KS Eshwarappa: ಡಿ.ಕೆ. ಸುರೇಶ್‌ ರಸ್ತೆಯಲ್ಲಿ ಹೋಗುವ ದಾಸಪ್ಪನಂತೆ ಮಾತನಾಡಿದ್ರೆ ಹೇಗೆ? ಕೆ.ಎಸ್‌.ಈಶ್ವರಪ್ಪ

KS Eshwarappa: ಡಿ.ಕೆ. ಸುರೇಶ್‌ ರಸ್ತೆಯಲ್ಲಿ ಹೋಗುವ ದಾಸಪ್ಪನಂತೆ ಮಾತನಾಡಿದ್ರೆ ಹೇಗೆ? ಕೆ.ಎಸ್‌.ಈಶ್ವರಪ್ಪ

Published : Feb 02, 2024, 12:24 PM ISTUpdated : Feb 02, 2024, 12:25 PM IST

ಒಂದು ತಾಯಿ ಮಗನಿಗೆ ಅನ್ನ ಹಾಕುವಾಗ ಸ್ವಲ್ಪ ಕಡಿಮೆ ಬಿದ್ದರೆ ತಾಯಿ ಬೇಡ ಎಂದರೆ ಹೇಗೆ? ಎಂದು ಡಿಕೆ ಸುರೇಶ್‌ ಪ್ರತ್ಯೇಕ ರಾಷ್ಟ್ರದ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗ: ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ.  ಸುರೇಶ್ ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ತಿರುಗೇಟು ನೀಡಿದ್ದಾರೆ. ಸಂಸದ ಡಿ.ಕೆ. ಸುರೇಶ್‌ (DK Suresh) ರಸ್ತೆಯಲ್ಲಿ ಹೋಗುವ ದಾಸಪ್ಪನಂತೆ ಮಾತನಾಡಿದರೆ ಹೇಗೆ? ಸಂಸದರು  ಲೋಕಸಭಾ ಅಧಿವೇಶನ ನಡೆಯುತ್ತದೆ ಅಲ್ಲಿ ಪ್ರಶ್ನೆ ಮಾಡಿ. ನಾನೊಬ್ಬ ಸಂಸದನಿದ್ದೇನೆ ಬದುಕಿದ್ದೇನೆ ಎಂದು ತೋರಿಸಲು ಈ ರೀತಿ ಮಾತನಾಡಿದ್ದಾರೆ ಎಂದು ಹೇಳಿದರು. ಅದಕ್ಕಾಗಿ ಅವರನ್ನು ರಾಷ್ಟ್ರ ದ್ರೋಹಿ ಎಂದು ಕರೆದಿರುವುದು. ಒಂದು ತಾಯಿ ಮಗನಿಗೆ ಅನ್ನ ಹಾಕುವಾಗ ಸ್ವಲ್ಪ ಕಡಿಮೆ ಬಿದ್ದರೆ ತಾಯಿ ಬೇಡ ಎಂದರೆ ಹೇಗೆ? ಭಾರತ್  ಜೋಡೋ ಎಂದವರು ಭಾರತ್ ತೋಡೋ ಮಾಡುತ್ತಿದ್ದಾರೆ. ದೇಶವನ್ನು ಒಡೆದಿದ್ದು ಕಾಂಗ್ರೆಸ್ ಹೌದು ಅಲ್ಲವೋ ಎಂಬುದನ್ನು ಚುನಾವಣೆ ಸಂದರ್ಭದಲ್ಲಿ ಚರ್ಚೆ ಮಾಡೋಣ. ಡಿಕೆ ಸುರೇಶ್ ಹೇಳಿಕೆಯನ್ನು ಡಿಕೆ ಶಿವಕುಮಾರ್(DK Shivakumar) ಸಮರ್ಥನೆ ಮಾಡಿದ್ದನ್ನು ದೇಶದ ಜನತೆ ಒಪ್ಪುವುದಿಲ್ಲ. ಕಾಂಗ್ರೆಸ್ (COngress) ಪಕ್ಷದಲ್ಲಿ ಯಾರು ಬೇಕಾದರೂ ಏನು ಬೇಕಾದರೂ ಮಾತನಾಡಬಹುದು. ದೇಶ ಮತ್ತು ರಾಜ್ಯದಲ್ಲಿ ಅಶಿಸ್ತಿನಿಂದ ಕೂಡಿದ ಪಕ್ಷ ಕಾಂಗ್ರೆಸ್ ಎಂದು ಕಿಡಿಕಾರಿದರು.

ಇದನ್ನೂ ವೀಕ್ಷಿಸಿ:  Hemant Soren: ಜಾರ್ಖಾಂಡ್‌ನಲ್ಲಿ ಆಪರೇಷನ್ ಪಾಲಿಟಿಕ್ಸ್: ಚಂಪಾಯ್ ಸೊರೇನ್ ನೂತನ ಸಿಎಂ..?

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್