ವಿಷ ಕೇಳಿದ ಕುಟುಂಬಕ್ಕೆ ಅಮೃತ ಕೊಡಿಸಿದ ಬಿಗ್ -3: 8 ವರ್ಷಗಳಿಂದ ಆಗದ್ದು ಕೇವಲ 4 ದಿನದಲ್ಲಿ ಆಯ್ತು !

ವಿಷ ಕೇಳಿದ ಕುಟುಂಬಕ್ಕೆ ಅಮೃತ ಕೊಡಿಸಿದ ಬಿಗ್ -3: 8 ವರ್ಷಗಳಿಂದ ಆಗದ್ದು ಕೇವಲ 4 ದಿನದಲ್ಲಿ ಆಯ್ತು !

Published : Sep 12, 2023, 12:40 PM IST

ಅಧಿಕಾರಿಗಳ ಯಡವಟ್ಟಿಗೆ ಆ ಕುಟುಂಬ ಮನೆ ಕಳೆದುಕೊಂಡು ಬೀದಿಗೆ ಬಿದ್ದಿತ್ತು. 8 ವರ್ಷಗಳಿಂದ ನರಕಯಾತನೆ ಅನುಭವಿಸುತ್ತಿದ್ದ ಕುಟುಂಬದ ಕಣ್ಣೀರು ಒರೆಸಿದ್ದು ಬಿಗ್-3. ಅಷ್ಟಕ್ಕೂ ಇದು ಯಾವ ಜಿಲ್ಲೆಯ ಸ್ಟೋರಿ ಅಂತೀರಾ?. ಈ ಸ್ಪೆಷಲ್ ರಿಪೋರ್ಟ್ ನೋಡಿ..
 

ಆ ಕುಟುಂಬ ತಮಗೊಂದು ಸೂರು ಬೇಕೆಂದು ಕಳೆದ 8 ವರ್ಷಗಳಿಂದ ಕಾಯ್ತಿತ್ತು. ಅಧಿಕಾರಿಗಳು ಮಾಡಿದ ಯಡವಟ್ಟು ಹಾಗೂ ತಾಂತ್ರಿಕ ದೋಷಗಳಿಂದ ಆ ಕುಟುಂಬ ತನ್ನ ಪಾಲಿಗೆ ದೊರೆಯಬೇಕಾಗಿದ್ದ ಮನೆಯನ್ನು(House) ಕಳೆದುಕೊಂಡಿತ್ತು. ಜೊಯಿಡಾ(Joida) ತಾಲೂಕಿ‌ನ ಪ್ರಧಾನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಟ್ಟ ಕಾಡಿನ‌ ನಡುವೆ ಇರುವ ಮಾನಾಯಿ ಗ್ರಾಮದಲ್ಲಿ ನೆಲೆಸಿದ್ದ ಬಡ ಕುಟುಂಬವನ್ನು ಬಿಗ್-3 ತಂಡವು ಹುಡುಕಿಕೊಂಡು ಹೋಗಿತ್ತು. ಆಗಸ್ಟ್ 31ರಂದು ಗರಂ ಆಗಿಯೇ ಸುದ್ದಿ ಪ್ರಸಾರ ಮಾಡಿದ್ವಿ. ಬಿಗ್-3 ಕಾಲಿಟ್ಟಿದ್ದೇ ತಡ ಆ ಕುಟುಂಬದ ಹಣೆ ಬರಹವೇ ಬದಲಾಯ್ತು ನೋಡಿ. ಮನೆ ಕೊಡಿಸುವುದಾಗಿ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ್ ಖಂಡೂ ಭರವಸೆ ನೀಡಿದ್ರು. ಸುದ್ದಿ ಪ್ರಸಾರ ಬಳಿಕ ಹೌಸಿಂಗ್ ಬೋರ್ಡ್‌ಗೆ ಕರೆ ಮಾಡಿದ್ದ ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆ, ಲಕ್ಷ್ಮೀ ಶೇಖಪ್ಪ ಛಲವಾದಿ ಕುಟುಂಬ ಸೇರಿದಂತೆ ಇತರೆ ಫಲಾನುಭವಿಗಳ ತಾಂತ್ರಿಕ ಸಮಸ್ಯೆ ಕೂಡಲೇ ಪರಿಹರಿಸುವಂತೆ ಸೂಚನೆ ನೀಡಿದ್ರು. ಸದ್ಯ ಬಸವ ಹೌಸಿಂಗ್ ಯೋಜನೆಯಡಿ ಮತ್ತೆ ಲಕ್ಷ್ಮೀ ಶೇಖಪ್ಪ ಛಲವಾದಿ ಕುಟುಂಬಕ್ಕೆ ಮನೆ ದೊರೆಯುತ್ತಿದ್ದು, ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್(Rajiv Gandhi Housing Board) ವೆಬ್‌ಸೈಟ್‌ನಲ್ಲೂ ಹಳೇ ಮನೆಯ ಫೋಟೋಗಳನ್ನು ತೆಗೆಯಿಸಿ, ಹೊಸ ಮನೆ ನಿರ್ಮಾಣದ ಪಂಚಾಂಗದ ಫೋಟೋ ಅಪ್ಲೋಡ್ ಮಾಡಲಾಗಿದೆ. ಇನ್ಮುಂದೆ ಈ ಕುಟುಂಬಕ್ಕೆ ಹಂತ ಹಂತವಾಗಿ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಲಿದ್ದು, ಕಣ್ಣೀರು ಸುರಿಸುತ್ತಿದ್ದ ಈ ಕುಟುಂಬ ಇದೀಗ ಸಂತೋಷದಿಂದ ಮನೆ ನಿರ್ಮಾಣದ ಕೆಲಸಕ್ಕೆ ತಯಾರಾಗುತ್ತಿದೆ. ಇನ್ಮುಂದೆ ಹಂತ ಹಂತವಾಗಿ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ದೊರೆಯಲಿದೆ. ಕೆಲವೇ ದಿನಗಳಲ್ಲಿ ಶೆಡ್ ವಾಸದಿಂದ ಮುಕ್ತಿ ಸಿಗಲಿದ್ದು. ಸದ್ಯ ಲಕ್ಷ್ಮೀ ಶೇಖಪ್ಪ ಛಲವಾದಿ ಕುಟುಂಬ ಫುಲ್ ಖುಷಿಯಲ್ಲಿದೆ.

ಇದನ್ನೂ ವೀಕ್ಷಿಸಿ:  ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಮೀಟಿಂಗ್: ತಮಿಳುನಾಡು ಕ್ಯಾತೆಗೆ ಮಣಿಯುತ್ತಾ ಸಮಿತಿ..?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