International Women's Day : ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ಜೀವನ ಪೂರ್ತಿ

International Women's Day : ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ಜೀವನ ಪೂರ್ತಿ

Published : Mar 08, 2022, 09:53 PM IST

* ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ
* ಪುರುಷರಿಗೆ ಮಹಿಳೆಯರೇ ಸ್ಪೂರ್ತಿ, ಅವರಿಂದಲೇ ನಾವು :ಅಚ್ಚುತ್ ಗೌಡ
* ಫಿಡಿಲಿಟಿಸ್ ಸಂಸ್ಥೆಯ  ಮಹಿಳೆಯರಿಗೆ ವಿಶೇಷ ಸ್ವಾಗತ
* ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತ ಅಲ್ಲ 

ಬೆಂಗಳೂರು (ಮಾ. 08)  ಮಹಿಳೆ (Woman) ಸಮಾಜದ ಶಕ್ತಿ, ಕುಟುಂಬದ ಕಣ್ಮು, ಸಮಾಜ ಮತ್ತು ರಾಷ್ಟ್ರ(Nation) ನಿರ್ಮಾಣದಲ್ಲಿ ಮಹಿಳ ವುಮುಖ ಪಾತ್ರ ವಹಿಸಿದ್ಯಾಳ ಹಿಂದಿನ ಕಾಲದಲ್ಲಿ ಬೆರಳಣಿಕೆಯಷ್ಟು ಮಹಿಳೆಯರು ಮಾತ್ರ ಮನೆಯಿಂದ ಹೊರಗೆ ಬಂದು ದುಡಿಯುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಹಿಳೆ ತಾನು ಎಲ್ಲವನ್ನೂ ನಿಭಾಯಿಸಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದಾಳ ಗಡಿ ಕಾಯುವುದ್ರಿಂದ ಹಿಡಿದು ಕುಟುಂಬದ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬಲ್ಲ ಶಕ್ತಿ, ತಾಳ್ಮೆ, ಉತ್ಸಾಹ, ಧೈರ್ಯ ಮಹಿಳಗಿದೆ. ಪುರುಷರ ಸಮಾನವಾಗಿ ನಿಂತಿರುವ ಮಹಿಳೆಯರು ಅನೇಕ ಉನ್ನತ ಹುದ್ದೆಗಳನ್ನು ಸಂಭಾಳಿಸುತ್ತಿದ್ದಾರೆ. ಇನ್ನು ಈ ಬಾರಿ ವಿಶ್ವ ಸಂಸ್ಥೆ(UN) 2022 ವಿಶ್ವ ಮಹಿಳಾ ದಿನಾಚರಣೆಯ ಅನುಮೋದನೆಗೊಳಿಸಿರುವ “ಇಂದಿನ ಲಿಂಗ ಸಮಾನತೆಯೇ ನಾಳಿನ ಸುಸ್ಥಿರತೆ” ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ.

ಬನಶಂಕರಿಯ ಫಿಡಿಲಿಟಿಸ್ (Fidelitus) ಸಂಸ್ಥೆಯ ಪುರುಷರು ಮಹಿಳೆಯರನ್ನ ಕಚೇರಿಯೊಳಗೆ ವಿಭಿನ್ನವಾಗಿ ಸ್ವಾಗತಿಸಿದರು. ಇನ್ನು ಪ್ರತಿಯೊಬ್ಬ ಮಹಿಳಾ ಉದ್ಯೋಗೊಗಳನ್ನು ಕುದುರೆ ಸಾರೋಟಿನ ಮೂಲಕ ಸ್ವಾಗತಿಸಿ, ಮಹಿಳೆಯರು ಪಲ್ಲಕ್ಕಿಯ ಮೇಲೆ ಕುಳಿತು ಆಗಮಿಸುತ್ತಿದ್ದಂತೆ ಪುರುಷರು ಡೋಲು ಬಾರಿಸಿ, ಕುಣಿದು ಕುಪ್ಪಳಿಸಿ ಮಹಿಳೆಯರನ್ನ ಕಛೇರಿಗೆ ಬರ ಮಾಡಿಕೊಂಡರು. ಇನ್ನು ಸಂಸ್ಥೆಯ ಮಹಿಳೆಯರು ಶ್ವೇತ ವರ್ಣದ ಉಡುಪುಗಳಲ್ಲಿ ಕಂಗೊಳಿಸಿದ್ದು, ಅವರಿಗಾಗಿಯೇ ರ್ಯಾಂಪ ವಾಕ ಆಯೋ ಜಿಸಲಾಗಿತ್ತು. ರ್ಯಾಂಪ್ ಮೇಲೆ ಮಹಿಳೆಯರು ಹೆಜ್ಜೆ ಹಾಕಿ, ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಿಸಿದರು.

ಪೊಲೀಸ್ ಠಾಣೆಯಲ್ಲಿ ವಿಶ್ವ ಮಹಿಳಾ ದಿನ

ಈ ವೇಳೆ ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ ಅಚ್ಚುತ್ ಗೌಡ ಮಾತನಾಡಿ, ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ನಾವು. ಮಹಿಳೆಯರು ತಮ್ಮ ಜೀವನದಲ್ಲಿ ಅನೇಕ ಪಾತ್ರಗಳನ್ನ ನಿಭಾಯಿಸುತ್ತಾರೆ. ಆ ಎಲ್ಲಾ ಪಾತ್ರಗಳನ್ನ ಅವರು ಅಚ್ಚುಕಟ್ಟಾಗಿ ನಿರ್ವಸುತ್ತಾರೆ. ಈ ಒಂದು ದಿನಕ್ಕೆ ಮಾತ್ರ ಮಹಿಳಾ ದಿನಾಚರಣೆಯನ್ನ ಮೀಸಲಿಡಬಾರದು, ಪ್ರತಿನಿತ್ಯ ಅವರ ದಿನವನ್ನ ಸಂಭ್ರಮಿಸಬೇಕು. ನಾನು ಕೂಡ ಈ ಮಟ್ಟಕ್ಕೆ ಬೆಳೆಯಲು ನನ್ನ ಜೀವನದಲ್ಲಿರುವ ನನ್ನ ತಾಯಿ, ನನ್ನ ಮಡದಿ ಹಾಗೂ ನನ್ನ ಮಗಳು ಪ್ರಮುಖ ಪಾತ್ರವನ್ನ ನಿರ್ವಹಿಸಿದ್ದಾರೆ ಎಂದು ಹೇಳಿದರು. 

 

 

 

 

 


 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more