International Women's Day : ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ಜೀವನ ಪೂರ್ತಿ

International Women's Day : ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ಜೀವನ ಪೂರ್ತಿ

Published : Mar 08, 2022, 09:53 PM IST

* ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ
* ಪುರುಷರಿಗೆ ಮಹಿಳೆಯರೇ ಸ್ಪೂರ್ತಿ, ಅವರಿಂದಲೇ ನಾವು :ಅಚ್ಚುತ್ ಗೌಡ
* ಫಿಡಿಲಿಟಿಸ್ ಸಂಸ್ಥೆಯ  ಮಹಿಳೆಯರಿಗೆ ವಿಶೇಷ ಸ್ವಾಗತ
* ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತ ಅಲ್ಲ 

ಬೆಂಗಳೂರು (ಮಾ. 08)  ಮಹಿಳೆ (Woman) ಸಮಾಜದ ಶಕ್ತಿ, ಕುಟುಂಬದ ಕಣ್ಮು, ಸಮಾಜ ಮತ್ತು ರಾಷ್ಟ್ರ(Nation) ನಿರ್ಮಾಣದಲ್ಲಿ ಮಹಿಳ ವುಮುಖ ಪಾತ್ರ ವಹಿಸಿದ್ಯಾಳ ಹಿಂದಿನ ಕಾಲದಲ್ಲಿ ಬೆರಳಣಿಕೆಯಷ್ಟು ಮಹಿಳೆಯರು ಮಾತ್ರ ಮನೆಯಿಂದ ಹೊರಗೆ ಬಂದು ದುಡಿಯುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಹಿಳೆ ತಾನು ಎಲ್ಲವನ್ನೂ ನಿಭಾಯಿಸಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದಾಳ ಗಡಿ ಕಾಯುವುದ್ರಿಂದ ಹಿಡಿದು ಕುಟುಂಬದ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬಲ್ಲ ಶಕ್ತಿ, ತಾಳ್ಮೆ, ಉತ್ಸಾಹ, ಧೈರ್ಯ ಮಹಿಳಗಿದೆ. ಪುರುಷರ ಸಮಾನವಾಗಿ ನಿಂತಿರುವ ಮಹಿಳೆಯರು ಅನೇಕ ಉನ್ನತ ಹುದ್ದೆಗಳನ್ನು ಸಂಭಾಳಿಸುತ್ತಿದ್ದಾರೆ. ಇನ್ನು ಈ ಬಾರಿ ವಿಶ್ವ ಸಂಸ್ಥೆ(UN) 2022 ವಿಶ್ವ ಮಹಿಳಾ ದಿನಾಚರಣೆಯ ಅನುಮೋದನೆಗೊಳಿಸಿರುವ “ಇಂದಿನ ಲಿಂಗ ಸಮಾನತೆಯೇ ನಾಳಿನ ಸುಸ್ಥಿರತೆ” ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ.

ಬನಶಂಕರಿಯ ಫಿಡಿಲಿಟಿಸ್ (Fidelitus) ಸಂಸ್ಥೆಯ ಪುರುಷರು ಮಹಿಳೆಯರನ್ನ ಕಚೇರಿಯೊಳಗೆ ವಿಭಿನ್ನವಾಗಿ ಸ್ವಾಗತಿಸಿದರು. ಇನ್ನು ಪ್ರತಿಯೊಬ್ಬ ಮಹಿಳಾ ಉದ್ಯೋಗೊಗಳನ್ನು ಕುದುರೆ ಸಾರೋಟಿನ ಮೂಲಕ ಸ್ವಾಗತಿಸಿ, ಮಹಿಳೆಯರು ಪಲ್ಲಕ್ಕಿಯ ಮೇಲೆ ಕುಳಿತು ಆಗಮಿಸುತ್ತಿದ್ದಂತೆ ಪುರುಷರು ಡೋಲು ಬಾರಿಸಿ, ಕುಣಿದು ಕುಪ್ಪಳಿಸಿ ಮಹಿಳೆಯರನ್ನ ಕಛೇರಿಗೆ ಬರ ಮಾಡಿಕೊಂಡರು. ಇನ್ನು ಸಂಸ್ಥೆಯ ಮಹಿಳೆಯರು ಶ್ವೇತ ವರ್ಣದ ಉಡುಪುಗಳಲ್ಲಿ ಕಂಗೊಳಿಸಿದ್ದು, ಅವರಿಗಾಗಿಯೇ ರ್ಯಾಂಪ ವಾಕ ಆಯೋ ಜಿಸಲಾಗಿತ್ತು. ರ್ಯಾಂಪ್ ಮೇಲೆ ಮಹಿಳೆಯರು ಹೆಜ್ಜೆ ಹಾಕಿ, ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಿಸಿದರು.

ಪೊಲೀಸ್ ಠಾಣೆಯಲ್ಲಿ ವಿಶ್ವ ಮಹಿಳಾ ದಿನ

ಈ ವೇಳೆ ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ ಅಚ್ಚುತ್ ಗೌಡ ಮಾತನಾಡಿ, ಪುರುಷರಿಗೆ ಮಹಿಳೆಯರೇ ಸ್ಫೂರ್ತಿ, ಅವರಿಂದಲೇ ನಾವು. ಮಹಿಳೆಯರು ತಮ್ಮ ಜೀವನದಲ್ಲಿ ಅನೇಕ ಪಾತ್ರಗಳನ್ನ ನಿಭಾಯಿಸುತ್ತಾರೆ. ಆ ಎಲ್ಲಾ ಪಾತ್ರಗಳನ್ನ ಅವರು ಅಚ್ಚುಕಟ್ಟಾಗಿ ನಿರ್ವಸುತ್ತಾರೆ. ಈ ಒಂದು ದಿನಕ್ಕೆ ಮಾತ್ರ ಮಹಿಳಾ ದಿನಾಚರಣೆಯನ್ನ ಮೀಸಲಿಡಬಾರದು, ಪ್ರತಿನಿತ್ಯ ಅವರ ದಿನವನ್ನ ಸಂಭ್ರಮಿಸಬೇಕು. ನಾನು ಕೂಡ ಈ ಮಟ್ಟಕ್ಕೆ ಬೆಳೆಯಲು ನನ್ನ ಜೀವನದಲ್ಲಿರುವ ನನ್ನ ತಾಯಿ, ನನ್ನ ಮಡದಿ ಹಾಗೂ ನನ್ನ ಮಗಳು ಪ್ರಮುಖ ಪಾತ್ರವನ್ನ ನಿರ್ವಹಿಸಿದ್ದಾರೆ ಎಂದು ಹೇಳಿದರು. 

 

 

 

 

 


 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more