ಹಳ್ಳ ಹಿಡಿದ ಪ್ರಧಾನಿ ಮಹತ್ವಾಕಾಂಕ್ಷೆ ಯೋಜನೆ: ನೆಲಕಚ್ಚಿದ ಜಲ್ ಜೀವನ್ ಮಿಷನ್ !

ಹಳ್ಳ ಹಿಡಿದ ಪ್ರಧಾನಿ ಮಹತ್ವಾಕಾಂಕ್ಷೆ ಯೋಜನೆ: ನೆಲಕಚ್ಚಿದ ಜಲ್ ಜೀವನ್ ಮಿಷನ್ !

Published : Sep 08, 2023, 03:53 PM IST

ಅದು ರಾಜ್ಯದ ಕಟ್ಟ ಕಡೆಯ ಊರು, ಅಲ್ಲಿ ಬದುಕೋದೇ ಒಂದು ಚಾಲೆಂಜ್. ಅಲ್ಲಿ ಹನಿ ನೀರಿಗೂ ಪರದಾಡ್ತಾರೆ ಜನ. ದೇಶದ ಪ್ರಧಾನಿಯೇ ಆ ಯೋಜನೆ ಕೊಟ್ರೂ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. 
 

ಅದು ಹೇಳಿಕೇಳಿ ಬರದ ನಾಡು, ರಾಜ್ಯದ ಕಟ್ಟಕಡೆಯ ಊರು, ಇಲ್ಲಿ ಪ್ರತಿ ಬೇಸಿಗೆಯಲ್ಲೂ ಹನಿ ನೀರಿಗಾಗಿ(Water) ಪರದಾಡಬೇಕಾಗುತ್ತದೆ. ಇಂತಹ ಬರದ ನಾಡಿನ ಜನ ಪರದಾಟ ತಪ್ಪಿಸಲು ಕೇಂದ್ರ ಸರ್ಕಾರ (Central government) ದೆಹಲಿಯಿಂದ ಹಳ್ಳಿವರೆಗೂ ಜಲ್ ಜೀವನ್ ಮಿಷನ್ ಯೋಜನೆ(Jal Jeevan Mission Scheme) ತಂದಿದೆ. ಆದ್ರೆ ಅಧಿಕಾರಿಗಳು, ಗುತ್ತಿಗೆದಾರರ ನೌಟಂಕಿ ಆಟದಿಂದ ಈ ಯೋಜನೆ ಸಂಪೂರ್ಣ ಹಳ್ಳ ಹಿಡಿದಿದೆ. 

ಇದು ಬೀದರ್(Bidar) ಜಿಲ್ಲೆ ಔರಾದ್ ತಾಲೂಕಿನ ಬೇಲೂರು ಗ್ರಾಮ, ಇಲ್ಲಿನ ಜನರ ದಾಹ ನೀಗಿಸಲು ಕೇಂದ್ರ ಸರ್ಕಾರ ಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ಕುಡಿಯುವ ನೀರಿನ ಪೈಪ್ ಅಳವಡಿಸಿಲಾಗಿದೆ. ಆದ್ರೆ ಸರಿಯಾದ ನಿರ್ವಹಣೆ ಇಲ್ಲದೇ ಜೆಜೆಎಂ ಯೋಜನೆ ಸಂಪೂರ್ಣವಾಗಿ ಹಳ್ಳ ಹಿಡಿದಿದೆ.

ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ಎಲ್ಲೆಂದರಲ್ಲಿ ನೀರು ಸೋರಿ, ರಸ್ತೆಯಲ್ಲೇ ನೀರು ಜಲಾವೃತಗೊಂಡು ಜನರು ಓಡಾಡಲು ಪರದಾಡುವಂತಾಗಿದೆ. ಮತ್ತೊಂದು ಕಡೆ ಬಹಳಷ್ಟು ಮನೆಗಳಲ್ಲಿ ಅಳವಡಿಸಲಾದ ನಳ ಮತ್ತು ಮೀಟರ್ ಅವೈಜ್ಞಾನಿಕವಾಗಿದ್ದು, ನೀರು ಮೀಟರ್ನಲ್ಲೇ ಸೋರಿಕೆಯಾಗುತ್ತಿವೆ. ಇನ್ನೂ ಹಲವೆಡೆ ಜಲ್ ಜೀವನ್ ಮಿಷನ್ ಪೈಪ್ ಒಡೆದು ಕುಡಿಯುವ ನೀರು ಕಲುಷಿಗೊಳ್ಳುತ್ತಿದೆ.

ಇದನ್ನೂ ವೀಕ್ಷಿಸಿ: ಗಬ್ಬೆದ್ದು ನಾರುತ್ತಿದೆ ಇಂದಿರಾ ಕ್ಯಾಂಟೀನ್‌: ಕ್ಯಾಂಟೀನ್‌ ಒಳಗೆ ನುಗ್ಗಿದ ಚರಂಡಿ ನೀರು !

ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಬೇಲೂರು ಗ್ರಾಮದಲ್ಲಿ, ಸುಮಾರು 53.7 ಲಕ್ಷ ರೂಪಾಯಿ ವೆಚ್ಚದಲ್ಲಿ 260 ಮನೆಗಳಗೆ ನಳಗಳನ್ನು ಅಳವಡಿಕೆ ಮಾಡಲಾಗಿದ್ದು. ಕಂಟೆಪ್ಪ ಎಂಬ ಗುತ್ತಿಗೆದಾರ ತರಾತುರಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಗುತ್ತಿಗೆದಾರ ಕಂಟೆಪ್ಪನ ಕಳಪೆ ಕಾಮಗಾರಿಯಿಂದ ಬೇಲೂರು ಗ್ರಾಮವೇ ನಡುಗಿ ಹೋಗಿದೆ.

ಬೇಲೂರು ಗ್ರಾಮದಲ್ಲಿ ಜೆಜೆಎಂ ಕೊಳಾಯಿಗಳು ಒಡೆದು ನೀರು ಪೋಲಾಗುತ್ತಿದ್ದು. ಮತ್ತೊಂದೆಡೆ ರಸ್ತೆಯಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ. ಈಗಾಗಲೇ ಕಲುಷಿತ ನೀರು ಸೇವಿಸಿ ರಾಜ್ಯದ ಹಲವೆಡೆ ಅಸ್ವಸ್ಥರಾಗಿ ಪ್ರಾಣವನ್ನೇ ಬಿಡುತ್ತಿದ್ದಾರೆ. ಆದ್ರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಗಡದ್ ನಿದ್ದೆಗೆ ಜಾರಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more