Belagavi| ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ..!

Belagavi| ಪತ್ನಿಯ ನೆನಪಲ್ಲಿ ಮೂರ್ತಿ ಪ್ರತಿಷ್ಠಾಪಿಸಿದ ಪತಿ..!

Suvarna News   | Asianet News
Published : Nov 07, 2021, 01:54 PM ISTUpdated : Nov 07, 2021, 02:07 PM IST

*  ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಮೈನಾಬಾಯಿ ಮೂರ್ತಿ ಸ್ಥಾಪನೆ
*  ಪತಿ ಶಿವಾ ಚೌಗಲೆಯಿಂದ ಪತ್ನಿ ದಿ.ಮೈನಾಬಾಯಿ ಮೂರ್ತಿ ಸ್ಥಾಪನೆ
*  ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಾದ ಮೂರ್ತಿ
 

ಬೆಳಗಾವಿ(ನ.07):  ನಿಮೋನಿಯಾದಿಂದ(Pneumonia) ಮೃತಪಟ್ಟ(Death) ಪತ್ನಿಯ ನೆನಪಲ್ಲಿ ಪತಿ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಹೌದು, ಬೆಳಗಾವಿ(Belagavi) ನಗರದ ಶಿವಾ ಚೌಗಲೆ ಎಂಬುವರೇ ತಮ್ಮ ಹೆಂಡತಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ದಿ.ಮೈನಾಬಾಯಿ ಚೌಗಲೆ ಅವರ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಿದ್ದಾರೆ. ದೀಪಾವಳಿ ಹಬ್ಬದ ದಿನವೇ ಮೃತ ಪತ್ನಿಯ ಮೂರ್ತಿಯನ್ನ ಶಿವಾ ಚೌಗಲೆ ಸ್ಥಾಪನೆ ಮಾಡಿದ್ದಾರೆ. ಬೆಳಗಾವಿ ಮರಗಾಯಿ ನಗರದ ನಿವಾಸದಲ್ಲಿ ಮೂರ್ತಿ ಸ್ಥಾಪನೆಯಾಗಿದೆ. 

BJP Core Committee Meeting: ಸಿಎಂ ಬೊಮ್ಮಾಯಿ ಜೊತೆ RSS ಮುಖಂಡ ಮುಕುಂದ್ ಮಹತ್ವದ ಚರ್ಚೆ

2021ರ ಮೇ ತಿಂಗಳಲ್ಲಿ ಶಿವಾ ಚೌಗಲೆ ಹಾಗೂ ಮೈನಾಬಾಯಿ ಚೌಗಲೆಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಶಿವಾ ಚೌಗಲೆಗೆ ಕೋವಿಡ್(Covid19) ಸೋಂಕು ತಗಲಿದ್ರೆ ಪತ್ನಿ ಮೈನಾಬಾಯಿಗೆ ನಿಮೋನಿಯಾ ಜ್ವರವಿತ್ತು. ಆದರೆ ಮೈನಾಬಾಯಿ ಚೌಗುಲೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಪತ್ನಿ ನೆನೆಪು ಸದಾ ಕಾಡುತ್ತಿದ್ದರಿಂದ ಮೂರ್ತಿ(statue) ಸ್ಥಾಪನೆ ಬಗ್ಗೆ ಶಿವಾ ಚೌಗಲೆ ನಿರ್ಧಾರ ಮಾಡಿದ್ದರು. ಜ್ಯೋತಿಷಿಗಳ(Astrologer) ಸಲಹೆ ಮೇರೆಗೆ ಪತ್ನಿಯ ಮೂರ್ತಿಯನ್ನ ನಿರ್ಮಾಣ ಮಾಡಿದ್ದಾರೆ ಶಿವಾ ಚೌಗಲೆ. 

Puneeth ಸಮಾಧಿ ಬಳಿ ಸಪ್ತಪದಿ ತುಳಿಯಲು ಮುಂದಾದ ಜೋಡಿ, ನೇತ್ರದಾನಕ್ಕೆ ಸಾವಿರಾರು ಮಂದಿ ನೋಂದಣಿ

ಮೈನಾಬಾಯಿ ಮೂರ್ತಿ ಸ್ಥಾಪನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಮನೆಯ ಮುಂದೆ ಪೆಂಡಾಲ್, ಬಂಧು, ಬಳಗಕ್ಕೆ ಊಟದ ವ್ಯವಸ್ಥೆ ಮಾಡಿ ಮೂರ್ತಿಯನ್ನ ಪ್ರತಿಷ್ಠಾಪನೆ ಮಾಡಲಾಗಿದೆ. ಮನೆಯ ಮೇಲಿನ ಕೋಣೆಯಲ್ಲಿ ಮೈನಾಬಾಯಿ ಮೂರ್ತಿ ಸ್ಥಾಪನೆಯಾಗಿದೆ. ಮೂರ್ತಿಯ ಜತೆಗೆ ಮೈನಾಬಾಯಿ ಧರಿಸುತ್ತಿದ್ದ ಒಡವೆ, ಸೀರೆ ಸೇರಿ ಎಲ್ಲಾ ವಸ್ತುಗಳು ಇಡಲು ವಾರ್ಡರೂಬ್ ವ್ಯವಸ್ಥೆಯನ್ನ ಕೂಡ ಮಾಡಿಸಲಾಗಿದೆ. ಶಿವಾ ಚೌಗಲೆ, ಮೈನಾಬಾಯಿ ಇಬ್ಬರು ಮಾಹನಗರ ಪಾಲಿಕೆ ಸದಸ್ಯರಾಗಿ ಕೆಲಸ ಮಾಡಿದ್ದರು. ಒಂದು ಅವಧಿಗೆ ಮೈನಾಬಾಯಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು. ಪತ್ನಿಯ ಹೆಸರಿನಲ್ಲಿ ಫೌಂಡೇಶನ್ ಸ್ಥಾಪನೆ‌ ಮಾಡಿ ಅಭಿವೃದ್ಧಿ ಕಾರ್ಯ ನಡೆಸಲು ಪತಿ ಶಿವಾ ಚೌಗಲೆ ನಿರ್ಧರಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮೂರ್ತಿ ತಯಾರಾಗಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more