Stop Illegal Mining:  ದ.ಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಡಿ. ಸಿ ಕೊರಳ ಪಟ್ಟಿ ಹಿಡಿತೀವಿ: ಜಗದೀಶ್ ಕಾರಂತ್

Stop Illegal Mining: ದ.ಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಡಿ. ಸಿ ಕೊರಳ ಪಟ್ಟಿ ಹಿಡಿತೀವಿ: ಜಗದೀಶ್ ಕಾರಂತ್

Published : Nov 22, 2021, 02:08 PM ISTUpdated : Nov 22, 2021, 03:51 PM IST

- ಬಂಟ್ವಾಳದ ಕಾರಿಂಜೇಶ್ವರ ದೇವಸ್ಥಾನ ಉಳಿಸಿ ಹೋರಾಟದಲ್ಲಿ ಜಗದೀಶ್ ಕಾರಂತ ಕಿಡಿ

- ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಿಲ್ಲಿಸಲು ನಡೆದ ಬೃಹತ್ ಪ್ರತಿಭಟನೆಯಲ್ಲಿ ವಾಗ್ದಾಳಿ

- ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ಪ್ರಚೋದನಕಾರಿ ಮಾತು

ಮಂಗಳೂರು (ನ. 22): ಬಂಟ್ವಾಳ (Bantwal) ತಾಲೂಕಿನ ವಗ್ಗ ಗ್ರಾಮದಲ್ಲಿ ಬರುವ ಕಾರಿಂಜೀಶ್ವರ  ಕ್ಷೇತ್ರದ ತಪ್ಪಲಿನಲ್ಲಿ ಅಕ್ರಮ ಗಣಿಗಾರಿಕೆ (Illegal Mining) ನಡೆಯುತ್ತಿದ್ದು ಇದು ಕ್ಷೇತ್ರದಲ್ಲಿರೊ ದೇವಸ್ಥಾನಕ್ಕೆ ಧಕ್ಕೆ ತರುತ್ತಿದೆ ಅನ್ನೊ ಆರೋಪ ಕೇಳಿ ಬಂದಿದೆ.  ಈ ದೇವಸ್ಥಾನದ ಬುಡದಲ್ಲೇ ಭಾರೀ ಪ್ರಮಾಣದ ಸ್ಟೋಟಕ ಸಂಗ್ರಹ ಮಾಡಲಾಗಿದ್ದು, ಪೌರಾಣಿಕ ಶಿವ ಕ್ಷೇತ್ರದ ಬುಡದಲ್ಲೇ ಡೈನಾಮೆಟ್ ಇಟ್ಟು ಬಂಡೆ ಸ್ಟೋಟಿಸುತ್ತಾ ಇದ್ದಾರೆ. 

ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಬೃಹತ್ ಪ್ರತಿಭಟನೆ ನಡೆದಿದೆ. ಈ ಪ್ರತಿಭಟನಾ ರ್ಯಾಲಿಯಲ್ಲಿ  ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ (Jagadesh Karanth) ಪ್ರಚೋದನಕಾರಿ ಮಾತುಗಳನ್ನಾಡಿದ್ದಾರೆ.

' ಕಲ್ಲು ಗಣಿಗಾರಿಕೆ ನಿಲ್ಲಿಸಲು ಡಿ.21 ರವರೆಗೆ ಜಿಲ್ಲಾಧಿಕಾರಿಗೆ ಗಡುವು ಕೊಡ್ತೇವೆ. ಇಲ್ಲದೇ ಇದ್ದರೆ ಡಿ.21ರಂದು ಎಲ್ಲರೂ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆಯನ್ನ ಹಾಕ್ತೇವೆ. ಅವನ ಕೊರಳು ಪಟ್ಟಿಯನ್ನ ಹಿಡೀತೀವಿ, ತಾಕತ್ತಿದ್ರೆ ಕಲ್ಲು ಗಣಿಗಾರಿಕೆ ನಿಲ್ಲಿಸು, ಇಲ್ಲಾಂದ್ರೆ ಟ್ರಾನ್ಸ್ಪರ್ ತೆಗೊಂಡು ಹೋಗು. ಜಿಲ್ಲಾ ಉಸ್ತುವಾರಿ ಮಂತ್ರಿಗೂ ಹೇಳ್ತೀವಿ, ಗಣಿಗಾರಿಕೆ ನಿಲ್ಲಿಸಿ, ಇಲ್ಲಾಂದ್ರೆ ರಾಜೀನಾಮೆ ಕೊಟ್ಟು ‌ಮನೆಗೆ ಹೋಗು, ಬಂಟ್ವಾಳ ಎಂಎಲ್ ಎಗೂ ಹೇಳ್ತೀವಿ, ಅದನ್ನ ನಿಲ್ಲಿಸು, ಇಲ್ಲಾಂದ್ರೆ ರಾಜೀನಾಮೆ ಕೊಡು' ಎಂದು ಎಚ್ಚರಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more