ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

ಬಿಡಿಎ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿದ್ದ ಶಾಸಕರಿಗೆ ಸರ್ಕಾರ ಶಾಕ್!

Published : Jun 08, 2023, 12:09 PM IST

ಬೆಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿದ್ದ ಬೆಂಗಳೂರಿನ ಶಾಸಕರಿಗೆ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ.

ಬೆಂಗಳೂರು (ಜೂ.08): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಲಾಭದಾಯಕ ಸ್ಥಾನವೆಂದೇ ಕರೆಯುತ್ತಿದ್ದ ಹಾಗೂ ಭ್ರಷ್ಟಾಚಾರಕ್ಕೆ ರಾಜಾತಿಥ್ಯವೆಂದೇ ಹೇಳಲಾಗುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಅಧ್ಯಕ್ಷ ಸ್ಥಾನದ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದರು. ಆದರೆ, ಈಗ ಸರ್ಕಾರದಿಂದ ಯಾವೊಬ್ಬ ಜನಪ್ರತಿನಿಧಿಯನ್ನೂ ನೇಮಕ ಮಾಡದೇ ಹಿರಿಯ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಒಟ್ಟು 10 ಪ್ರಾಧಿಕಾರಿಗಳಿಗೆ ರಾಕೇಶ್‌ ಸಿಂಗ್‌ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ. ಈ ಮೂಲಕ ಶಾಸಕರಾಗದಿದ್ದರೂ, ಸಚಿವರಾಗದಿದ್ದರೂ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ನಡೆಸಬಹುದು ಎಂದು ಕನಸು ಕಂಡಿದ್ದವರಿಗೆ ಈಗ ಕಾಂಗ್ರೆಸ್‌ ಸರ್ಕಾರ ಶಾಕ್‌ ನೀಡಿದೆ. ಇನ್ನು ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸ್ವತಃ ಬಿಡಿಎಗೆ ಭೇಟಿ ನೀಡಿ ರಾಕೇಶ್‌ ಸಿಂಗ್‌ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 

ಹೆಣ್ಣೆಂಬ ಕಾರಣಕ್ಕೆ ಹುಟ್ಟಿದ ಮಗುವನ್ನೇ ಮುಳ್ಳಲ್ಲಿ ಬೀಸಾಡಿ ಹೋದ ಪೋಷಕರು

ಶಿವರಾಮ ಕಾರಂತ ಬಡವಾಣೆಯ ಬಗ್ಗೆ ಚರ್ಚೆ: ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಬಿಡಿಎಗೆ ನಾನು ಇಂದು ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಶಿವರಾಮ ಕಾರಂತ ಬಡವಾಣೆ ಕೆಲಸ ಕಾರ್ಯ ಹೇಗೆ ಆಗುತ್ತಿದೆ ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇನೆ.  ನಿವೃತ್ತ ನ್ಯಾಯಾಧೀಶ ಆಯೋಗದಲ್ಲಿರುವ ಮೂರು ಜನರ ಜೊತೆ ಚರ್ಚೆ ಮಾಡಿದ್ದೇನೆ. 3 ಸಾವಿರಕ್ಕೂ ಹೆಚ್ಚು ಜಾಗವನ್ನ ಕೊಟ್ಟಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಲೇಔಟ್ ಮಾಡ್ತಿದ್ದಾರಾ ಅಥವಾ ಸಾಮಾನ್ಯ ಲೇಔಟ್ ಮಾಡ್ತಿದ್ದಾರಾ ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದೇನೆ. ಯಾವ ರೀತಿ ಕೆಲಸ ನಡೆಯುತ್ತಿದೆ ಅನ್ನೋದನ್ನ ತಿಳಿಸಿದ್ದಾರೆ. ಸರ್ಕಾರಕ್ಕೂ ಅನುಕೂಲ ಆಗಬೇಕು. ಜಮೀನು ಕಳೆದುಕೊಂಡವರಿಗೂ ಒಳ್ಳೆ ಬೆಲೆ ಸಿಗಬೇಕು. ಬಡವರಿಗೂ ಅನ್ಯಾಯ ಆಗಬಾರದು, ಅಂತವರಿಗೆ ಕಾನೂನು ಅಡಿಯಲ್ಲಿ ಯಾವ ರೀತಿ ಸಹಾಯ ಮಾಡಲಾಗುತ್ತೋ ಮಾಡುತ್ತೇವೆ ಎಂದು ಹೇಳಿದರು. 

 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more