ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: IISC ಪ್ರೊಫೆಸರ್ ಹೇಳಿದ್ದೇನು?

ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: IISC ಪ್ರೊಫೆಸರ್ ಹೇಳಿದ್ದೇನು?

Published : Jan 17, 2023, 02:13 PM ISTUpdated : Jan 17, 2023, 02:19 PM IST

ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಹಾಗೂ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 80% ತನಿಖೆ ಮುಗಿಸಿದ್ದೇವೆ ಎಂದು IISC ಪ್ರೊಫೆಸರ್ ಚಂದ್ರ ಕಿಶನ್ ಹೇಳಿದ್ದಾರೆ.
 

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಮಗಾರಿಗೆ ಯಾವ ಕಂಬಿ ಬಳಕೆ ಮಾಡಲಾಗಿದೆ. ಅದ್ರ ಕ್ವಾಲಿಟಿ ಸರ್ಟಿಫಿಕೇಟ್'ನ್ನು ತರಿಸಿಕೊಂಡಿದ್ದೇವೆ ಎಂದು ಚಂದ್ರ ಕಿಶನ್ ಹೇಳಿದರು. ಅದರ ಜೊತೆಗೆ ಜಲ್ಲಿ, ಮಣ್ಣು ಹಾಗೂ ಸಿಮೆಂಟ್'ಗಳ ಟೆಸ್ಟಿಂಗ್ ರಿಪೋರ್ಟ್ ಪಡೆದಿದ್ದೇವೆ. ಸಧ್ಯ ಮೇಲ್ನೋಟಕ್ಕೆ ಕಂಟ್ರಾಕ್ಟರ್'ಗಳೇ ನೇರ ಹೊಣೆಯಾಗಿದ್ದಾರೆ ಎಂದರು. ಈ ಪಿಲ್ಲರ್ ನಿರ್ಮಾಣದ ವೇಳೆ 18 ಮೀಟರ್ ಎತ್ತರದ ಕಂಬಿ ಕಟ್ಟಿದ್ದಾರೆ. ಈ ಎತ್ತರದಲ್ಲಿ 6 ಫ್ಲೋರ್ ಮನೆ ಕಟ್ಟಬಹುದು. ಇಷ್ಟು ಎತ್ತರದ ಪಿಲ್ಲರ್'ಗೆ ಕಂಬಿ  ಕಟ್ಟಿದಾಗ ಯಾವ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಿದ್ದಾರೆ?. ಮುಂಜಾಗ್ರತಾ ಕ್ರಮವಾಗಿ ಕಂಬಿಯ ಪಿಲ್ಲರ್'ಗೆ ಸಪೋರ್ಟ್ ನೀಡಬೇಕಿತ್ತು, ಅದನ್ನು ನೀಡಿಲ್ಲ ಅನ್ನೋದು ಇದ್ರಿಂದ ಗೊತ್ತಾಗುತ್ತಿದೆ. ಆದ್ರೆ ಈಗಲೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. 100% ವರದಿ ಮುಗಿದ ಬಳಿಕವೇ ಕಾರಣ ಯಾರು ಅನ್ನೋದು ಗೊತ್ತಾಗುತ್ತೆ ಎಂದರು. ಕೆಲಸಗಾರರು ಕಂಬಿಯ ಪಿಲ್ಲರ್'ನ್ನೇ ನೇರವಾಗಿ ನಿಲ್ಲಿಸಲು ಸುತ್ತಲು ಸಪೋರ್ಟ್ ನೀಡಬೇಕಿತ್ತು. ಅದು ಕೆಲಸಗಾರರಿಗೆ ಗೊತ್ತಾಗಲ್ಲ, ಕಂಟ್ರಾಕ್ಟರ್ ಹಾಗೂ ಇಂಜಿನಿಯರ್'ಗಳೇ ಅದನ್ನ ನೋಡಿಕೊಳ್ಳಬೇಕು. ಸಧ್ಯ ಕಂಟ್ರಾಕ್ಟರ್ ಹಾಗೂ ಇಂಜಿನಿಯರ್'ಗಳೇ ನೇರ ಹೊಣೆಯಾಗಲಿದ್ದಾರೆ ಎಂದರು.

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more