ಜೋಗಿ ಮಠದಲ್ಲಿ ಜೋರಾಯ್ತು ‘ವಿಗ್ರಹ’ ವಿವಾದ: ಪೀಠಾಧಿಪತಿ ವಿರುದ್ಧವೇ ತಿರುಗಿಬಿದ್ದ ಸಮುದಾಯ !

ಜೋಗಿ ಮಠದಲ್ಲಿ ಜೋರಾಯ್ತು ‘ವಿಗ್ರಹ’ ವಿವಾದ: ಪೀಠಾಧಿಪತಿ ವಿರುದ್ಧವೇ ತಿರುಗಿಬಿದ್ದ ಸಮುದಾಯ !

Published : Aug 29, 2023, 11:28 AM IST

ಮಂಗಳೂರಿನ ಕದ್ರಿಯ ಜೋಗಿ ಮಠಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಈ ಮಠಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ರೇ ಪೀಠಾಧಿಪತಿ ಆಯ್ಕೆ ಮಾಡ್ತಾರೆ. ಆದ್ರೆ ಇಂತಹ ಮಠದಲ್ಲಿ ವಿವಾದ ಭುಗಿಲೆದಿದ್ದು, ಸಮುದಾಯದ ಮಂದಿಯೇ ತಿರುಗಿಬಿದ್ದಿದ್ದಾರೆ.
 


ಮಂಗಳೂರಿನ ಕದ್ರಿ ಗುಡ್ಡದ ತುದಿಯಲ್ಲಿರೋ ಜೋಗಿ ಮಠ. ಈ ಮಠಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇದೀಗ ಈ ಮಠದಲ್ಲಿ ವಿವಾದವೊಂದು ಭುಗಿಲೆದ್ದಿದ್ದು..ಸಮಾಜದ ಭಕ್ತರೇ ತಿರುಗಿಬಿದ್ದಿದ್ದಾರೆ. ಜೋಗಿ ಮಠದಲ್ಲಿ(Jogi math) ದೇವರ ಮೂಲ ವಿಗ್ರಹವನ್ನೇ ಪೀಠಾಧಿಪತಿ ನಿರ್ಮಲ್ ನಾಥ್ ಜೀ (Nirmal Nath Ji) ಕಿತ್ತುಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೇವಸ್ಥಾನದ ಜೀರ್ಣೋದ್ಧಾರದ ನೆಪದಲ್ಲಿ ಎರಡು ಸಾವಿರ ವರ್ಷಗಳ ಹಳೆಯ ಕಾಲಭೈರವ ಮೂರ್ತಿ ಹೊರಗಿಟ್ಟು, ರಾಜಸ್ಥಾನದ ಮಾರ್ವಾಡಿಗಳು ತಂದ ಸಣ್ಣ ಹೊಸ ಕಾಲಭೈರವ ಮೂರ್ತಿ(Kalabhairava Murthy) ಪ್ರತಿಷ್ಠಾಪನೆ ಮಾಡಿದ್ದಾರಂತೆ. ಹೀಗಾಗಿ ನಾಥ ಪರಂಪರೆಯ ಜೋಗಿ ಸಮುದಾಯ ಆಕ್ರೋಶ ಹೊರಹಾಕಿದೆ..ಅಲ್ದೆ ಹಳೇ ವಿಗ್ರಹ ಪ್ರತಿಷ್ಠಾಪಿಸದಿದ್ರೆ ಉಗ್ರ ಹೋರಾಟ ಎಚ್ಚರಿಕೆ ಕೊಟ್ಟಿದ್ದಾರೆ. ಈ ಮಠಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಉಸ್ತುವಾರಿ. ಅಷ್ಟೇ ಅಲ್ಲ ಗೋರಖ್‌ಪುರ ಮಠಕ್ಕೂ ಈ ಜೋಗಿ ಮಠಕ್ಕೂ ಅವಿನಾಭಾವ ಸಂಬಂಧವಿದೆ. 12 ವರ್ಷಕ್ಕೊಮ್ಮೆ ಯೋಗಿ ಆದಿತ್ಯ ನಾಥ್‌ ಜೋಗಿ ಮಠಕ್ಕೆ ಮಠಾಧಿಪತಿ ಆಯ್ಕೆ ಮಾಡ್ತಾರೆ. 2016ರ ಮಾರ್ಚ್ 7ರಂದು ನೂತನ ಪೀಠಾಧಿಪತಿ ನಿರ್ಮಲ ನಾಥಜೀಗೆ ಪಟ್ಟಾಭಿಷೇಕ ಮಾಡಿದ್ರು. ಮಠಕ್ಕೆ ಯಘಿ ಆದಿತ್ಯನಾಥ್ ಹಲವು ಬಾರೀ ಭೇಟಿ ನೀಡಿದ್ರು..ಆದ್ರೆ ಈ ಮಠದಲ್ಲಿ ಜೋಗಿ ಸಮುದಾಯವನ್ನ ದೂರವಿಟ್ಟು ಮಾರ್ವಾಡಿಗಳಿಗೆ ಮಣೆ ಹಾಕಿದ್ದರೆ ಅಂತಾ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಂಸ್ಕಾರವಿಲ್ಲದ ವಿದ್ಯೆ..ಅಪ್ಪ ಅಗಲಿದರೂ ಸಂಬಂಧವೇ ಇಲ್ಲ ಎಂದ ಮಕ್ಕಳು !

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more