ಸಿದ್ದರಾಮಯ್ಯ ಕನಸಿನ ಯೋಜನೆಯಲ್ಲೂ ಅಕ್ರಮ: ಗುತ್ತಿಗೆದಾರ,ಅಧಿಕಾರಿಗಳ ನಡುವೆ ಕಮಿಷನ್ ಫೈಟ್

ಸಿದ್ದರಾಮಯ್ಯ ಕನಸಿನ ಯೋಜನೆಯಲ್ಲೂ ಅಕ್ರಮ: ಗುತ್ತಿಗೆದಾರ,ಅಧಿಕಾರಿಗಳ ನಡುವೆ ಕಮಿಷನ್ ಫೈಟ್

Published : Oct 20, 2023, 10:02 AM ISTUpdated : Oct 20, 2023, 01:29 PM IST

ಬಡವರಿಗಾಗಿ ಜಾರಿಗೆ ತಂದ ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್. ಆದ್ರೆ ಈ ಯೋಜನೆಯಲ್ಲೂ ಈಗ ಕಮಿಷನ್ ವಾಸನೆ ಶುರುವಾಗಿದೆ. ಕಮಿಷನ್ ಗದ್ದಲ, ಅಸಮರ್ಪಕ ನಿರ್ವಹಣೆಯಿಂದಲೇ  ಇಂದಿರಾ ಕ್ಯಾಂಟೀನ್ ಯೋಜನೆ ಹಳ್ಳ ಹಿಡಿಯೋ ಲಕ್ಷಣ ಕಾಣ್ತಿದೆ.
 

ಸಿಎಂ ಸಿದ್ದರಾಮಯ್ಯ ಕನಸಿನ ಯೋಜನೆ  ಇಂದಿರಾ ಕ್ಯಾಂಟೀನ್ (Indira canteen). ಬಡವರಿಗೆ ಕಾರ್ಮಿಕರಿಗೆ ಕಡಿಮೆ ದುಡ್ಡಿನಲ್ಲಿ ಉತ್ತಮ ಆಹಾರ ನೀಡುವ ಯೋಜನೆ..ಆದ್ರೆ ಇದಕ್ಕೆ ಕಮಿಷನ್ ಭೂತ ಅಂಟಿಕೊಡಿದೆ. ಬಿಲ್ ಪಾಪತಿಸಲು ಅಧಿಕಾರಿಗಳು ಹಣ ಕೇಳ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಾವೇರಿ (Haveri) ಹಿರೇಕೆರೂರು ಹಾಗೂ ರಾಣೆಬೆನ್ನೂರಿನ ಇಂದಿರಾ ಕ್ಯಾಂಟೀನ್ಗಳಿಗೆ ಒಂದು ವರ್ಷದ  35 ಲಕ್ಷ ರೂಪಾಯಿಗೂ ಅಧಿಕ ಬಿಲ್ ಬಾಕಿ ಇದೆ ಅಂತೆ. ಹಣ ಬಿಡುಗಡೆ ಮಾಡಿ ಅಂದ್ರೆ ಅಧಿಕಾರಿಗಳು ಕಮಿಷನ್ ಕೊಡಿ ಅಂತಾ ಕೇಳ್ತಾರೆ ಅಂತಾ ಗುತ್ತಿಗೆದಾರ ವಿಶ್ವನಾಥ್‌ರೆಡ್ಡಿ ದರ್ಶನಾಪುರ ಆರೋಪಿಸಿದ್ದಾರೆ. ಇನ್ನು ಇಂದಿರಾ ಕ್ಯಾಂಟೀನ್ ಕಮಿಷನ್(Commission)ಆರೋಪಕ್ಕೆ  ಡಿಸಿ ಸೇರಿದಂತೆ ಹಿರಿಯ ಅಧಿಕಾರಿಗಳು ಕಿಡಿ ಕಾರಿದ್ದಾರೆ. ಪ್ರತಿ ತಿಂಗಳು ಬಿಲ್ ಸಲ್ಲಿಸದೇ ಆರೇಳು ತಿಂಗಳ ಬಿಲ್ ಒಂದೇ ಸಲ ಕೊಟ್ಟಿದ್ದಾರೆ. ಕಾಂಟ್ರಾಕ್ಟರ್ ಸಲ್ಲಿಸಿದ ಬಿಲ್ನಲ್ಲಿ  ವ್ಯತ್ಯಾಸ ಕಂಡಿದ್ದಕ್ಕೆ ನೋಟಿಸ್ ಜಾರಿ ಮಾಡಲಾಗಿದೆ ಅಂತಾ ಡಿಸಿ ಹೇಳಿದ್ರೆ..ಕಮಿಷನ್ ಕೇಳಿದ್ದಕ್ಕೆ ದಾಖಲೆ ಇದ್ರೆ ಕೊಡಿ ಅಂತಾ ಯೋಜನಾ ನಿರ್ದೇಶಕಿ ಮಮತಾ ಗುತ್ತಿಗೆದಾರರ ವಿರುದ್ಧ ವಾಗ್ದಾಳಿ ನಡೆಸಿದ್ರು. ಸಿದ್ದರಾಮಯ್ಯರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ..ಹಸಿದವರ ಹೊಟ್ಟೆ ತುಂಬಿಸುವ ಮಹತ್ವಾಕಾಂಕ್ಷೆ ಯೋಜನೆ..ಆದ್ರೆ ಅಧಿಕಾರಿಗಳ,ಗುತ್ತಿಗೆದಾರರ ಜಟಾಪಟಿಯಿಂದ ಕ್ಯಾಂಟೀನ್‌ಗೆ ಶಾಶ್ವತವಾದಗಿ ಬೀಗ ಬೀಳೋ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ:  ಇಸ್ರೇಲ್ ವಿರುದ್ಧ ಒಂದಾದ 57 ಮುಸ್ಲಿಂ ರಾಷ್ಟ್ರಗಳು: ಯುದ್ಧ ನಿಲ್ಲಿಸಲೂ ಒಐಸಿ ಒಕ್ಕೂಟದಿಂದ ಎಚ್ಚರಿಕೆ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more