ಕೋಟಿ ಕೋಟಿ ವೆಚ್ಚದ ಹಾಸ್ಟೆಲ್‌ಗಿಲ್ಲ ಉದ್ಘಾಟನೆ ಭಾಗ್ಯ: ಪುಂಡ ಪೋಕರಿಗಳ ಅಡ್ಡೆಯಾಗ್ತಿದೆ ಸರ್ಕಾರಿ ಕಟ್ಟಡ

ಕೋಟಿ ಕೋಟಿ ವೆಚ್ಚದ ಹಾಸ್ಟೆಲ್‌ಗಿಲ್ಲ ಉದ್ಘಾಟನೆ ಭಾಗ್ಯ: ಪುಂಡ ಪೋಕರಿಗಳ ಅಡ್ಡೆಯಾಗ್ತಿದೆ ಸರ್ಕಾರಿ ಕಟ್ಟಡ

Published : Oct 21, 2023, 11:27 AM ISTUpdated : Oct 21, 2023, 11:28 AM IST

ಯಾರ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಅಂತರಲ್ಲ.. ಹಾಗೆ ಜನ್ರ ತೆರಿಗೆ ದುಡ್ಡನ್ನ ಸರ್ಕಾರ ಹೇಗೆ ಪೋಲು ಮಾಡ್ತಿದೆ ಅನ್ನೋದಕ್ಕೆ ಇಲ್ಲೊಂದು ಸ್ಟೋರಿಯಿದೆ. ವಿದ್ಯಾರ್ಥಿಗಳಿಗೆ ನೆರವಾಗಬೇಕಿದ್ದ ಈ ಕಟ್ಟಡ, ಉದ್ಘಾಟನೆ ಭಾಗ್ಯ ಸಿಗದೇ ಭೂತ ಬಂಗಲೆಯಾಗಿ, ಪುಂಡ ಪೋಕರಿಗಳ ತಾಣವಾಗ್ತಿದೆ.
 

ಸರ್ಕಾರ ಕೋಟಿ ಕೋಟಿ ವೆಚ್ಚ ಮಾಡಿ ನಿರ್ಮಾಣವಾದ ಕಟ್ಟಡಗಳು ಅದೇಷ್ಟೊ ವರ್ಷ ಉದ್ಘಾಟನೆ ಭಾಗ್ಯವಿಲ್ಲದೆ ಪಾಳು ಬೀಳುತ್ತಿವೆ. ಇದೇ ಸಾಲಿನಲ್ಲಿ ಬೆಂಗಳೂರಿನ ಯುನಾನಿ ಮತ್ತು ಹೋಮಿಯೋಪತಿ ಕಾಲೇಜಿನ(Unani and Homeopathy College) ವಿದ್ಯಾರ್ಥಿನಿಯರ ಹಾಸ್ಟೆಲ್(Hostel) ಕೂಡ ಸೇರಿ ಕೊಂಡಿದೆ. 2020ರಲ್ಲಿ ಬಿಜೆಪಿ(BJP)ಸರ್ಕಾರದ ಅವಧಿಯಲ್ಲಿ ಬಸವೇಶ್ವರ ನಗರದ ಸಿದ್ದಯ್ಯ ಪುರಾಣಿಕ ರಸ್ತೆಯಲ್ಲಿ ಆಗಿನ ಆರೋಗ್ಯ ಸಚಿವ ಡಾ. ಸುಧಾಕರ್(DR. Sudhakar) ಈ ಕಟ್ಟಡಕ್ಕೆ ಶಂಕು ಸ್ಥಾಪನೆ ಮಾಡಿದ್ರು. ಕಟ್ಟಡ ಕಾಮಗಾರಿ ಎಲ್ಲ ಮುಗಿದ್ರೂ, ಹೆಲ್ತ್ ಇಂಜಿನಿಯರಿಂಗ್ ವಿಭಾಗದಿಂದ  ಯೂಟಿಲೈಸೇಷನ್ ಸರ್ಟಿಫಿಕೇಟ್ ನೀಡಿಲ್ಲ. ಹೀಗಾಗಿ 2 ವರ್ಷದಿಂದ ಈ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಉದ್ಘಾಟನೆ ಭಾಗ್ಯ ಸಿಗದೇ ಈ ಕಟ್ಟಡಕ್ಕೆ ಸೆಕ್ಯೂರಿಟಿ ಇಲ್ಲದೇ, ನಿರ್ವಹಣೆಯೂ ಇಲ್ಲ. ಇದರಿಂದ ಹಾಸ್ಟೆಲ್ ಸುತ್ತಮುತ್ತ ಗಿಡಗಂಟಿಗಳು ಬೆಳೆದು ಪುಂಡ ಪೋಕರಿಗಳ ಅನೈತಿಕ ಚಟುವಟಿಕೆಯ ಅಡ್ಡೆಯಾಗಿದೆ ಎಂಬ ಆರೋಪೂ ಕೇಳಿ ಬಂದಿದೆ. ಹಾಸ್ಟೆಲ್ ಅವರಣದಲ್ಲಿರೋ ಲಕ್ಷಾಂತರ ಮೌಲ್ಯದ ಜನರೇಟರ್ಗಳು ಕಸದ ತೊಟ್ಟಿ ಸೇರುತ್ತಿವೆ. ಈ  ಬಗ್ಗೆ ಕಾಲೇಜು ಪ್ರಾಂಶುಪಾಲರು ಆಯುಷ್ ಇಲಾಖೆಗೆ ಪತ್ರ ಬರೆದ್ರೂ, ಇಲಾಖೆಯಿಂದ ಮರು ಉತ್ತರ ಸಿಕ್ಕಿಲ್ಲ. 

ಇದನ್ನೂ ವೀಕ್ಷಿಸಿ:  ಮರಳು ಮಾಫಿಯಾಗೆ ಬ್ರೇಕ್ ಹಾಕಿದ್ರೂ ಡೋಂಟ್‌ಕೇರ್‌: ಕರಾವಳಿಯಲ್ಲಿ ಸೀಜ್ ಮಾಡಿರೋ ಮರಳಿನಲ್ಲೂ ಅಕ್ರಮ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more