ಮರಳು ಮಾಫಿಯಾಗೆ ಬ್ರೇಕ್ ಹಾಕಿದ್ರೂ ಡೋಂಟ್‌ಕೇರ್‌: ಕರಾವಳಿಯಲ್ಲಿ ಸೀಜ್ ಮಾಡಿರೋ ಮರಳಿನಲ್ಲೂ ಅಕ್ರಮ

ಮರಳು ಮಾಫಿಯಾಗೆ ಬ್ರೇಕ್ ಹಾಕಿದ್ರೂ ಡೋಂಟ್‌ಕೇರ್‌: ಕರಾವಳಿಯಲ್ಲಿ ಸೀಜ್ ಮಾಡಿರೋ ಮರಳಿನಲ್ಲೂ ಅಕ್ರಮ

Published : Oct 21, 2023, 11:03 AM ISTUpdated : Oct 21, 2023, 11:04 AM IST

ಯುವಕರಲ್ಲಿ ಮೊಬೈಲ್ ಫೋನ್ ಹುಚ್ಚು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದು ಯಾವ ಮಟ್ಟಕ್ಕೆಂದರೆ ಫೋನ್ ಕೊಡಿಸಲಿಲ್ಲವೆಂದರೆ ಆತ್ಮಹತ್ಯೆಗೂ ಹಿಂಜರಿಯದಷ್ಟು ಗೀಳಿಗೆ ಬಿದ್ದಿದ್ದಾರೆ.. ಇಂಥದ್ದೇ ಒಂದು ಘಟನೆ ಇದೀಗ ಚಿತ್ರದುರ್ಗದಲ್ಲಿ ನಡೆದಿದೆ.
 

ಕರಾವಳಿ ಭಾಗದಲ್ಲಿ ಕಳೆದ ನಾಲ್ಕೈದು ತಿಂಗಳಿನಿಂದ ಮರಳು ಮಾಫಿಯಾಗೆ(Sand Mafia) ಬ್ರೇಕ್ ಹಾಕಲಾಗಿದೆ.ಸಿಆರ್‌ಜೆಡ್ ವಲಯದಲ್ಲಿ ಮರಳನ್ನು ತೆಗೆದು ಮಾರಾಟ ಮಾಡುವಂತಿಲ್ಲ ಎಂದು ರಾಷ್ಟ್ರೀಯ ಹಸಿರು ಪೀಠ ಆದೇಶ ಮಾಡಿತ್ತು. ಆದ್ರೆ ಕಾರವಾರದಲ್ಲಿ(Karwar) ಮಾತ್ರ ಮರಳು ದಂಧೆಕೋರರು ಈ ಆದೇಶಕ್ಕೆ ಡೋಂಟ್ಕೇರ್ ಎನ್ನುತ್ತಿದ್ದಾರೆ. ಅನಧಿಕೃತವಾಗಿ ಮರಳು ತೆಗೆದು ಮಾರಾಟ ಮಾಡ್ತಿದ್ದಾರೆ ಎನ್ನೋ ಆರೋಪ ಕೇಳಿಬಂದಿದೆ. ಕಾರವಾರ ತಾಲೂಕಿನ ಕಾಳಿ ನದಿಯಲ್ಲಿ  ಅಕ್ರಮವಾಗಿ ಮರಳು(illegal sand trafficking) ತೆಗೆದು ಮಾರಾಟ ಮಾಡ್ತಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆ ಎಸಿ ಜಯಲಕ್ಷ್ಮೀ, ಜೀವದ ಹಂಗನ್ನೇ ತೊರೆದು ರಾತ್ರೋ ರಾತ್ರಿ ಮರಳಿನ ಅಡ್ಡೆಗಳ ಮೇಲೆ ದಾಳಿ ನಡೆಸಿ ಮರಳು ಸೀಜ್ ಮಾಡಿದ್ರು. ಸೀಜ್ ಮಾಡಿದ ಮರಳನ್ನ  ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ಮುಂದಿನ ಕ್ರಮಕ್ಕೆ ಸೂಚನೆ ನೀಡಿದ್ರು. ಆದ್ರೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಯಾವುದೇ ಪ್ರಕಟಣೆ ಹಾಗೂ ಮಾಹಿತಿ ನೀಡದೆ ಗುತ್ತಿಗೆದಾರರಿಗೆ ಮಾರಾಟ ಮಾಡಿದ್ದಾರೆ ಅನ್ನೊ ಆರೋಪ ಕೇಳಿಬಂದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಮರಳು ಮಾರಾಟದ ಬಗ್ಗೆ ಮಾಹಿತಿ ನೀಡಲು ಎಸಿ ಜಯಲಕ್ಷ್ಮೀ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಆದ್ರೆ, ಗಣಿ ಇಲಾಖೆಯ ಹಿರಿಯ ಜಿಯೋಲಜಿಸ್ಟ್ ಆಶಾ ಮತ್ತು ಅಧಿಕಾರಿಗಳು ಮಾಹಿತಿ ನೀಡಿಲ್ಲ. ಇದ್ರಿಂದ ಅಧಿಕಾರಿಗಳ ನಡುವೆ ಕೋಲ್ಡ್ ವಾರ್ ಶುರುವಾಗಿದೆ. ಇನ್ನು ಸೀಜ್ ಮಾಡಿದ್ದ ಮರಳನ್ನು ಗುತ್ತಿಗೆದಾರರಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬರ್ತಿದ್ದಂತೆ, ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಗುತ್ತಿಗೆದಾರನಾಗಿರುವ ಯುವ ಕಾಂಗ್ರೆಸ್ ಮುಖಂಡನಿಗೆ 5 ಲಕ್ಷ ರೂಪಾಯಿ ಬೆಲೆ ಬಾಳುವ ಮರಳನ್ನು ಕೇವಲ 35 ಸಾವಿರ ರೂಪಾಯಿಗೆ ಮಾರಾಟ ಮಾಡಿ ಗೋಲ್ಮಾಲ್ ಮಾಡಲಾಗಿದೆ ಎಂದು ಆರೋಪವೂ ಕೇಳಿ ಬಂದಿದೆ. ಈ ಬಗ್ಗೆ  ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ತನಿಖೆಗೆ ಆಗ್ರಹಿಸಿ ವಿಧಾನ ಪರಿಷತ್ ಸಭಾಪತಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಮಂಗಳೂರಿನಲ್ಲಿ ಭುಗಿಲೆದ್ದ ಮತ್ತೊಂದು ವಿವಾದ: ದಸರಾ ದಾಂಡಿಯಾ ನೈಟ್ಸ್‌ಗೆ ಹಿಂದೂ ಸಂಘಟನೆಗಳ ಕಿಡಿ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more