Kolar: ಜಿಲ್ಲೆಯಲ್ಲಿ ಚಿನ್ನಕ್ಕಿಂತ ರೇಷ್ಮೆಯೇ ದುಬಾರಿ, ರೈತರ ಮುಖದಲ್ಲಿ ಮಂದಹಾಸ

Kolar: ಜಿಲ್ಲೆಯಲ್ಲಿ ಚಿನ್ನಕ್ಕಿಂತ ರೇಷ್ಮೆಯೇ ದುಬಾರಿ, ರೈತರ ಮುಖದಲ್ಲಿ ಮಂದಹಾಸ

Suvarna News   | Asianet News
Published : Jan 08, 2022, 02:46 PM ISTUpdated : Jan 08, 2022, 03:49 PM IST

ಕೋಲಾರ (Kolar) ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ರೇಷ್ಮೆ ಉತ್ಪಾದನೆ ಕೂಡಾ ತೀವ್ರ ಕುಸಿತಕಂಡಿದೆ. ನಿರಂತರ ಮಳೆಯಿಂದ ರೈತರು ಬೆಳೆದಂತಹ ರೇಷ್ಮೆ  (Silk) ಬೆಳೆ ಹಾಳಾಗಿರೋ ಪರಿಣಾಮ ಮಾರುಕಟ್ಟೆಯಲ್ಲಿ ರೇಷ್ಮೆಗೆ ಬಂಗಾರದ ಬೆಲೆ ಬಂದಿದೆ. 

ಕೋಲಾರ (ಜ. 08):  ಅವಿಭಜಿತ ಕೋಲಾರ (Kolar) ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಗಳಲ್ಲಿ ಇತ್ತೀಚೆಗೆ ಸುರಿದ ನಿರಂತರ ಮಳೆಯ ಪರಿಣಾಮ ರೇಷ್ಮೆ ( Silk) ಬೆಲೆ ದಿಢೀರ್ ಏರಿಕೆ ಕಂಡಿದೆ. ಮಳೆಗೆ ರೇಷ್ಮೆ ಬೆಳೆ ಹಾಳಾಗಿರೋ ಹಿನ್ನಲೆಯಲ್ಲಿ ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ರೇಷ್ಮೆ ಪೂರೈಕೆಯಾಗುತ್ತಿಲ್ಲ.ಇದರ ಪರಿಣಾಮವಾಗಿ ರೇಷ್ಮೆಗೂಡು ಬೆಲೆ ಹೆಚ್ಚಾಗಿದೆ. ಎರಡ್ಮೂರು ತಿಂಗಳಿನಿಂದ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ 352 ರೇಷ್ಮೆ ಬೆಳೆಗಾರರು 316 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಹಿಪ್ಪು ನೇರಳೆ ಬೆಳೆಗೆ ಹಾನಿಯಾಗಿದೆ. 

ಕೋಲಾರ ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ರೇಷ್ಮೆ ಉತ್ಪಾದನೆ ಕೂಡಾ ತೀವ್ರ ಕುಸಿತಕಂಡಿದೆ. ನಿರಂತರ ಮಳೆಯಿಂದ ರೈತರು ಬೆಳೆದಂತಹ ರೇಷ್ಮೆ ಬೆಳೆ ಹಾಳಾಗಿರೋ ಪರಿಣಾಮ ಮಾರುಕಟ್ಟೆಯಲ್ಲಿ ರೇಷ್ಮೆಗೆ ಬಂಗಾರದ ಬೆಲೆ ಬಂದಿದೆ. ಕೋಲಾರದ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಮಿಶ್ರತಳಿ ರೇಷ್ಮೆಗೆ 700 ರುಪಾಯಿ ಇದ್ದರೆ, ಬೈವೋಲ್ಟೀನ್ ಬೆಲೆಯು ಕೆಜಿಗೆ 800 ರುಪಾಯಿ ದಾಟಿದೆ. ಗುಣಮಟ್ಟದ ರೇಷ್ಮೆ ಬೆಳೆ ಬೆಳೆದಿರುವ ರೈತರಿಗೆ ಸುಗ್ಗಿಕಾಲ ಎನ್ನುವಂತಾಗಿದೆ. 

