Belagavi| ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ..!

Belagavi| ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ..!

Suvarna News   | Asianet News
Published : Nov 07, 2021, 01:54 PM ISTUpdated : Nov 07, 2021, 02:07 PM IST

*  ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಮೈನಾಬಾಯಿ ಮೂರ್ತಿ ಸ್ಥಾಪನೆ
*  ಪತಿ ಶಿವಾ ಚೌಗಲೆಯಿಂದ ಪತ್ನಿ ದಿ.ಮೈನಾಬಾಯಿ ಮೂರ್ತಿ ಸ್ಥಾಪನೆ
*  ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಾದ ಮೂರ್ತಿ
 

ಬೆಳಗಾವಿ(ನ.07):  ನಿಮೋನಿಯಾದಿಂದ(Pneumonia) ಮೃತಪಟ್ಟ(Death) ಪತ್ನಿಯ ನೆನಪಲ್ಲಿ ಪತಿ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಹೌದು, ಬೆಳಗಾವಿ(Belagavi) ನಗರದ ಶಿವಾ ಚೌಗಲೆ ಎಂಬುವರೇ ತಮ್ಮ ಹೆಂಡತಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ದಿ.ಮೈನಾಬಾಯಿ ಚೌಗಲೆ ಅವರ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದಾರೆ. ದೀಪಾವಳಿ ಹಬ್ಬದ ದಿನವೇ ಮೃತ ಪತ್ನಿಯ ಮೂರ್ತಿಯನ್ನ ಶಿವಾ ಚೌಗಲೆ ಸ್ಥಾಪನೆ ಮಾಡಿದ್ದಾರೆ. ಬೆಳಗಾವಿ ಮರಗಾಯಿ ನಗರದ ನಿವಾಸದಲ್ಲಿ ಮೂರ್ತಿ ಸ್ಥಾಪನೆಯಾಗಿದೆ. 

BJP Core Committee Meeting: ಸಿಎಂ ಬೊಮ್ಮಾಯಿ ಜೊತೆ RSS ಮುಖಂಡ ಮುಕುಂದ್ ಮಹತ್ವದ ಚರ್ಚೆ

2021ರ ಮೇ ತಿಂಗಳಲ್ಲಿ ಶಿವಾ ಚೌಗಲೆ ಹಾಗೂ ಮೈನಾಬಾಯಿ ಚೌಗಲೆಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಶಿವಾ ಚೌಗಲೆಗೆ ಕೋವಿಡ್(Covid19) ಸೋಂಕು ತಗಲಿದ್ರೆ ಪತ್ನಿ ಮೈನಾಬಾಯಿಗೆ ನಿಮೋನಿಯಾ ಜ್ವರವಿತ್ತು. ಆದರೆ ಮೈನಾಬಾಯಿ ಚೌಗುಲೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಪತ್ನಿ ನೆನೆಪು ಸದಾ ಕಾಡುತ್ತಿದ್ದರಿಂದ ಮೂರ್ತಿ(statue) ಸ್ಥಾಪನೆ ಬಗ್ಗೆ ಶಿವಾ ಚೌಗಲೆ ನಿರ್ಧಾರ ಮಾಡಿದ್ದರು. ಜ್ಯೋತಿಷಿಗಳ(Astrologer) ಸಲಹೆ ಮೇರೆಗೆ ಪತ್ನಿಯ ಮೂರ್ತಿಯನ್ನ ನಿರ್ಮಾಣ ಮಾಡಿದ್ದಾರೆ ಶಿವಾ ಚೌಗಲೆ. 

Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

ಮೈನಾಬಾಯಿ ಮೂರ್ತಿ ಸ್ಥಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಮನೆಯ ಮುಂದೆ ಪೆಂಡಾಲ್, ಬಂಧು, ಬಳಗಕ್ಕೆ ಊಟದ ವ್ಯವಸ್ಥೆ ಮಾಡಿ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ. ಮನೆಯ ಮೇಲಿನ ಕೋಣೆಯಲ್ಲಿ ಮೈನಾಬಾಯಿ ಮೂರ್ತಿ ಸ್ಥಾಪನೆಯಾಗಿದೆ. ಮೂರ್ತಿಯ ಜತೆಗೆ ಮೈನಾಬಾಯಿ ಧರಿಸುತ್ತಿದ್ದ ಒಡವೆ, ಸೀರೆ ಸೇರಿ ಎಲ್ಲಾ ವಸ್ತುಗಳು ಇಡಲು ವಾರ್ಡರೂಬ್ ವ್ಯವಸ್ಥೆಯನ್ನ ಕೂಡ ಮಾಡಿಸಲಾಗಿದೆ. ಶಿವಾ ಚೌಗಲೆ, ಮೈನಾಬಾಯಿ ಇಬ್ಬರು ಮಾಹನಗರ ಪಾಲಿಕೆ ಸದಸ್ಯರಾಗಿ ಕೆಲಸ ಮಾಡಿದ್ದರು. ಒಂದು ಅವಧಿಗೆ ಮೈನಾಬಾಯಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು. ಪತ್ನಿಯ ಹೆಸರಿನಲ್ಲಿ ಫೌಂಡೇಶನ್ ಸ್ಥಾಪನೆ‌ ಮಾಡಿ ಅಭಿವೃದ್ಧಿ ಕಾರ್ಯ ನಡೆಸಲು ಪತಿ ಶಿವಾ ಚೌಗಲೆ ನಿರ್ಧರಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮೂರ್ತಿ ತಯಾರಾಗಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more