ಕೋಟಿ ಕೋಟಿ ವೆಚ್ಚದ ಹಾಸ್ಟೆಲ್‌ಗಿಲ್ಲ ಉದ್ಘಾಟನೆ ಭಾಗ್ಯ: ಪುಂಡ ಪೋಕರಿಗಳ ಅಡ್ಡೆಯಾಗ್ತಿದೆ ಸರ್ಕಾರಿ ಕಟ್ಟಡ

ಕೋಟಿ ಕೋಟಿ ವೆಚ್ಚದ ಹಾಸ್ಟೆಲ್‌ಗಿಲ್ಲ ಉದ್ಘಾಟನೆ ಭಾಗ್ಯ: ಪುಂಡ ಪೋಕರಿಗಳ ಅಡ್ಡೆಯಾಗ್ತಿದೆ ಸರ್ಕಾರಿ ಕಟ್ಟಡ

Published : Oct 21, 2023, 11:27 AM ISTUpdated : Oct 21, 2023, 11:28 AM IST

ಯಾರ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಅಂತರಲ್ಲ.. ಹಾಗೆ ಜನ್ರ ತೆರಿಗೆ ದುಡ್ಡನ್ನ ಸರ್ಕಾರ ಹೇಗೆ ಪೋಲು ಮಾಡ್ತಿದೆ ಅನ್ನೋದಕ್ಕೆ ಇಲ್ಲೊಂದು ಸ್ಟೋರಿಯಿದೆ. ವಿದ್ಯಾರ್ಥಿಗಳಿಗೆ ನೆರವಾಗಬೇಕಿದ್ದ ಈ ಕಟ್ಟಡ, ಉದ್ಘಾಟನೆ ಭಾಗ್ಯ ಸಿಗದೇ ಭೂತ ಬಂಗಲೆಯಾಗಿ, ಪುಂಡ ಪೋಕರಿಗಳ ತಾಣವಾಗ್ತಿದೆ.
 

ಸರ್ಕಾರ ಕೋಟಿ ಕೋಟಿ ವೆಚ್ಚ ಮಾಡಿ ನಿರ್ಮಾಣವಾದ ಕಟ್ಟಡಗಳು ಅದೇಷ್ಟೊ ವರ್ಷ ಉದ್ಘಾಟನೆ ಭಾಗ್ಯವಿಲ್ಲದೆ ಪಾಳು ಬೀಳುತ್ತಿವೆ. ಇದೇ ಸಾಲಿನಲ್ಲಿ ಬೆಂಗಳೂರಿನ ಯುನಾನಿ ಮತ್ತು ಹೋಮಿಯೋಪತಿ ಕಾಲೇಜಿನ(Unani and Homeopathy College) ವಿದ್ಯಾರ್ಥಿನಿಯರ ಹಾಸ್ಟೆಲ್(Hostel) ಕೂಡ ಸೇರಿ ಕೊಂಡಿದೆ. 2020ರಲ್ಲಿ ಬಿಜೆಪಿ(BJP)ಸರ್ಕಾರದ ಅವಧಿಯಲ್ಲಿ ಬಸವೇಶ್ವರ ನಗರದ ಸಿದ್ದಯ್ಯ ಪುರಾಣಿಕ ರಸ್ತೆಯಲ್ಲಿ ಆಗಿನ ಆರೋಗ್ಯ ಸಚಿವ ಡಾ. ಸುಧಾಕರ್(DR. Sudhakar) ಈ ಕಟ್ಟಡಕ್ಕೆ ಶಂಕು ಸ್ಥಾಪನೆ ಮಾಡಿದ್ರು. ಕಟ್ಟಡ ಕಾಮಗಾರಿ ಎಲ್ಲ ಮುಗಿದ್ರೂ, ಹೆಲ್ತ್ ಇಂಜಿನಿಯರಿಂಗ್ ವಿಭಾಗದಿಂದ  ಯೂಟಿಲೈಸೇಷನ್ ಸರ್ಟಿಫಿಕೇಟ್ ನೀಡಿಲ್ಲ. ಹೀಗಾಗಿ 2 ವರ್ಷದಿಂದ ಈ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಉದ್ಘಾಟನೆ ಭಾಗ್ಯ ಸಿಗದೇ ಈ ಕಟ್ಟಡಕ್ಕೆ ಸೆಕ್ಯೂರಿಟಿ ಇಲ್ಲದೇ, ನಿರ್ವಹಣೆಯೂ ಇಲ್ಲ. ಇದರಿಂದ ಹಾಸ್ಟೆಲ್ ಸುತ್ತಮುತ್ತ ಗಿಡಗಂಟಿಗಳು ಬೆಳೆದು ಪುಂಡ ಪೋಕರಿಗಳ ಅನೈತಿಕ ಚಟುವಟಿಕೆಯ ಅಡ್ಡೆಯಾಗಿದೆ ಎಂಬ ಆರೋಪೂ ಕೇಳಿ ಬಂದಿದೆ. ಹಾಸ್ಟೆಲ್ ಅವರಣದಲ್ಲಿರೋ ಲಕ್ಷಾಂತರ ಮೌಲ್ಯದ ಜನರೇಟರ್ಗಳು ಕಸದ ತೊಟ್ಟಿ ಸೇರುತ್ತಿವೆ. ಈ  ಬಗ್ಗೆ ಕಾಲೇಜು ಪ್ರಾಂಶುಪಾಲರು ಆಯುಷ್ ಇಲಾಖೆಗೆ ಪತ್ರ ಬರೆದ್ರೂ, ಇಲಾಖೆಯಿಂದ ಮರು ಉತ್ತರ ಸಿಕ್ಕಿಲ್ಲ. 

ಇದನ್ನೂ ವೀಕ್ಷಿಸಿ:  ಮರಳು ಮಾಫಿಯಾಗೆ ಬ್ರೇಕ್ ಹಾಕಿದ್ರೂ ಡೋಂಟ್‌ಕೇರ್‌: ಕರಾವಳಿಯಲ್ಲಿ ಸೀಜ್ ಮಾಡಿರೋ ಮರಳಿನಲ್ಲೂ ಅಕ್ರಮ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more