ಕೋಲಾರ ಜಿಲ್ಲೆಯ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಿಪ್ಪುನೇರಳೆ ಸೊಪ್ಪು ಬೆಳೆಯಲಾಗುತ್ತಿದೆ.19 ಸಾವಿರ ರೈತರು ಜಿಲ್ಲೆಯಲ್ಲಿ ರೇಷ್ಮೆ ಕೃಷಿ ಮಾಡುತ್ತಿದ್ದಾರೆ. ಕಳೆದೊಂದು ತಿಂಗಳಿನಿಂದ  ರೇಷ್ಮೆ ಗೂಡಿನ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಬೆಲೆ ಏರಿಕೆಗೆ ಚಳಿಗಾಲವು ಕಾರಣವಾಗಿದೆ. ಚಳಿಗಾಲದಲ್ಲಿ ಹಿಪ್ಪುನೇರಳೆ ಉತ್ಪಾದನೆ ಕುಂಠಿತಗೊಂಡ ಪರಿಣಾಮ ರೇಷ್ಮೆಗೂಡು ಉತ್ಪಾದನೆಯೂ ಕಡಿಮೆಯಾಗಿದೆ. 

ಕೋಲಾರದ ರೇಷ್ಮೆ ಮಾರುಕಟ್ಟೆಯಲ್ಲಿ ಪ್ರತಿನಿತ್ಯ 5 ಟನ್ ರೇಷ್ಮೆಗೂಡಿಗೆ ಬೇಡಿಕೆಯಿದೆ. ಆದ್ರೆ, ಚಳಿಗಾಲದ ಜೊತೆಗೆ ಕಳೆದ ತಿಂಗಳ ಮಳೆಯಿಂದಾಗಿ ಹಿಪ್ಪುನೇರಳೆ ಬೆಳೆ ಕೊಳೆತು ಬೆಳೆ ಹಾಳಾಗಿದೆ. ಮಾರುಕಟ್ಟೆಗೆ ನಿತ್ಯ 2 ಟನ್ ಮಾತ್ರ ರೇಷ್ಮೆಗೂಡು ಪೂರೈಕೆಯಾಗುತ್ತಿದೆ.ಇದ್ರಿಂದ ಪ್ರತಿ ಕೆಜಿ ರೇಷ್ಮೆಗೂಡಿಗೆ 700 ರಿಂದ 800 ರೂಪಾಯಿ ಮುಟ್ಟಿದೆ.

 ಅಕ್ಟೋಬರ್ ತಿಂಗಳಲ್ಲಿ ಕೋಲಾರ ರೇಷ್ಮೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಮಿಶ್ರತಳಿ ರೇಷ್ಮೆಗೆ ಬೆಲೆ ಗರಿಷ್ಠ 500-600 ರೂಪಾಯಿಯಿತ್ತು. ಆದ್ರೆ, ನವೆಂಬರ್ ತಿಂಗಳಲ್ಲಿ ಮಳೆಯ ನಂತರ ಒಂದು ಕೆಜಿ ರೇಷ್ಮೆಗೂಡು 700 ರೂಪಾಯಿಗಿಂತ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ಬೈವೋಲ್ಟಿನ್ 700 ರಿಂದ 900 ರುಪಾಯಿಗೆ ಮಾರಾಟವಾಗುತ್ತಿದೆ. ಕೊರೊನಾ ಹಾಗೂ ಚೀನಾದಲ್ಲಿಯೂ ಈ ವರ್ಷ ಹೆಚ್ಚು ಮಳೆ ಸುರಿದಿರುವ ಕಾರಣ ಅಲ್ಲಿಂದ ಬರುವ ರೇಷ್ಮೆಯ ಆಮದು ಸಹ ಸ್ಥಗಿತಗೊಂಡಿದೆ. ಚಳಿಗಾಲದಲ್ಲಿ ರೇಷ್ಮೆಗೆ ಸುಣ್ಣಕಟ್ಟು ರೋಗ ಹೆಚ್ಚಾಗಿರುವುದೇ ಬೆಲೆ ಏರಿಕೆಗೆ ಕಾರಣವಾಗಿದೆ. ಬೆಲೆ ಏರಿಕೆಯಿಂದ ರೇಷ್ಮೆ ಬೆಳೆಗಾರರು ಸಂತೋಷ ಪಡುವಂಥ ಸ್ಥಿತಿ ಇಲ್ಲ. ಅದೃಷ್ಟವಿದ್ದವರಿಗೆ ಮಾತ್ರ ಬೆಲೆ ಏರಿಕೆಯ ಲಾಭ ಎನ್ನುವಂತಾಗಿದೆ.

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more