ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

Published : Jun 08, 2023, 12:09 PM IST

ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದ ಬೆಂಗಳೂರಿನ ಶಾಸಕರಿಗೆ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ.

ಬೆಂಗಳೂರು (ಜೂ.08): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಲಾಭದಾಯಕ ಸ್ಥಾನವೆಂದೇ ಕರೆಯುತ್ತಿದ್ದ ಹಾಗೂ ಭ್ರಷ್ಟಾಚಾರಕ್ಕೆ ರಾಜಾತಿಥ್ಯವೆಂದೇ ಹೇಳಲಾಗುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಅಧ್ಯಕ್ಷ ಸ್ಥಾನದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದರು. ಆದರೆ, ಈಗ ಸರ್ಕಾರದಿಂದ ಯಾವೊಬ್ಬ ಜನಪ್ರತಿನಿಧಿಯನ್ನೂ ನೇಮಕ ಮಾಡದೇ ಹಿರಿಯ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಒಟ್ಟು 10 ಪ್ರಾಧಿಕಾರಿಗಳಿಗೆ ರಾಕೇಶ್‌ ಸಿಂಗ್‌ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ. ಈ ಮೂಲಕ ಶಾಸಕರಾಗದಿದ್ದರೂ, ಸಚಿವರಾಗದಿದ್ದರೂ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ನಡೆಸಬಹುದು ಎಂದು ಕನಸು ಕಂಡಿದ್ದವರಿಗೆ ಈಗ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ. ಇನ್ನು ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸ್ವತಃ ಬಿಡಿಎಗೆ ಭೇಟಿ ನೀಡಿ ರಾಕೇಶ್‌ ಸಿಂಗ್‌ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 

ಹೆಣ್ಣೆಂಬ ಕಾರಣಕ್ಕೆ ಹುಟ್ಟಿದ ಮಗುವನ್ನೇ ಮುಳ್ಳಲ್ಲಿ ಬೀಸಾಡಿ ಹೋದ ಪೋಷಕರು

ಶಿವರಾಮ ಕಾರಂತ ಬಡವಾಣೆಯ ಬಗ್ಗೆ ಚರ್ಚೆ: ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಬಿಡಿಎಗೆ ನಾನು ಇಂದು ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಶಿವರಾಮ ಕಾರಂತ ಬಡವಾಣೆ ಕೆಲಸ ಕಾರ್ಯ ಹೇಗೆ ಆಗುತ್ತಿದೆ ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇನೆ.  ನಿವೃತ್ತ ನ್ಯಾಯಾಧೀಶ ಆಯೋಗದಲ್ಲಿರುವ ಮೂರು ಜನರ ಜೊತೆ ಚರ್ಚೆ ಮಾಡಿದ್ದೇನೆ. 3 ಸಾವಿರಕ್ಕೂ ಹೆಚ್ಚು ಜಾಗವನ್ನ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಲೇಔಟ್ ಮಾಡ್ತಿದ್ದಾರಾ ಅಥವಾ ಸಾಮಾನ್ಯ ಲೇಔಟ್ ಮಾಡ್ತಿದ್ದಾರಾ ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಯಾವ ರೀತಿ ಕೆಲಸ ನಡೆಯುತ್ತಿದೆ ಅನ್ನೋದನ್ನ ತಿಳಿಸಿದ್ದಾರೆ. ಸರ್ಕಾರಕ್ಕೂ ಅನುಕೂಲ ಆಗಬೇಕು. ಜಮೀನು ಕಳೆದುಕೊಂಡವರಿಗೂ ಒಳ್ಳೆ ಬೆಲೆ ಸಿಗಬೇಕು. ಬಡವರಿಗೂ ಅನ್ಯಾಯ ಆಗಬಾರದು, ಅಂತವರಿಗೆ ಕಾನೂನು ಅಡಿಯಲ್ಲಿ ಯಾವ ರೀತಿ ಸಹಾಯ ಮಾಡಲಾಗುತ್ತೋ ಮಾಡುತ್ತೇವೆ ಎಂದು ಹೇಳಿದರು. 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more