ಬೆಂಗಳೂರಿನ ಐತಿಹಾಸಿಕ ದೇಗುಲದ ಗೋಪುರದಲ್ಲಿ ಬಿರುಕು..! ದೊಡ್ಡ ಬಸವ ದೇಗುಲ ಗೋಪುರ ದುರಸ್ಥಿ ಯಾವಾಗ..?

ಬೆಂಗಳೂರಿನ ಐತಿಹಾಸಿಕ ದೇಗುಲದ ಗೋಪುರದಲ್ಲಿ ಬಿರುಕು..! ದೊಡ್ಡ ಬಸವ ದೇಗುಲ ಗೋಪುರ ದುರಸ್ಥಿ ಯಾವಾಗ..?

Published : Dec 08, 2023, 09:50 AM IST

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಹೀಗಿರುವಾಗಲೇ ದೊಡ್ಡ ಬಸವಣ್ಣ ದೇವಸ್ಥಾನದ ವಿಮಾನಗೋಪುರ ಅಪಾಯಕಾರಿ ಹಂತ ತಲುಪಿದ್ದು  ದುರಸ್ಥಿಗೆ ಸರ್ಕಾರದ ಬಳಿ ದುಡ್ಡಿಲ್ವಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿತ್ತು. ಸದ್ಯ ಸುವರ್ಣ ನ್ಯೂಸ್ ವರದಿ ಬಳಿಕ ಪುರಾತತ್ವ ಇಲಾಖೆಯಿಂದ ಪುನರ್ ನಿರ್ಮಾಣದ ಭರವಸೆ ಸಿಕ್ಕಿದೆ.

ಬಸವನಗುಡಿಯ ದೊಡ್ಡ ಬಸವಣ್ಣ ದೇವಸ್ಥಾನ. ಬೆಂಗಳೂರಿನ(Bengaluru) ಐತಿಹಾಸಿಕ ಹಿನ್ನಲೆಯುಳ್ಳ ದೇವಸ್ಥಾನ. ಇಲ್ಲಿ ವರ್ಷಕ್ಕೊಮ್ಮೆ ಕಾರ್ತಿಕ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ(Kadalekayi parishe) ಫೇಮಸ್. ಆದ್ರೆ ಈ ದೇವಾಲಯದ ವಿಮಾನ ಗೋಪುರದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ ಹುಟ್ಟಿಸಿದೆ. ಕೆಂಪೇಗೌಡರು ಕ್ರಿ.ಶ 5ನೇ ಶತಮಾನದಲ್ಲಿ ಈ ದೇವಾಲಯವನ್ನು ಪುನಶ್ಚೇತನಗೊಳಿಸಿದ್ರು ಅನ್ನೋ ಉಲ್ಲೇಖವಿದೆ. ಸುಮಾರು ‌100-150 ವರ್ಷಗಳ ಹಿಂದೆ ದೇವಸ್ಥಾನಕ್ಕೆ ಐತಿಹಾಸಿಕ ವಿಮಾನ ಗೋಪುರದ ನಿರ್ಮಾಣ ಮಾಡಲಾಗಿದೆ. ದೇವಾಲಯದ ಮೇಲ್ಭಾಗದಲ್ಲಿ ಅರಳಿ ಗಿಡಗಳು ಬೆಳೆದಿದ್ದು ಅವುಗಳಿಂದಾಗಿ ದೇವಸ್ಥಾನ ಶಿಥಿಲಗೊಳ್ಳುವ ಹಂತದಲ್ಲಿದೆ. ಈ ದೇವಾಲಯವನ್ನು(Temple) ಪ್ರಾಚ್ಯ ವಸ್ತುಗಳ ಪಟ್ಟಿಯಲ್ಲಿ ಸೇರಿಸಲಾಗಿರುವುದರಿಂದ ಇಲಾಖೆಯ ಅನುಮತಿಯ ಹೊರತಾಗಿ ಬೇರೆ ಯಾವುದೇ ಕೆಲಸವನ್ನು ಆಡಳಿತ ಮಂಡಳಿ ಮಾಡುವಂತಿಲ್ಲ. ಆದ್ರೆ ಹಲವು ಬಾರಿ ಪತ್ರ ಬರೆದ್ರೂ ಪುರಾತತ್ವ ಇಲಾಖೆ ಎಚ್ಚೆತ್ತುಕೊಂಡಿಲ್ಲ ಅನ್ನೋದು ದೇವಸ್ಥಾನ ಆಡಳಿತ ಮಂಡಳಿ ಮತ್ತು ಸ್ಥಳೀಯರ ಆರೋಪ. ವಿಮಾನಗೋಪುರ ಶಿಥಲಿಗೊಂಡ ಬಗ್ಗೆ ನಾವು ವರದಿ ಬಿತ್ತರಿಸುತ್ತಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಪುರಾತತ್ವ ಇಲಾಖೆಯ(Department of Archaeology) ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ರು. ಬಳಿಕ ಐತಿಹಾಸಿಕ ವಿಮಾನ ಗೋಪುರವನ್ನು ಸರಿಪಡಿಸುವ ಭರವಸೆ ನೀಡಿದ್ದಾರೆ. ದೊಡ್ಡ ಬಸವಣ್ಣ ದೇವಸ್ಥಾನದ ವಿಮಾನ ಗೋಪುರ ಸರಿಪಡಿಸುವ ಜೊತೆಗೆ  ದೇವಸ್ಥಾನಕ್ಕೆ ಸುಣ್ಣ ಬಣ್ಣ ಬಳಿಯುವ ಆಶ್ವಾಸನೆಯೂ ದೊರೆತಿದೆ. ಮುಂದಿನ ಸೋಮವಾರವೇ ಕಡಲೆಕಾಯಿ ಪರಿಷೆ ನಡೆಯಲಿದೆ. 

ಇದನ್ನೂ ವೀಕ್ಷಿಸಿ:  ಯಶ್19 ಸಿನಿಮಾ ಅನೌನ್ಸ್‌ಗೆ ಕೌಂಟ್‌ಡೌನ್! 11 ದೇಶಗಳಲ್ಲಿ ಸಿನಿಮಾ ಟೈಟಲ್ ರಿವೀಲ್..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more