ಬೆಂಗಳೂರಿನ ಐತಿಹಾಸಿಕ ದೇಗುಲದ ಗೋಪುರದಲ್ಲಿ ಬಿರುಕು..! ದೊಡ್ಡ ಬಸವ ದೇಗುಲ ಗೋಪುರ ದುರಸ್ಥಿ ಯಾವಾಗ..?

ಬೆಂಗಳೂರಿನ ಐತಿಹಾಸಿಕ ದೇಗುಲದ ಗೋಪುರದಲ್ಲಿ ಬಿರುಕು..! ದೊಡ್ಡ ಬಸವ ದೇಗುಲ ಗೋಪುರ ದುರಸ್ಥಿ ಯಾವಾಗ..?

Published : Dec 08, 2023, 09:50 AM IST

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಹೀಗಿರುವಾಗಲೇ ದೊಡ್ಡ ಬಸವಣ್ಣ ದೇವಸ್ಥಾನದ ವಿಮಾನಗೋಪುರ ಅಪಾಯಕಾರಿ ಹಂತ ತಲುಪಿದ್ದು  ದುರಸ್ಥಿಗೆ ಸರ್ಕಾರದ ಬಳಿ ದುಡ್ಡಿಲ್ವಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿತ್ತು. ಸದ್ಯ ಸುವರ್ಣ ನ್ಯೂಸ್ ವರದಿ ಬಳಿಕ ಪುರಾತತ್ವ ಇಲಾಖೆಯಿಂದ ಪುನರ್ ನಿರ್ಮಾಣದ ಭರವಸೆ ಸಿಕ್ಕಿದೆ.

ಬಸವನಗುಡಿಯ ದೊಡ್ಡ ಬಸವಣ್ಣ ದೇವಸ್ಥಾನ. ಬೆಂಗಳೂರಿನ(Bengaluru) ಐತಿಹಾಸಿಕ ಹಿನ್ನಲೆಯುಳ್ಳ ದೇವಸ್ಥಾನ. ಇಲ್ಲಿ ವರ್ಷಕ್ಕೊಮ್ಮೆ ಕಾರ್ತಿಕ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ(Kadalekayi parishe) ಫೇಮಸ್. ಆದ್ರೆ ಈ ದೇವಾಲಯದ ವಿಮಾನ ಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ ಹುಟ್ಟಿಸಿದೆ. ಕೆಂಪೇಗೌಡರು ಕ್ರಿ.ಶ 5ನೇ ಶತಮಾನದಲ್ಲಿ ಈ ದೇವಾಲಯವನ್ನು ಪುನಶ್ಚೇತನಗೊಳಿಸಿದ್ರು ಅನ್ನೋ ಉಲ್ಲೇಖವಿದೆ. ಸುಮಾರು ‌100-150 ವರ್ಷಗಳ ಹಿಂದೆ ದೇವಸ್ಥಾನಕ್ಕೆ ಐತಿಹಾಸಿಕ ವಿಮಾನ ಗೋಪುರದ ನಿರ್ಮಾಣ ಮಾಡಲಾಗಿದೆ. ದೇವಾಲಯದ ಮೇಲ್ಭಾಗದಲ್ಲಿ ಅರಳಿ ಗಿಡಗಳು ಬೆಳೆದಿದ್ದು ಅವುಗಳಿಂದಾಗಿ ದೇವಸ್ಥಾನ ಶಿಥಿಲಗೊಳ್ಳುವ ಹಂತದಲ್ಲಿದೆ. ಈ ದೇವಾಲಯವನ್ನು(Temple) ಪ್ರಾಚ್ಯ ವಸ್ತುಗಳ ಪಟ್ಟಿಯಲ್ಲಿ ಸೇರಿಸಲಾಗಿರುವುದರಿಂದ ಇಲಾಖೆಯ ಅನುಮತಿಯ ಹೊರತಾಗಿ ಬೇರೆ ಯಾವುದೇ ಕೆಲಸವನ್ನು ಆಡಳಿತ ಮಂಡಳಿ ಮಾಡುವಂತಿಲ್ಲ. ಆದ್ರೆ ಹಲವು ಬಾರಿ ಪತ್ರ ಬರೆದ್ರೂ ಪುರಾತತ್ವ ಇಲಾಖೆ ಎಚ್ಚೆತ್ತುಕೊಂಡಿಲ್ಲ ಅನ್ನೋದು ದೇವಸ್ಥಾನ ಆಡಳಿತ ಮಂಡಳಿ ಮತ್ತು ಸ್ಥಳೀಯರ ಆರೋಪ. ವಿಮಾನಗೋಪುರ ಶಿಥಲಿಗೊಂಡ ಬಗ್ಗೆ ನಾವು ವರದಿ ಬಿತ್ತರಿಸುತ್ತಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಪುರಾತತ್ವ ಇಲಾಖೆಯ(Department of Archaeology) ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ರು. ಬಳಿಕ ಐತಿಹಾಸಿಕ ವಿಮಾನ ಗೋಪುರವನ್ನು ಸರಿಪಡಿಸುವ ಭರವಸೆ ನೀಡಿದ್ದಾರೆ. ದೊಡ್ಡ ಬಸವಣ್ಣ ದೇವಸ್ಥಾನದ ವಿಮಾನ ಗೋಪುರ ಸರಿಪಡಿಸುವ ಜೊತೆಗೆ  ದೇವಸ್ಥಾನಕ್ಕೆ ಸುಣ್ಣ ಬಣ್ಣ ಬಳಿಯುವ ಆಶ್ವಾಸನೆಯೂ ದೊರೆತಿದೆ. ಮುಂದಿನ ಸೋಮವಾರವೇ ಕಡಲೆಕಾಯಿ ಪರಿಷೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ:  ಯಶ್19 ಸಿನಿಮಾ ಅನೌನ್ಸ್‌ಗೆ ಕೌಂಟ್‌ಡೌನ್! 11 ದೇಶಗಳಲ್ಲಿ ಸಿನಿಮಾ ಟೈಟಲ್ ರಿವೀಲ್..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more