ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

Published : Jun 08, 2023, 12:09 PM IST

ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದ ಬೆಂಗಳೂರಿನ ಶಾಸಕರಿಗೆ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ.

ಬೆಂಗಳೂರು (ಜೂ.08): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಲಾಭದಾಯಕ ಸ್ಥಾನವೆಂದೇ ಕರೆಯುತ್ತಿದ್ದ ಹಾಗೂ ಭ್ರಷ್ಟಾಚಾರಕ್ಕೆ ರಾಜಾತಿಥ್ಯವೆಂದೇ ಹೇಳಲಾಗುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಅಧ್ಯಕ್ಷ ಸ್ಥಾನದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದರು. ಆದರೆ, ಈಗ ಸರ್ಕಾರದಿಂದ ಯಾವೊಬ್ಬ ಜನಪ್ರತಿನಿಧಿಯನ್ನೂ ನೇಮಕ ಮಾಡದೇ ಹಿರಿಯ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಒಟ್ಟು 10 ಪ್ರಾಧಿಕಾರಿಗಳಿಗೆ ರಾಕೇಶ್‌ ಸಿಂಗ್‌ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ. ಈ ಮೂಲಕ ಶಾಸಕರಾಗದಿದ್ದರೂ, ಸಚಿವರಾಗದಿದ್ದರೂ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ನಡೆಸಬಹುದು ಎಂದು ಕನಸು ಕಂಡಿದ್ದವರಿಗೆ ಈಗ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ. ಇನ್ನು ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸ್ವತಃ ಬಿಡಿಎಗೆ ಭೇಟಿ ನೀಡಿ ರಾಕೇಶ್‌ ಸಿಂಗ್‌ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 

ಹೆಣ್ಣೆಂಬ ಕಾರಣಕ್ಕೆ ಹುಟ್ಟಿದ ಮಗುವನ್ನೇ ಮುಳ್ಳಲ್ಲಿ ಬೀಸಾಡಿ ಹೋದ ಪೋಷಕರು

ಶಿವರಾಮ ಕಾರಂತ ಬಡವಾಣೆಯ ಬಗ್ಗೆ ಚರ್ಚೆ: ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಬಿಡಿಎಗೆ ನಾನು ಇಂದು ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಶಿವರಾಮ ಕಾರಂತ ಬಡವಾಣೆ ಕೆಲಸ ಕಾರ್ಯ ಹೇಗೆ ಆಗುತ್ತಿದೆ ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇನೆ.  ನಿವೃತ್ತ ನ್ಯಾಯಾಧೀಶ ಆಯೋಗದಲ್ಲಿರುವ ಮೂರು ಜನರ ಜೊತೆ ಚರ್ಚೆ ಮಾಡಿದ್ದೇನೆ. 3 ಸಾವಿರಕ್ಕೂ ಹೆಚ್ಚು ಜಾಗವನ್ನ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಲೇಔಟ್ ಮಾಡ್ತಿದ್ದಾರಾ ಅಥವಾ ಸಾಮಾನ್ಯ ಲೇಔಟ್ ಮಾಡ್ತಿದ್ದಾರಾ ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಯಾವ ರೀತಿ ಕೆಲಸ ನಡೆಯುತ್ತಿದೆ ಅನ್ನೋದನ್ನ ತಿಳಿಸಿದ್ದಾರೆ. ಸರ್ಕಾರಕ್ಕೂ ಅನುಕೂಲ ಆಗಬೇಕು. ಜಮೀನು ಕಳೆದುಕೊಂಡವರಿಗೂ ಒಳ್ಳೆ ಬೆಲೆ ಸಿಗಬೇಕು. ಬಡವರಿಗೂ ಅನ್ಯಾಯ ಆಗಬಾರದು, ಅಂತವರಿಗೆ ಕಾನೂನು ಅಡಿಯಲ್ಲಿ ಯಾವ ರೀತಿ ಸಹಾಯ ಮಾಡಲಾಗುತ್ತೋ ಮಾಡುತ್ತೇವೆ ಎಂದು ಹೇಳಿದರು. 

 

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more