ಭೂ ನುಂಗಣ್ಣರಿಗೆ ಶುರುವಾಯ್ತು ಢವಢವ: 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಆರೋಪ

ಭೂ ನುಂಗಣ್ಣರಿಗೆ ಶುರುವಾಯ್ತು ಢವಢವ: 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿ ಕಬಳಿಕೆ ಆರೋಪ

Published : Aug 13, 2023, 10:47 AM IST

ಸರ್ಕಾರಿ ಭೂಮಿ ಅಂದ್ರೆ ಅಪ್ಪ-ಅಮ್ಮ ಇಲ್ಲದಂತ ಅನಾಥ ಮಕ್ಕಳಂತೆ ಎಂದು ಸಿಕ್ಕಿ-ಸಿಕ್ಕ ಜಾಗಕ್ಕೆಲ್ಲಾ ಬೇಲಿ ಹಾಕ್ಕೊಂಡು ನಂದೇ ಅಂದೋರ ಬುಡಕ್ಕೆ ಬೆಂಕಿ ಬಿದ್ದಂತಾಗಿದೆ. ಬರೋಬ್ಬರಿ ಐದು ಸಾವಿರ ಎಕರೆಗೂ ಅಧಿಕ ಸರ್ಕಾರಿ ಭೂಮಿಯನ್ನ ಅಕ್ರಮವಾಗಿ ಮಂಜೂರು ಮಾಡಿಕೊಟ್ಟ ಆರೋಪ ಕಾಫಿನಾಡ ಕಾನೂನು ಪರಿಪಾಲಕರಿಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.

ಮೂಡಿಗೆರೆ ಅಪ್ಪಟ ಮಲೆನಾಡು. ಕಡೂರು ಬಯಲುಸೀಮೆ. ಚಿಕ್ಕಮಗಳೂರಿನ(Chikkamagaluru) ಈ ಎರಡೂ ತಾಲೂಕುಗಳಲ್ಲಿ ಸರ್ಕಾರಿ ಭೂಮಿ(government land) ನುಂಗಿ ನೀರು ಕುಡಿದ ಆರೋಪ ಕೇಳಿ ಬಂದಿದೆ. ಮೂಡಿಗೆರೆಯಲ್ಲಿ 1400, ಕಡೂರಲ್ಲಿ 3500 ಎಕರೆ.. ಒಟ್ಟು ಸುಮಾರು 5 ಸಾವಿರ ಎಕರೆಗೂ ಹೆಚ್ಚು ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವ ಆರೋಪವಿದೆ. ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದಲ್ಲಿ ಸರ್ಕಾರಿ ಭೂಮಿಗೆ ನಕಲಿ ಅಪ್ಪ-ಅಮ್ಮನನ್ನು ಸೃಷ್ಠಿಸಿ ಭೂಮಿ ಕಬಳಿಸಿರುವ ಅಂಶ ಬೆಳಕಿಗೆ ಬಂದಿದೆ. ರಾಜ್ಯದಲ್ಲೇ ಅತಿ ದೊಡ್ಡ ಲ್ಯಾಂಡ್ ಸ್ಕ್ಯಾಂ(Land Scam) ಎನ್ನಲಾಗ್ತಿದೆ. ಇದೀಗ ಈ ಹಗರಣದ ತನಿಖೆಗೆ ಸರ್ಕಾರ ಆದೇಶ ನೀಡಿದ್ದು ಭೂ ನುಂಗಣ್ಣರಿಗೆ ನಡುಕ ಶುರುವಾಗಿದೆ. ಸತ್ತವರ ಹೆಸರಲ್ಲಿ. ಆ ಊರಲ್ಲಿ ವಾಸವೇ ಇಲ್ಲದವರ ಹೆಸರಲ್ಲೂ ಸರ್ಕಾರಿ ಅಕ್ರಮವಾಗಿ ಖಾತಾ ಮಾಡಿಕೊಡಲಾಗಿದೆಯಂತೆ. ಭೂಮಿ ಮಂಜೂರು ಮಾಡಿಸಿಕೊಂಡವರ ಪೈಕಿ ರಾಜಕೀಯ ನಾಯಕರ ಹಿಂಬಾಲಕರೂ ಇದ್ದಾರಂತೆ. ಭೂ ಗೋಲ್ಮಾಲ್ ಬಗ್ಗೆ ಈಗಾಗಲೇ ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ನೀಡಿದೆ. ಸರ್ಕಾರ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದು, ತನಿಖೆಗಾಗಿ 15 ತಹಶೀಲ್ದಾರ್‌ರನ್ನ ನೇಮಕ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ PFI ಸಂಪರ್ಕವಿದೆಯಾ..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!