ವಿಷ ಕೇಳಿದ ಕುಟುಂಬಕ್ಕೆ ಅಮೃತ ಕೊಡಿಸಿದ ಬಿಗ್ -3: 8 ವರ್ಷಗಳಿಂದ ಆಗದ್ದು ಕೇವಲ 4 ದಿನದಲ್ಲಿ ಆಯ್ತು !

ವಿಷ ಕೇಳಿದ ಕುಟುಂಬಕ್ಕೆ ಅಮೃತ ಕೊಡಿಸಿದ ಬಿಗ್ -3: 8 ವರ್ಷಗಳಿಂದ ಆಗದ್ದು ಕೇವಲ 4 ದಿನದಲ್ಲಿ ಆಯ್ತು !

Published : Sep 12, 2023, 12:40 PM IST

ಅಧಿಕಾರಿಗಳ ಯಡವಟ್ಟಿಗೆ ಆ ಕುಟುಂಬ ಮನೆ ಕಳೆದುಕೊಂಡು ಬೀದಿಗೆ ಬಿದ್ದಿತ್ತು. 8 ವರ್ಷಗಳಿಂದ ನರಕಯಾತನೆ ಅನುಭವಿಸುತ್ತಿದ್ದ ಕುಟುಂಬದ ಕಣ್ಣೀರು ಒರೆಸಿದ್ದು ಬಿಗ್-3. ಅಷ್ಟಕ್ಕೂ ಇದು ಯಾವ ಜಿಲ್ಲೆಯ ಸ್ಟೋರಿ ಅಂತೀರಾ?. ಈ ಸ್ಪೆಷಲ್ ರಿಪೋರ್ಟ್ ನೋಡಿ..
 

ಆ ಕುಟುಂಬ ತಮಗೊಂದು ಸೂರು ಬೇಕೆಂದು ಕಳೆದ 8 ವರ್ಷಗಳಿಂದ ಕಾಯ್ತಿತ್ತು. ಅಧಿಕಾರಿಗಳು ಮಾಡಿದ ಯಡವಟ್ಟು ಹಾಗೂ ತಾಂತ್ರಿಕ ದೋಷಗಳಿಂದ ಆ ಕುಟುಂಬ ತನ್ನ ಪಾಲಿಗೆ ದೊರೆಯಬೇಕಾಗಿದ್ದ ಮನೆಯನ್ನು(House) ಕಳೆದುಕೊಂಡಿತ್ತು. ಜೊಯಿಡಾ(Joida) ತಾಲೂಕಿ‌ನ ಪ್ರಧಾನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಟ್ಟ ಕಾಡಿನ‌ ನಡುವೆ ಇರುವ ಮಾನಾಯಿ ಗ್ರಾಮದಲ್ಲಿ ನೆಲೆಸಿದ್ದ ಬಡ ಕುಟುಂಬವನ್ನು ಬಿಗ್-3 ತಂಡವು ಹುಡುಕಿಕೊಂಡು ಹೋಗಿತ್ತು. ಆಗಸ್ಟ್ 31ರಂದು ಗರಂ ಆಗಿಯೇ ಸುದ್ದಿ ಪ್ರಸಾರ ಮಾಡಿದ್ವಿ. ಬಿಗ್-3 ಕಾಲಿಟ್ಟಿದ್ದೇ ತಡ ಆ ಕುಟುಂಬದ ಹಣೆ ಬರಹವೇ ಬದಲಾಯ್ತು ನೋಡಿ. ಮನೆ ಕೊಡಿಸುವುದಾಗಿ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ್ ಖಂಡೂ ಭರವಸೆ ನೀಡಿದ್ರು. ಸುದ್ದಿ ಪ್ರಸಾರ ಬಳಿಕ ಹೌಸಿಂಗ್ ಬೋರ್ಡ್‌ಗೆ ಕರೆ ಮಾಡಿದ್ದ ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆ, ಲಕ್ಷ್ಮೀ ಶೇಖಪ್ಪ ಛಲವಾದಿ ಕುಟುಂಬ ಸೇರಿದಂತೆ ಇತರೆ ಫಲಾನುಭವಿಗಳ ತಾಂತ್ರಿಕ ಸಮಸ್ಯೆ ಕೂಡಲೇ ಪರಿಹರಿಸುವಂತೆ ಸೂಚನೆ ನೀಡಿದ್ರು. ಸದ್ಯ ಬಸವ ಹೌಸಿಂಗ್ ಯೋಜನೆಯಡಿ ಮತ್ತೆ ಲಕ್ಷ್ಮೀ ಶೇಖಪ್ಪ ಛಲವಾದಿ ಕುಟುಂಬಕ್ಕೆ ಮನೆ ದೊರೆಯುತ್ತಿದ್ದು, ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್(Rajiv Gandhi Housing Board) ವೆಬ್‌ಸೈಟ್‌ನಲ್ಲೂ ಹಳೇ ಮನೆಯ ಫೋಟೋಗಳನ್ನು ತೆಗೆಯಿಸಿ, ಹೊಸ ಮನೆ ನಿರ್ಮಾಣದ ಪಂಚಾಂಗದ ಫೋಟೋ ಅಪ್ಲೋಡ್ ಮಾಡಲಾಗಿದೆ. ಇನ್ಮುಂದೆ ಈ ಕುಟುಂಬಕ್ಕೆ ಹಂತ ಹಂತವಾಗಿ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಲಿದ್ದು, ಕಣ್ಣೀರು ಸುರಿಸುತ್ತಿದ್ದ ಈ ಕುಟುಂಬ ಇದೀಗ ಸಂತೋಷದಿಂದ ಮನೆ ನಿರ್ಮಾಣದ ಕೆಲಸಕ್ಕೆ ತಯಾರಾಗುತ್ತಿದೆ. ಇನ್ಮುಂದೆ ಹಂತ ಹಂತವಾಗಿ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ದೊರೆಯಲಿದೆ. ಕೆಲವೇ ದಿನಗಳಲ್ಲಿ ಶೆಡ್ ವಾಸದಿಂದ ಮುಕ್ತಿ ಸಿಗಲಿದ್ದು. ಸದ್ಯ ಲಕ್ಷ್ಮೀ ಶೇಖಪ್ಪ ಛಲವಾದಿ ಕುಟುಂಬ ಫುಲ್ ಖುಷಿಯಲ್ಲಿದೆ.

ಇದನ್ನೂ ವೀಕ್ಷಿಸಿ:  ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಮೀಟಿಂಗ್: ತಮಿಳುನಾಡು ಕ್ಯಾತೆಗೆ ಮಣಿಯುತ್ತಾ ಸಮಿತಿ..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!