Dharwad: ಸಾವಿರಾರು ಮೊಟ್ಟೆಗಳನ್ನ ಗುಳುಂ ಮಾಡಿದ್ರಾ ಅಧಿಕಾರಿಗಳು?

Dharwad: ಸಾವಿರಾರು ಮೊಟ್ಟೆಗಳನ್ನ ಗುಳುಂ ಮಾಡಿದ್ರಾ ಅಧಿಕಾರಿಗಳು?

Suvarna News   | Asianet News
Published : Nov 25, 2021, 12:52 PM IST

*  ಫಲಾನುಭವಿಗಳಿಗೆ ಸಮರ್ಪಕವಾಗಿ ಹಂಚಿಕೆಯಾಗದ ಮೊಟ್ಟೆ
*  5 ತಿಂಗಳಲ್ಲಿ ಕೊಟ್ಟಿದ್ದು ಕೇವಲ ಎರಡೇ ತಿಂಗಳ ಮೊಟ್ಟೆ ಮಾತ್ರ
*  ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗಿರುವ ಯೋಜನೆ 
 

ಧಾರವಾಡ(ನ.25):  ಸರ್ಕಾರ ಮಕ್ಕಳಿಗೆ, ಮಹಿಳೆಯರಿಗೆ ಅಂತ ವಿಶೇಷ ಅನುದಾನದ ಮೂಲಕ ಹೊಸ ಹೊಸ ಯೋಜನೆಗಳನ್ನ ಜಾರಿಗೆ ತರುತ್ತೆ. ಆದ್ರೆ ಆ ಯೋಜನೆಗಳು ಮಾತ್ರ ಸರಿಯಾಗಿ ತಲುಪುತ್ತೋ ಇಲ್ಲವೋ ಅನ್ನೋದನ್ನ ಜನಪ್ರತಿನಿಧಿಗಳೇ ಗಮನಿಸಬೇಕು. ಇಲ್ಲದಿದ್ರೆ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸಿಗುವ ಯಾವ ಸೌಲಭ್ಯವೂ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತೆ. 

ಹೌದು, ಧಾರವಾಡ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖೆಯಿಂದ ಕೊಡುವ ಮೊಟ್ಟೆ ಸಹ ಸರಿಯಾಗಿ ಹಂಚಿಕೆಯಾಗಿಲ್ಲ. ಸಾವಿರಾರು ಮೊಟ್ಟೆಗಳನ್ನ ಗುಳುಂ ಮಾಡಿದ್ರಾ ಅನ್ನೋ ಶಂಕೆ ವ್ಯಕ್ತವಾಗುತ್ತಿದೆ. ಜಿಲ್ಲೆಯಾದ್ಯಂತ ಅಂಗನವಾಡಿ ಮಕ್ಕಳು ಸೇರಿದಂತೆ, ಗರ್ಭಿಣಿಯರು, ಬಾಣಂತಿಯರಿಗೆ ತಿಂಗಳಿಗೆ 24 ಮೊಟ್ಟೆಗಳನ್ನ ನೀಡಲಾಗುತ್ತೆ. ಅದರಂತೆ ಮಕ್ಕಳಿಗೆ ವಾರದಲ್ಲಿ 3 ಬಾರಿ ಮೊಟ್ಟೆ ವಿತರಣೆಯಾಗುತ್ತೆ. ಆದ್ರೆ ಕಳೆದ 5 ತಿಂಗಳಲ್ಲಿ ಸರಿಯಾದ ಮೊಟ್ಟೆಗಳ ಹಂಚಿಕೆ ಆಗಿಯೇ ಇಲ್ಲ. ಇದರ ಬಗ್ಗೆ ಖುದ್ದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸಹ ದಾಸ್ತಾನು ಕೊಠಡಿಗೆ ಭೇಟಿ ನೀಡಿದಾಗ ಮೊಟ್ಟೆ ವಿತರಣೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

Karwar: ಕೈ ಮುಗಿತೀವಿ ಸೇತುವೆ ನಿರ್ಮಿಸಿಕೊಡಿ, ಸಚಿವ ಹೆಬ್ಬಾರ್‌ಗೆ ಬಾಲಕಿಯ ಮನವಿ

ಇನ್ನು ಕೋವಿಡ್ ಸಮಯದಲ್ಲಿ ನಮ್ಮನ್ನ ಯಾರು ಕೇಳೋರು ಅನ್ನೋ ಮಟ್ಟಕ್ಕೆ ತಲುಪಿದ್ದ ಕೆಲ ಅಧಿಕಾರಿಗಳು ಸರಿಯಾಗಿ ಮೊಟ್ಟೆ ವಿತರಣೆಯನ್ನೇ ಮಾಡಿಲ್ಲ. ಅದರಲ್ಲೂ ಗ್ರಾಮಾಂತರ ಭಾಗಗಳಲ್ಲಿ ಗರ್ಭಿಣಿಯರು ಮೊಟ್ಟೆ ಕೇಳಿದ್ರೆ ಸರಿಯಾಗಿ ವಿತರಣೆ ಸಹ ಆಗಿಲ್ಲ ಅನ್ನೋದು ಜನರು ಸಹ ಹೇಳಿಕೊಂಡಿದ್ದಾರೆ. ಪ್ರತಿ ಅಂಗನವಾಡಿಗೆ ಬಾಲ ವಿಕಾಸ ಸಮಿತಿ ರಚನೆ ಮಾಡಿ ಅದರ ಅಧ್ಯಕ್ಷ ಮತ್ತು ಅಂಗನವಾಡಿ ಶಿಕ್ಷಕಿಯ ಬ್ಯಾಂಕ್ ಖಾತೆಗೆ ಹಣ ಪ್ರತಿ ತಿಂಗಳು ಜಮವಾಣೆಯಾಗುತ್ತೆ. ಆದ್ರೆ ಕೊರೊನ ನಂತರ ಮೊಟ್ಟೆ ಹಣ ದುಬಾರಿಯಾಗಿದ್ದಕ್ಕೆ ಬಂದ ಹಣವನ್ನು ಸಹ ಹಾಗೆಯೇ ಇಟ್ಟುಕೊಂಡು, ಮೊಟ್ಟೆ ಖರೀದಿ ಸಹ ಮಾಡದೆ ಮಹಿಳೆಯರಿಗೆ ಮೊಟ್ಟೆಯನ್ನ ವಿತರಣೆ ಮಾಡಿಲ್ಲ.

ಒಟ್ಟಾರೆ ಮಕ್ಕಳಿಗೆ ಮಹಿಳೆಯರಿಗೆ ಆಗ ಸಿಗಬೇಕಿದ್ದ ಮೊಟ್ಟೆಯನ್ನ ಇದೀಗ ಕೊಡುವ ಪ್ರಯತ್ನ ಮಾಡುತ್ತಿದ್ದು, ಇದು ಎಷ್ಟರ ಮಟ್ಟಿಗೆ ಸರಿ ಅನ್ನೋದನ್ನ ಅಧಿಕಾರಿಗಳೇ ಮನವರಿಕೆ ಮಾಡಿಕೊಳ್ಳಬೇಕು. ದಣಿದಾಗ ನೀರು ಕೊಡದ ಅಧಿಕಾರಿಗಳು ದಣಿವಾರಿದ ಮೇಲೆ ಅನ್ನ ನೀಡೋಕೆ ಬಂದಂತಾಯಿತು ಅಧಿಕಾರಿಗಳ ಈ ಕಾರ್ಯ.
 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more