ಕೋಟಿ ಬೇಟೆಯಲ್ಲಿ ಡಿಕೆ ಟಾರ್ಗೆಟ್ ಆಗಿದ್ದೇಕೆ..? ಕಾಂಟ್ಯಾಕ್ಟರ್ ಮನೆಯಲ್ಲಿ ಸಿಕ್ಕ ಹಣ ಯಾರದ್ದು..?

ಕೋಟಿ ಬೇಟೆಯಲ್ಲಿ ಡಿಕೆ ಟಾರ್ಗೆಟ್ ಆಗಿದ್ದೇಕೆ..? ಕಾಂಟ್ಯಾಕ್ಟರ್ ಮನೆಯಲ್ಲಿ ಸಿಕ್ಕ ಹಣ ಯಾರದ್ದು..?

Published : Oct 15, 2023, 01:02 PM IST

2 ಕೋಟಿ ಐಟಿ ಬೇಟೆಯ ಸುತ್ತ 42 ರಹಸ್ಯ..!
ಕೋಟಿ ಬೇಟೆಯಲ್ಲಿ ಡಿಕೆ ಟಾರ್ಗೆಟ್ ಆಗಿದ್ದೇಕೆ..?
42 ಕೋಟಿಗಳ ಕುತ್ತು..ಯಾರಿಗೆ ಕಾದಿದೆ ಆಪತ್ತು..?

ರಾಜ್ಯದಲ್ಲಿ ನಡೆದ ಐಟಿ ದಾಳಿಗಳಲ್ಲೇ ಇದು ಭರ್ಜರಿ ಬೇಟೆ. ಗುತ್ತಿಗೆದಾರನ(Contractors) ಮನೆಯ ಮಂಚದ ಕೆಳಗೆ ಐಟಿ ಅಧಿಕಾರಿಗಳಿಗೆ ಸಿಕ್ಕಿರೋದು ಬರೋಬ್ಬರಿ 42+ ಕೋಟಿ ರೂಪಾಯಿ. 42 ಗಂಟೆಗಳ ಮೆಗಾ ಆಪರೇಷನ್‌ನಲ್ಲಿ ಬಯಲಾಗಿದೆ ಕುರುಡು ಕಾಂಚಾಣ ಮಹಿಮೆ. ಬೆಂಗಳೂರಿನ(Bengaluru) ಗುತ್ತಿಗೆದಾರ ಕಮ್ ಉದ್ಯಮಿ, ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನಾಗಿದ್ದ ಅಂಬಿಕಾಪತಿಯ(Ambikapati) ಕೋಟಿ ಸಾಮ್ರಾಜ್ಯದ ಮೇಲೆ ಗುರುವಾರ ಸಂಜೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ (It Raid) ನಡೆಸಿದ್ರು. ಬೆಂಗಳೂರಿನ ಕಾವಲ್‌ಭೈರಸಂಧ್ರದ ಗಣೇಶ ಬ್ಲಾಕ್‌ನಲ್ಲಿರುವ ಅಂಬಿಕಾಪತಿ ಮನೆ, ಆರ್.ಟಿ ನಗರದ ವೈಟ್ ಹೌಸ್‌ನಲ್ಲಿರುವ ಪುತ್ರನ ಮನೆ, ಮಾನ್ಯತಾ ಟೆಕ್ ಪಾರ್ಕ್ ಬಳಿ ಇರೋ ಮಗಳ ಮನೆ.ಹೀಗೆ ಅಂಬಿಕಾಪತಿಗೆ ಸೇರಿದ 3 ಸ್ಥಳಗಳಲ್ಲಿ ತಲಾಷ್ ನಡೆಸಿದ ಐಟಿ ಅಧಿಕಾರಿಗಳಿಗೆ ಸಿಕ್ಕಿರೋದು ಸಣ್ಣ ಮೊತ್ತವಲ್ಲ. ಅಂಬಿಕಾಪತಿ ಮಗನ ಮನೆಯ ಮಂಚದ ಕೆಳಗಂತೂ 22 ಬಾಕ್ಸ್‌ಗಳಲ್ಲಿ ತುಂಬಿಡಲಾಗಿದ್ದ ಗರಿ ಗರಿ ನೋಟುಗಳನ್ನು ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಲೆಕ್ಕ ಹಾಕಿ ನೋಡಿದಾಗ ಸಿಕ್ಕಿರೋ ಹಣ 42 ಕೋಟಿಗೂ  ಹೆಚ್ಚು. ಆದರೆ ಈ ಐಟಿ ದಾಳಿಗೂ ಗುತ್ತಿಗೆದಾರ ಅಂಬಿಕಾಪತಿಗೂ ಯಾವುದೇ ಸಂಬಂಧ ಇಲ್ಲ ಅಂತಿದ್ದಾರೆ ಪುತ್ರ ಪ್ರದೀಪ್. ಐಟಿ ದಾಳಿ ಹೀಗೆ ಬಾಕ್ಸ್‌ಗಳಲ್ಲಿ ಕೋಟಿ ಕೋಟಿ, ಗರಿಗರಿ ನೋಟುಗಳ ಕಂತೆ ಸಿಕ್ಕಿರೋದು ಇದೇ ಪ್ರದೀಪ್ ಮನೆಯಲ್ಲಿ. ಅಂಬಿಕಾಪತಿ 20 ವರ್ಷಗಳ ಹಿಂದೆಯೇ ಕಾಂಟ್ರಾಕ್ಟರ್ ಕೆಲಸ ಬಿಟ್ಟಿದ್ರಂತೆ. ನಂತ್ರ ಆ ವೃತ್ತಿಯನ್ನು ಪುತ್ರ ಪ್ರದೀಪ್ ಮುಂದುವರಿಸಿದ್ದಾರೆ. ಪ್ರಮೋದ್ ಎಂಬ ಸ್ನೇಹಿತನ ಜೊತೆ ಸೇರಿ ಪ್ರದೀಪ್ ಗುತ್ತಿಗೆದಾರ ಕೆಲಸ ಮಾಡ್ತಾ ಇದ್ರು.

ಇದನ್ನೂ ವೀಕ್ಷಿಸಿ:  ಬಸವನಗುಡಿ ವಾರ್ಡ್‌ ಹೆಸರು ಬದಲಾವಣೆ: ಹೋರಾಟದ ಎಚ್ಚರಿಕೆ ನೀಡಿದ ನಿವಾಸಿಗಳು

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more