆ ಶಿವಾ ಚೌಗಲೆ. 

Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

ಮೈನಾಬಾಯಿ ಮೂರ್ತಿ ಸ್ಥಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಮನೆಯ ಮುಂದೆ ಪೆಂಡಾಲ್, ಬಂಧು, ಬಳಗಕ್ಕೆ ಊಟದ ವ್ಯವಸ್ಥೆ ಮಾಡಿ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ. ಮನೆಯ ಮೇಲಿನ ಕೋಣೆಯಲ್ಲಿ ಮೈನಾಬಾಯಿ ಮೂರ್ತಿ ಸ್ಥಾಪನೆಯಾಗಿದೆ. ಮೂರ್ತಿಯ ಜತೆಗೆ ಮೈನಾಬಾಯಿ ಧರಿಸುತ್ತಿದ್ದ ಒಡವೆ, ಸೀರೆ ಸೇರಿ ಎಲ್ಲಾ ವಸ್ತುಗಳು ಇಡಲು ವಾರ್ಡರೂಬ್ ವ್ಯವಸ್ಥೆಯನ್ನ ಕೂಡ ಮಾಡಿಸಲಾಗಿದೆ. ಶಿವಾ ಚೌಗಲೆ, ಮೈನಾಬಾಯಿ ಇಬ್ಬರು ಮಾಹನಗರ ಪಾಲಿಕೆ ಸದಸ್ಯರಾಗಿ ಕೆಲಸ ಮಾಡಿದ್ದರು. ಒಂದು ಅವಧಿಗೆ ಮೈನಾಬಾಯಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು. ಪತ್ನಿಯ ಹೆಸರಿನಲ್ಲಿ ಫೌಂಡೇಶನ್ ಸ್ಥಾಪನೆ‌ ಮಾಡಿ ಅಭಿವೃದ್ಧಿ ಕಾರ್ಯ ನಡೆಸಲು ಪತಿ ಶಿವಾ ಚೌಗಲೆ ನಿರ್ಧರಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮೂರ್ತಿ ತಯಾರಾಗಿದೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more