ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

Published : Jun 08, 2023, 12:09 PM IST

ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದ ಬೆಂಗಳೂರಿನ ಶಾಸಕರಿಗೆ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ.

ಬೆಂಗಳೂರು (ಜೂ.08): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಲಾಭದಾಯಕ ಸ್ಥಾನವೆಂದೇ ಕರೆಯುತ್ತಿದ್ದ ಹಾಗೂ ಭ್ರಷ್ಟಾಚಾರಕ್ಕೆ ರಾಜಾತಿಥ್ಯವೆಂದೇ ಹೇಳಲಾಗುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಅಧ್ಯಕ್ಷ ಸ್ಥಾನದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದರು. ಆದರೆ, ಈಗ ಸರ್ಕಾರದಿಂದ ಯಾವೊಬ್ಬ ಜನಪ್ರತಿನಿಧಿಯನ್ನೂ ನೇಮಕ ಮಾಡದೇ ಹಿರಿಯ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಒಟ್ಟು 10 ಪ್ರಾಧಿಕಾರಿಗಳಿಗೆ ರಾಕೇಶ್‌ ಸಿಂಗ್‌ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ. ಈ ಮೂಲಕ ಶಾಸಕರಾಗದಿದ್ದರೂ, ಸಚಿವರಾಗದಿದ್ದರೂ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ನಡೆಸಬಹುದು ಎಂದು ಕನಸು ಕಂಡಿದ್ದವರಿಗೆ ಈಗ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ. ಇನ್ನು ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸ್ವತಃ ಬಿಡಿಎಗೆ ಭೇಟಿ ನೀಡಿ ರಾಕೇಶ್‌ ಸಿಂಗ್‌ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 

ಹೆಣ್ಣೆಂಬ ಕಾರಣಕ್ಕೆ ಹುಟ್ಟಿದ ಮಗುವನ್ನೇ ಮುಳ್ಳಲ್ಲಿ ಬೀಸಾಡಿ ಹೋದ ಪೋಷಕರು

ಶಿವರಾಮ ಕಾರಂತ ಬಡವಾಣೆಯ ಬಗ್ಗೆ ಚರ್ಚೆ: ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಬಿಡಿಎಗೆ ನಾನು ಇಂದು ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಶಿವರಾಮ ಕಾರಂತ ಬಡವಾಣೆ ಕೆಲಸ ಕಾರ್ಯ ಹೇಗೆ ಆಗುತ್ತಿದೆ ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇನೆ.  ನಿವೃತ್ತ ನ್ಯಾಯಾಧೀಶ ಆಯೋಗದಲ್ಲಿರುವ ಮೂರು ಜನರ ಜೊತೆ ಚರ್ಚೆ ಮಾಡಿದ್ದೇನೆ. 3 ಸಾವಿರಕ್ಕೂ ಹೆಚ್ಚು ಜಾಗವನ್ನ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಲೇಔಟ್ ಮಾಡ್ತಿದ್ದಾರಾ ಅಥವಾ ಸಾಮಾನ್ಯ ಲೇಔಟ್ ಮಾಡ್ತಿದ್ದಾರಾ ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಯಾವ ರೀತಿ ಕೆಲಸ ನಡೆಯುತ್ತಿದೆ ಅನ್ನೋದನ್ನ ತಿಳಿಸಿದ್ದಾರೆ. ಸರ್ಕಾರಕ್ಕೂ ಅನುಕೂಲ ಆಗಬೇಕು. ಜಮೀನು ಕಳೆದುಕೊಂಡವರಿಗೂ ಒಳ್ಳೆ ಬೆಲೆ ಸಿಗಬೇಕು. ಬಡವರಿಗೂ ಅನ್ಯಾಯ ಆಗಬಾರದು, ಅಂತವರಿಗೆ ಕಾನೂನು ಅಡಿಯಲ್ಲಿ ಯಾವ ರೀತಿ ಸಹಾಯ ಮಾಡಲಾಗುತ್ತೋ ಮಾಡುತ್ತೇವೆ ಎಂದು ಹೇಳಿದರು. 

 

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more