ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

Published : Jun 08, 2023, 12:09 PM IST

ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದ ಬೆಂಗಳೂರಿನ ಶಾಸಕರಿಗೆ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ.

ಬೆಂಗಳೂರು (ಜೂ.08): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಲಾಭದಾಯಕ ಸ್ಥಾನವೆಂದೇ ಕರೆಯುತ್ತಿದ್ದ ಹಾಗೂ ಭ್ರಷ್ಟಾಚಾರಕ್ಕೆ ರಾಜಾತಿಥ್ಯವೆಂದೇ ಹೇಳಲಾಗುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಅಧ್ಯಕ್ಷ ಸ್ಥಾನದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದರು. ಆದರೆ, ಈಗ ಸರ್ಕಾರದಿಂದ ಯಾವೊಬ್ಬ ಜನಪ್ರತಿನಿಧಿಯನ್ನೂ ನೇಮಕ ಮಾಡದೇ ಹಿರಿಯ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಒಟ್ಟು 10 ಪ್ರಾಧಿಕಾರಿಗಳಿಗೆ ರಾಕೇಶ್‌ ಸಿಂಗ್‌ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ. ಈ ಮೂಲಕ ಶಾಸಕರಾಗದಿದ್ದರೂ, ಸಚಿವರಾಗದಿದ್ದರೂ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ನಡೆಸಬಹುದು ಎಂದು ಕನಸು ಕಂಡಿದ್ದವರಿಗೆ ಈಗ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ. ಇನ್ನು ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸ್ವತಃ ಬಿಡಿಎಗೆ ಭೇಟಿ ನೀಡಿ ರಾಕೇಶ್‌ ಸಿಂಗ್‌ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 

ಹೆಣ್ಣೆಂಬ ಕಾರಣಕ್ಕೆ ಹುಟ್ಟಿದ ಮಗುವನ್ನೇ ಮುಳ್ಳಲ್ಲಿ ಬೀಸಾಡಿ ಹೋದ ಪೋಷಕರು

ಶಿವರಾಮ ಕಾರಂತ ಬಡವಾಣೆಯ ಬಗ್ಗೆ ಚರ್ಚೆ: ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಬಿಡಿಎಗೆ ನಾನು ಇಂದು ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಶಿವರಾಮ ಕಾರಂತ ಬಡವಾಣೆ ಕೆಲಸ ಕಾರ್ಯ ಹೇಗೆ ಆಗುತ್ತಿದೆ ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇನೆ.  ನಿವೃತ್ತ ನ್ಯಾಯಾಧೀಶ ಆಯೋಗದಲ್ಲಿರುವ ಮೂರು ಜನರ ಜೊತೆ ಚರ್ಚೆ ಮಾಡಿದ್ದೇನೆ. 3 ಸಾವಿರಕ್ಕೂ ಹೆಚ್ಚು ಜಾಗವನ್ನ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಲೇಔಟ್ ಮಾಡ್ತಿದ್ದಾರಾ ಅಥವಾ ಸಾಮಾನ್ಯ ಲೇಔಟ್ ಮಾಡ್ತಿದ್ದಾರಾ ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಯಾವ ರೀತಿ ಕೆಲಸ ನಡೆಯುತ್ತಿದೆ ಅನ್ನೋದನ್ನ ತಿಳಿಸಿದ್ದಾರೆ. ಸರ್ಕಾರಕ್ಕೂ ಅನುಕೂಲ ಆಗಬೇಕು. ಜಮೀನು ಕಳೆದುಕೊಂಡವರಿಗೂ ಒಳ್ಳೆ ಬೆಲೆ ಸಿಗಬೇಕು. ಬಡವರಿಗೂ ಅನ್ಯಾಯ ಆಗಬಾರದು, ಅಂತವರಿಗೆ ಕಾನೂನು ಅಡಿಯಲ್ಲಿ ಯಾವ ರೀತಿ ಸಹಾಯ ಮಾಡಲಾಗುತ್ತೋ ಮಾಡುತ್ತೇವೆ ಎಂದು ಹೇಳಿದರು. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more