ಭೂ ನುಂಗಣ್ಣರಿಗೆ ಶುರುವಾಯ್ತು ಢವಢವ: 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಆರೋಪ

ಭೂ ನುಂಗಣ್ಣರಿಗೆ ಶುರುವಾಯ್ತು ಢವಢವ: 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಆರೋಪ

Published : Aug 13, 2023, 10:47 AM IST

ಸರ್ಕಾರಿ ಭೂಮಿ ಅಂದ್ರೆ ಅಪ್ಪ-ಅಮ್ಮ ಇಲ್ಲದಂತ ಅನಾಥ ಮಕ್ಕಳಂತೆ ಎಂದು ಸಿಕ್ಕಿ-ಸಿಕ್ಕ ಜಾಗಕ್ಕೆಲ್ಲಾ ಬೇಲಿ ಹಾಕ್ಕೊಂಡು ನಂದೇ ಅಂದೋರ ಬುಡಕ್ಕೆ ಬೆಂಕಿ ಬಿದ್ದಂತಾಗಿದೆ. ಬರೋಬ್ಬರಿ ಐದು ಸಾವಿರ ಎಕರೆಗೂ ಅಧಿಕ ಸರ್ಕಾರಿ ಭೂಮಿಯನ್ನ ಅಕ್ರಮವಾಗಿ ಮಂಜೂರು ಮಾಡಿಕೊಟ್ಟ ಆರೋಪ ಕಾಫಿನಾಡ ಕಾನೂನು ಪರಿಪಾಲಕರಿಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.

ಮೂಡಿಗೆರೆ ಅಪ್ಪಟ ಮಲೆನಾಡು. ಕಡೂರು ಬಯಲುಸೀಮೆ. ಚಿಕ್ಕಮಗಳೂರಿನ(Chikkamagaluru) ಈ ಎರಡೂ ತಾಲೂಕುಗಳಲ್ಲಿ ಸರ್ಕಾರಿ ಭೂಮಿ(government land) ನುಂಗಿ ನೀರು ಕುಡಿದ ಆರೋಪ ಕೇಳಿ ಬಂದಿದೆ. ಮೂಡಿಗೆರೆಯಲ್ಲಿ 1400, ಕಡೂರಲ್ಲಿ 3500 ಎಕರೆ.. ಒಟ್ಟು ಸುಮಾರು 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವ ಆರೋಪವಿದೆ. ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದಲ್ಲಿ ಸರ್ಕಾರಿ ಭೂಮಿಗೆ ನಕಲಿ ಅಪ್ಪ-ಅಮ್ಮನನ್ನು ಸೃಷ್ಠಿಸಿ ಭೂಮಿ ಕಬಳಿಸಿರುವ ಅಂಶ ಬೆಳಕಿಗೆ ಬಂದಿದೆ. ರಾಜ್ಯದಲ್ಲೇ ಅತಿ ದೊಡ್ಡ ಲ್ಯಾಂಡ್ ಸ್ಕ್ಯಾಂ(Land Scam) ಎನ್ನಲಾಗ್ತಿದೆ. ಇದೀಗ ಈ ಹಗರಣದ ತನಿಖೆಗೆ ಸರ್ಕಾರ ಆದೇಶ ನೀಡಿದ್ದು ಭೂ ನುಂಗಣ್ಣರಿಗೆ ನಡುಕ ಶುರುವಾಗಿದೆ. ಸತ್ತವರ ಹೆಸರಲ್ಲಿ. ಆ ಊರಲ್ಲಿ ವಾಸವೇ ಇಲ್ಲದವರ ಹೆಸರಲ್ಲೂ ಸರ್ಕಾರಿ ಅಕ್ರಮವಾಗಿ ಖಾತಾ ಮಾಡಿಕೊಡಲಾಗಿದೆಯಂತೆ. ಭೂಮಿ ಮಂಜೂರು ಮಾಡಿಸಿಕೊಂಡವರ ಪೈಕಿ ರಾಜಕೀಯ ನಾಯಕರ ಹಿಂಬಾಲಕರೂ ಇದ್ದಾರಂತೆ. ಭೂ ಗೋಲ್ಮಾಲ್ ಬಗ್ಗೆ ಈಗಾಗಲೇ ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ನೀಡಿದೆ. ಸರ್ಕಾರ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದು, ತನಿಖೆಗಾಗಿ 15 ತಹಶೀಲ್ದಾರ್‌ರನ್ನ ನೇಮಕ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ PFI ಸಂಪರ್ಕವಿದೆಯಾ..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!