ಜೋಗಿ ಮಠದಲ್ಲಿ ಜೋರಾಯ್ತು ‘ವಿಗ್ರಹ’ ವಿವಾದ: ಪೀಠಾಧಿಪತಿ ವಿರುದ್ಧವೇ ತಿರುಗಿಬಿದ್ದ ಸಮುದಾಯ !

ಜೋಗಿ ಮಠದಲ್ಲಿ ಜೋರಾಯ್ತು ‘ವಿಗ್ರಹ’ ವಿವಾದ: ಪೀಠಾಧಿಪತಿ ವಿರುದ್ಧವೇ ತಿರುಗಿಬಿದ್ದ ಸಮುದಾಯ !

Published : Aug 29, 2023, 11:28 AM IST

ಮಂಗಳೂರಿನ ಕದ್ರಿಯ ಜೋಗಿ ಮಠಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಈ ಮಠಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ರೇ ಪೀಠಾಧಿಪತಿ ಆಯ್ಕೆ ಮಾಡ್ತಾರೆ. ಆದ್ರೆ ಇಂತಹ ಮಠದಲ್ಲಿ ವಿವಾದ ಭುಗಿಲೆದಿದ್ದು, ಸಮುದಾಯದ ಮಂದಿಯೇ ತಿರುಗಿಬಿದ್ದಿದ್ದಾರೆ.
 


ಮಂಗಳೂರಿನ ಕದ್ರಿ ಗುಡ್ಡದ ತುದಿಯಲ್ಲಿರೋ ಜೋಗಿ ಮಠ. ಈ ಮಠಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇದೀಗ ಈ ಮಠದಲ್ಲಿ ವಿವಾದವೊಂದು ಭುಗಿಲೆದ್ದಿದ್ದು..ಸಮಾಜದ ಭಕ್ತರೇ ತಿರುಗಿಬಿದ್ದಿದ್ದಾರೆ. ಜೋಗಿ ಮಠದಲ್ಲಿ(Jogi math) ದೇವರ ಮೂಲ ವಿಗ್ರಹವನ್ನೇ ಪೀಠಾಧಿಪತಿ ನಿರ್ಮಲ್ ನಾಥ್ ಜೀ (Nirmal Nath Ji) ಕಿತ್ತುಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೇವಸ್ಥಾನದ ಜೀರ್ಣೋದ್ಧಾರದ ನೆಪದಲ್ಲಿ ಎರಡು ಸಾವಿರ ವರ್ಷಗಳ ಹಳೆಯ ಕಾಲಭೈರವ ಮೂರ್ತಿ ಹೊರಗಿಟ್ಟು, ರಾಜಸ್ಥಾನದ ಮಾರ್ವಾಡಿಗಳು ತಂದ ಸಣ್ಣ ಹೊಸ ಕಾಲಭೈರವ ಮೂರ್ತಿ(Kalabhairava Murthy) ಪ್ರತಿಷ್ಠಾಪನೆ ಮಾಡಿದ್ದಾರಂತೆ. ಹೀಗಾಗಿ ನಾಥ ಪರಂಪರೆಯ ಜೋಗಿ ಸಮುದಾಯ ಆಕ್ರೋಶ ಹೊರಹಾಕಿದೆ..ಅಲ್ದೆ ಹಳೇ ವಿಗ್ರಹ ಪ್ರತಿಷ್ಠಾಪಿಸದಿದ್ರೆ ಉಗ್ರ ಹೋರಾಟ ಎಚ್ಚರಿಕೆ ಕೊಟ್ಟಿದ್ದಾರೆ. ಈ ಮಠಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಉಸ್ತುವಾರಿ. ಅಷ್ಟೇ ಅಲ್ಲ ಗೋರಖ್‌ಪುರ ಮಠಕ್ಕೂ ಈ ಜೋಗಿ ಮಠಕ್ಕೂ ಅವಿನಾಭಾವ ಸಂಬಂಧವಿದೆ. 12 ವರ್ಷಕ್ಕೊಮ್ಮೆ ಯೋಗಿ ಆದಿತ್ಯ ನಾಥ್‌ ಜೋಗಿ ಮಠಕ್ಕೆ ಮಠಾಧಿಪತಿ ಆಯ್ಕೆ ಮಾಡ್ತಾರೆ. 2016ರ ಮಾರ್ಚ್ 7ರಂದು ನೂತನ ಪೀಠಾಧಿಪತಿ ನಿರ್ಮಲ ನಾಥಜೀಗೆ ಪಟ್ಟಾಭಿಷೇಕ ಮಾಡಿದ್ರು. ಮಠಕ್ಕೆ ಯಘಿ ಆದಿತ್ಯನಾಥ್ ಹಲವು ಬಾರೀ ಭೇಟಿ ನೀಡಿದ್ರು..ಆದ್ರೆ ಈ ಮಠದಲ್ಲಿ ಜೋಗಿ ಸಮುದಾಯವನ್ನ ದೂರವಿಟ್ಟು ಮಾರ್ವಾಡಿಗಳಿಗೆ ಮಣೆ ಹಾಕಿದ್ದರೆ ಅಂತಾ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಂಸ್ಕಾರವಿಲ್ಲದ ವಿದ್ಯೆ..ಅಪ್ಪ ಅಗಲಿದರೂ ಸಂಬಂಧವೇ ಇಲ್ಲ ಎಂದ ಮಕ್ಕಳು !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more