ಸಿದ್ದರಾಮಯ್ಯ ಕನಸಿನ ಯೋಜನೆಯಲ್ಲೂ ಅಕ್ರಮ: ಗುತ್ತಿಗೆದಾರ,ಅಧಿಕಾರಿಗಳ ನಡುವೆ ಕಮಿಷನ್ ಫೈಟ್

ಸಿದ್ದರಾಮಯ್ಯ ಕನಸಿನ ಯೋಜನೆಯಲ್ಲೂ ಅಕ್ರಮ: ಗುತ್ತಿಗೆದಾರ,ಅಧಿಕಾರಿಗಳ ನಡುವೆ ಕಮಿಷನ್ ಫೈಟ್

Published : Oct 20, 2023, 10:02 AM ISTUpdated : Oct 20, 2023, 01:29 PM IST

ಬಡವರಿಗಾಗಿ ಜಾರಿಗೆ ತಂದ ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್. ಆದ್ರೆ ಈ ಯೋಜನೆಯಲ್ಲೂ ಈಗ ಕಮಿಷನ್ ವಾಸನೆ ಶುರುವಾಗಿದೆ. ಕಮಿಷನ್ ಗದ್ದಲ, ಅಸಮರ್ಪಕ ನಿರ್ವಹಣೆಯಿಂದಲೇ  ಇಂದಿರಾ ಕ್ಯಾಂಟೀನ್ ಯೋಜನೆ ಹಳ್ಳ ಹಿಡಿಯೋ ಲಕ್ಷಣ ಕಾಣ್ತಿದೆ.
 

ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆ  ಇಂದಿರಾ ಕ್ಯಾಂಟೀನ್ (Indira canteen). ಬಡವರಿಗೆ ಕಾರ್ಮಿಕರಿಗೆ ಕಡಿಮೆ ದುಡ್ಡಿನಲ್ಲಿ ಉತ್ತಮ ಆಹಾರ ನೀಡುವ ಯೋಜನೆ..ಆದ್ರೆ ಇದಕ್ಕೆ ಕಮಿಷನ್ ಭೂತ ಅಂಟಿಕೊಡಿದೆ. ಬಿಲ್ ಪಾಪತಿಸಲು ಅಧಿಕಾರಿಗಳು ಹಣ ಕೇಳ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾವೇರಿ (Haveri) ಹಿರೇಕೆರೂರು ಹಾಗೂ ರಾಣೆಬೆನ್ನೂರಿನ ಇಂದಿರಾ ಕ್ಯಾಂಟೀನ್ಗಳಿಗೆ ಒಂದು ವರ್ಷದ  35 ಲಕ್ಷ ರೂಪಾಯಿಗೂ ಅಧಿಕ ಬಿಲ್ ಬಾಕಿ ಇದೆ ಅಂತೆ. ಹಣ ಬಿಡುಗಡೆ ಮಾಡಿ ಅಂದ್ರೆ ಅಧಿಕಾರಿಗಳು ಕಮಿಷನ್ ಕೊಡಿ ಅಂತಾ ಕೇಳ್ತಾರೆ ಅಂತಾ ಗುತ್ತಿಗೆದಾರ ವಿಶ್ವನಾಥ್‌ರೆಡ್ಡಿ ದರ್ಶನಾಪುರ ಆರೋಪಿಸಿದ್ದಾರೆ. ಇನ್ನು ಇಂದಿರಾ ಕ್ಯಾಂಟೀನ್ ಕಮಿಷನ್(Commission)ಆರೋಪಕ್ಕೆ  ಡಿಸಿ ಸೇರಿದಂತೆ ಹಿರಿಯ ಅಧಿಕಾರಿಗಳು ಕಿಡಿ ಕಾರಿದ್ದಾರೆ. ಪ್ರತಿ ತಿಂಗಳು ಬಿಲ್ ಸಲ್ಲಿಸದೇ ಆರೇಳು ತಿಂಗಳ ಬಿಲ್ ಒಂದೇ ಸಲ ಕೊಟ್ಟಿದ್ದಾರೆ. ಕಾಂಟ್ರಾಕ್ಟರ್ ಸಲ್ಲಿಸಿದ ಬಿಲ್ನಲ್ಲಿ  ವ್ಯತ್ಯಾಸ ಕಂಡಿದ್ದಕ್ಕೆ ನೋಟಿಸ್ ಜಾರಿ ಮಾಡಲಾಗಿದೆ ಅಂತಾ ಡಿಸಿ ಹೇಳಿದ್ರೆ..ಕಮಿಷನ್ ಕೇಳಿದ್ದಕ್ಕೆ ದಾಖಲೆ ಇದ್ರೆ ಕೊಡಿ ಅಂತಾ ಯೋಜನಾ ನಿರ್ದೇಶಕಿ ಮಮತಾ ಗುತ್ತಿಗೆದಾರರ ವಿರುದ್ಧ ವಾಗ್ದಾಳಿ ನಡೆಸಿದ್ರು. ಸಿದ್ದರಾಮಯ್ಯರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ..ಹಸಿದವರ ಹೊಟ್ಟೆ ತುಂಬಿಸುವ ಮಹತ್ವಾಕಾಂಕ್ಷೆ ಯೋಜನೆ..ಆದ್ರೆ ಅಧಿಕಾರಿಗಳ,ಗುತ್ತಿಗೆದಾರರ ಜಟಾಪಟಿಯಿಂದ ಕ್ಯಾಂಟೀನ್‌ಗೆ ಶಾಶ್ವತವಾದಗಿ ಬೀಗ ಬೀಳೋ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಇಸ್ರೇಲ್ ವಿರುದ್ಧ ಒಂದಾದ 57 ಮುಸ್ಲಿಂ ರಾಷ್ಟ್ರಗಳು: ಯುದ್ಧ ನಿಲ್ಲಿಸಲೂ ಒಐಸಿ ಒಕ್ಕೂಟದಿಂದ ಎಚ್ಚರಿಕೆ!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more