ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: IISC ಪ್ರೊಫೆಸರ್ ಹೇಳಿದ್ದೇನು?

ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: IISC ಪ್ರೊಫೆಸರ್ ಹೇಳಿದ್ದೇನು?

Published : Jan 17, 2023, 02:13 PM ISTUpdated : Jan 17, 2023, 02:19 PM IST

ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಹಾಗೂ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 80% ತನಿಖೆ ಮುಗಿಸಿದ್ದೇವೆ ಎಂದು IISC ಪ್ರೊಫೆಸರ್ ಚಂದ್ರ ಕಿಶನ್ ಹೇಳಿದ್ದಾರೆ.
 

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಮಗಾರಿಗೆ ಯಾವ ಕಂಬಿ ಬಳಕೆ ಮಾಡಲಾಗಿದೆ. ಅದ್ರ ಕ್ವಾಲಿಟಿ ಸರ್ಟಿಫಿಕೇಟ್'ನ್ನು ತರಿಸಿಕೊಂಡಿದ್ದೇವೆ ಎಂದು ಚಂದ್ರ ಕಿಶನ್ ಹೇಳಿದರು. ಅದರ ಜೊತೆಗೆ ಜಲ್ಲಿ, ಮಣ್ಣು ಹಾಗೂ ಸಿಮೆಂಟ್'ಗಳ ಟೆಸ್ಟಿಂಗ್ ರಿಪೋರ್ಟ್ ಪಡೆದಿದ್ದೇವೆ. ಸಧ್ಯ ಮೇಲ್ನೋಟಕ್ಕೆ ಕಂಟ್ರಾಕ್ಟರ್'ಗಳೇ ನೇರ ಹೊಣೆಯಾಗಿದ್ದಾರೆ ಎಂದರು. ಈ ಪಿಲ್ಲರ್ ನಿರ್ಮಾಣದ ವೇಳೆ 18 ಮೀಟರ್ ಎತ್ತರದ ಕಂಬಿ ಕಟ್ಟಿದ್ದಾರೆ. ಈ ಎತ್ತರದಲ್ಲಿ 6 ಫ್ಲೋರ್ ಮನೆ ಕಟ್ಟಬಹುದು. ಇಷ್ಟು ಎತ್ತರದ ಪಿಲ್ಲರ್'ಗೆ ಕಂಬಿ  ಕಟ್ಟಿದಾಗ ಯಾವ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಿದ್ದಾರೆ?. ಮುಂಜಾಗ್ರತಾ ಕ್ರಮವಾಗಿ ಕಂಬಿಯ ಪಿಲ್ಲರ್'ಗೆ ಸಪೋರ್ಟ್ ನೀಡಬೇಕಿತ್ತು, ಅದನ್ನು ನೀಡಿಲ್ಲ ಅನ್ನೋದು ಇದ್ರಿಂದ ಗೊತ್ತಾಗುತ್ತಿದೆ. ಆದ್ರೆ ಈಗಲೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. 100% ವರದಿ ಮುಗಿದ ಬಳಿಕವೇ ಕಾರಣ ಯಾರು ಅನ್ನೋದು ಗೊತ್ತಾಗುತ್ತೆ ಎಂದರು. ಕೆಲಸಗಾರರು ಕಂಬಿಯ ಪಿಲ್ಲರ್'ನ್ನೇ ನೇರವಾಗಿ ನಿಲ್ಲಿಸಲು ಸುತ್ತಲು ಸಪೋರ್ಟ್ ನೀಡಬೇಕಿತ್ತು. ಅದು ಕೆಲಸಗಾರರಿಗೆ ಗೊತ್ತಾಗಲ್ಲ, ಕಂಟ್ರಾಕ್ಟರ್ ಹಾಗೂ ಇಂಜಿನಿಯರ್'ಗಳೇ ಅದನ್ನ ನೋಡಿಕೊಳ್ಳಬೇಕು. ಸಧ್ಯ ಕಂಟ್ರಾಕ್ಟರ್ ಹಾಗೂ ಇಂಜಿನಿಯರ್'ಗಳೇ ನೇರ ಹೊಣೆಯಾಗಲಿದ್ದಾರೆ ಎಂದರು.

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more