ಕೋಟಿ ಬೇಟೆಯಲ್ಲಿ ಡಿಕೆ ಟಾರ್ಗೆಟ್ ಆಗಿದ್ದೇಕೆ..? ಕಾಂಟ್ಯಾಕ್ಟರ್ ಮನೆಯಲ್ಲಿ ಸಿಕ್ಕ ಹಣ ಯಾರದ್ದು..?

ಕೋಟಿ ಬೇಟೆಯಲ್ಲಿ ಡಿಕೆ ಟಾರ್ಗೆಟ್ ಆಗಿದ್ದೇಕೆ..? ಕಾಂಟ್ಯಾಕ್ಟರ್ ಮನೆಯಲ್ಲಿ ಸಿಕ್ಕ ಹಣ ಯಾರದ್ದು..?

Published : Oct 15, 2023, 01:02 PM IST

2 ಕೋಟಿ ಐಟಿ ಬೇಟೆಯ ಸುತ್ತ 42 ರಹಸ್ಯ..!
ಕೋಟಿ ಬೇಟೆಯಲ್ಲಿ ಡಿಕೆ ಟಾರ್ಗೆಟ್ ಆಗಿದ್ದೇಕೆ..?
42 ಕೋಟಿಗಳ ಕುತ್ತು..ಯಾರಿಗೆ ಕಾದಿದೆ ಆಪತ್ತು..?

ರಾಜ್ಯದಲ್ಲಿ ನಡೆದ ಐಟಿ ದಾಳಿಗಳಲ್ಲೇ ಇದು ಭರ್ಜರಿ ಬೇಟೆ. ಗುತ್ತಿಗೆದಾರನ(Contractors) ಮನೆಯ ಮಂಚದ ಕೆಳಗೆ ಐಟಿ ಅಧಿಕಾರಿಗಳಿಗೆ ಸಿಕ್ಕಿರೋದು ಬರೋಬ್ಬರಿ 42+ ಕೋಟಿ ರೂಪಾಯಿ. 42 ಗಂಟೆಗಳ ಮೆಗಾ ಆಪರೇಷನ್‌ನಲ್ಲಿ ಬಯಲಾಗಿದೆ ಕುರುಡು ಕಾಂಚಾಣ ಮಹಿಮೆ. ಬೆಂಗಳೂರಿನ(Bengaluru) ಗುತ್ತಿಗೆದಾರ ಕಮ್ ಉದ್ಯಮಿ, ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನಾಗಿದ್ದ ಅಂಬಿಕಾಪತಿಯ(Ambikapati) ಕೋಟಿ ಸಾಮ್ರಾಜ್ಯದ ಮೇಲೆ ಗುರುವಾರ ಸಂಜೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ (It Raid) ನಡೆಸಿದ್ರು. ಬೆಂಗಳೂರಿನ ಕಾವಲ್‌ಭೈರಸಂಧ್ರದ ಗಣೇಶ ಬ್ಲಾಕ್‌ನಲ್ಲಿರುವ ಅಂಬಿಕಾಪತಿ ಮನೆ, ಆರ್.ಟಿ ನಗರದ ವೈಟ್ ಹೌಸ್‌ನಲ್ಲಿರುವ ಪುತ್ರನ ಮನೆ, ಮಾನ್ಯತಾ ಟೆಕ್ ಪಾರ್ಕ್ ಬಳಿ ಇರೋ ಮಗಳ ಮನೆ.ಹೀಗೆ ಅಂಬಿಕಾಪತಿಗೆ ಸೇರಿದ 3 ಸ್ಥಳಗಳಲ್ಲಿ ತಲಾಷ್ ನಡೆಸಿದ ಐಟಿ ಅಧಿಕಾರಿಗಳಿಗೆ ಸಿಕ್ಕಿರೋದು ಸಣ್ಣ ಮೊತ್ತವಲ್ಲ. ಅಂಬಿಕಾಪತಿ ಮಗನ ಮನೆಯ ಮಂಚದ ಕೆಳಗಂತೂ 22 ಬಾಕ್ಸ್‌ಗಳಲ್ಲಿ ತುಂಬಿಡಲಾಗಿದ್ದ ಗರಿ ಗರಿ ನೋಟುಗಳನ್ನು ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಲೆಕ್ಕ ಹಾಕಿ ನೋಡಿದಾಗ ಸಿಕ್ಕಿರೋ ಹಣ 42 ಕೋಟಿಗೂ  ಹೆಚ್ಚು. ಆದರೆ ಈ ಐಟಿ ದಾಳಿಗೂ ಗುತ್ತಿಗೆದಾರ ಅಂಬಿಕಾಪತಿಗೂ ಯಾವುದೇ ಸಂಬಂಧ ಇಲ್ಲ ಅಂತಿದ್ದಾರೆ ಪುತ್ರ ಪ್ರದೀಪ್. ಐಟಿ ದಾಳಿ ಹೀಗೆ ಬಾಕ್ಸ್‌ಗಳಲ್ಲಿ ಕೋಟಿ ಕೋಟಿ, ಗರಿಗರಿ ನೋಟುಗಳ ಕಂತೆ ಸಿಕ್ಕಿರೋದು ಇದೇ ಪ್ರದೀಪ್ ಮನೆಯಲ್ಲಿ. ಅಂಬಿಕಾಪತಿ 20 ವರ್ಷಗಳ ಹಿಂದೆಯೇ ಕಾಂಟ್ರಾಕ್ಟರ್ ಕೆಲಸ ಬಿಟ್ಟಿದ್ರಂತೆ. ನಂತ್ರ ಆ ವೃತ್ತಿಯನ್ನು ಪುತ್ರ ಪ್ರದೀಪ್ ಮುಂದುವರಿಸಿದ್ದಾರೆ. ಪ್ರಮೋದ್ ಎಂಬ ಸ್ನೇಹಿತನ ಜೊತೆ ಸೇರಿ ಪ್ರದೀಪ್ ಗುತ್ತಿಗೆದಾರ ಕೆಲಸ ಮಾಡ್ತಾ ಇದ್ರು.

ಇದನ್ನೂ ವೀಕ್ಷಿಸಿ:  ಬಸವನಗುಡಿ ವಾರ್ಡ್‌ ಹೆಸರು ಬದಲಾವಣೆ: ಹೋರಾಟದ ಎಚ್ಚರಿಕೆ ನೀಡಿದ ನಿವಾಸಿಗಳು

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more