ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

Published : Jun 08, 2023, 12:09 PM IST

ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದ ಬೆಂಗಳೂರಿನ ಶಾಸಕರಿಗೆ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ.

ಬೆಂಗಳೂರು (ಜೂ.08): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಲಾಭದಾಯಕ ಸ್ಥಾನವೆಂದೇ ಕರೆಯುತ್ತಿದ್ದ ಹಾಗೂ ಭ್ರಷ್ಟಾಚಾರಕ್ಕೆ ರಾಜಾತಿಥ್ಯವೆಂದೇ ಹೇಳಲಾಗುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಅಧ್ಯಕ್ಷ ಸ್ಥಾನದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದರು. ಆದರೆ, ಈಗ ಸರ್ಕಾರದಿಂದ ಯಾವೊಬ್ಬ ಜನಪ್ರತಿನಿಧಿಯನ್ನೂ ನೇಮಕ ಮಾಡದೇ ಹಿರಿಯ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಒಟ್ಟು 10 ಪ್ರಾಧಿಕಾರಿಗಳಿಗೆ ರಾಕೇಶ್‌ ಸಿಂಗ್‌ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ. ಈ ಮೂಲಕ ಶಾಸಕರಾಗದಿದ್ದರೂ, ಸಚಿವರಾಗದಿದ್ದರೂ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ನಡೆಸಬಹುದು ಎಂದು ಕನಸು ಕಂಡಿದ್ದವರಿಗೆ ಈಗ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ. ಇನ್ನು ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸ್ವತಃ ಬಿಡಿಎಗೆ ಭೇಟಿ ನೀಡಿ ರಾಕೇಶ್‌ ಸಿಂಗ್‌ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 

ಹೆಣ್ಣೆಂಬ ಕಾರಣಕ್ಕೆ ಹುಟ್ಟಿದ ಮಗುವನ್ನೇ ಮುಳ್ಳಲ್ಲಿ ಬೀಸಾಡಿ ಹೋದ ಪೋಷಕರು

ಶಿವರಾಮ ಕಾರಂತ ಬಡವಾಣೆಯ ಬಗ್ಗೆ ಚರ್ಚೆ: ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಬಿಡಿಎಗೆ ನಾನು ಇಂದು ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಶಿವರಾಮ ಕಾರಂತ ಬಡವಾಣೆ ಕೆಲಸ ಕಾರ್ಯ ಹೇಗೆ ಆಗುತ್ತಿದೆ ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇನೆ.  ನಿವೃತ್ತ ನ್ಯಾಯಾಧೀಶ ಆಯೋಗದಲ್ಲಿರುವ ಮೂರು ಜನರ ಜೊತೆ ಚರ್ಚೆ ಮಾಡಿದ್ದೇನೆ. 3 ಸಾವಿರಕ್ಕೂ ಹೆಚ್ಚು ಜಾಗವನ್ನ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಲೇಔಟ್ ಮಾಡ್ತಿದ್ದಾರಾ ಅಥವಾ ಸಾಮಾನ್ಯ ಲೇಔಟ್ ಮಾಡ್ತಿದ್ದಾರಾ ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಯಾವ ರೀತಿ ಕೆಲಸ ನಡೆಯುತ್ತಿದೆ ಅನ್ನೋದನ್ನ ತಿಳಿಸಿದ್ದಾರೆ. ಸರ್ಕಾರಕ್ಕೂ ಅನುಕೂಲ ಆಗಬೇಕು. ಜಮೀನು ಕಳೆದುಕೊಂಡವರಿಗೂ ಒಳ್ಳೆ ಬೆಲೆ ಸಿಗಬೇಕು. ಬಡವರಿಗೂ ಅನ್ಯಾಯ ಆಗಬಾರದು, ಅಂತವರಿಗೆ ಕಾನೂನು ಅಡಿಯಲ್ಲಿ ಯಾವ ರೀತಿ ಸಹಾಯ ಮಾಡಲಾಗುತ್ತೋ ಮಾಡುತ್ತೇವೆ ಎಂದು ಹೇಳಿದರು. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more