ಕೋಟ್ಯಾಂತರ ರೂ. ಸ್ಮಾರ್ಟ್ ಸಿಟಿ ಯೋಜನೆ ಕಟ್ಟಡ: ಕಾಂಗ್ರೆಸ್-ಬಿಜೆಪಿ ಪಾಲಿಟಿಕ್ಸ್‌ಗೆ ಬಲಿಯಾದ ಕದ್ರಿ ಫುಡ್ ಕೋರ್ಟ್

ಕೋಟ್ಯಾಂತರ ರೂ. ಸ್ಮಾರ್ಟ್ ಸಿಟಿ ಯೋಜನೆ ಕಟ್ಟಡ: ಕಾಂಗ್ರೆಸ್-ಬಿಜೆಪಿ ಪಾಲಿಟಿಕ್ಸ್‌ಗೆ ಬಲಿಯಾದ ಕದ್ರಿ ಫುಡ್ ಕೋರ್ಟ್

Published : Nov 04, 2023, 10:28 AM IST

ಸರ್ಕಾರ ಬದಲಾದಾಗ ದೊಡ್ಡ ದೊಡ್ಡ ನಾಯಕರು ಸಚಿವ ಸ್ಥಾನ, ನಿಗಮ ಮಂಡಳಿಗಳಲ್ಲಿ ಸ್ಥಾನ ಪಡೆಯೋಕೆ ಕಸರತ್ತು ಮಾಡ್ತಾರೆ. ಕಾರ್ಯಕರ್ತರು ನಾಯಕರ ಕೈ ಕಾಲು ಹಿಡಿದು ಸಣ್ಣಪುಟ್ಟ ಕೆಲಸ ಮಾಡಿಸೋದು ಸಾಮಾನ್ಯ. ಆದರೆ ಮಂಗಳೂರಿನ ಸ್ಮಾರ್ಟ್ ಸಿಟಿ ವ್ಯಾಪಾರಿ ಮಳಿಗೆಗಳ ಹಂಚಿಕೆಯಲ್ಲೂ ರಾಜಕೀಯ ಹಸ್ತಕ್ಷೇಪದ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ನಾಯಕರು ತಮ್ಮ ಆಪ್ತರಿಗೆ ಮಳಿಗೆ ಕೊಡಿಸಲು ಯತ್ನಿಸ್ತಿದಾರೆ ಅಂತ ಬಿಜೆಪಿ ಆರೋಪಿಸಿದೆ. 
 

ಸ್ಮಾರ್ಟ್ ಸಿಟಿ ಯೋಜನೆ(Smart City Project) ಅದೆಷ್ಟೋ ನಗರಗಳ ಅಭಿವೃದ್ಧಿಯ ದಿಕ್ಕನ್ನೇ ಬದಲಿಸಿದ ಯೋಜನೆ ಇದೆ. ಕಡಲ ತಡಿ ಮಂಗಳೂರು(Mangalore) ಕೂಡ ಹಲವು ವಿಚಾರಗಳಲ್ಲಿ ಸ್ಮಾರ್ಟ್ ಟಚ್ ಪಡೆದಿದೆ. ರಸ್ತೆ, ಪಾರ್ಕ್ ಸೇರಿದಂತೆ ಅನೇಕ ಜಾಗಗಳು ಅಭಿವೃದ್ಧಿಯಾಗಿದೆ. ಆದರೆ ಕದ್ರಿ ಪಾರ್ಕ್ ರಸ್ತೆಯ ಫುಡ್ ಕೋರ್ಟ್(Kadri Food Court) ಮಾತ್ರ ಇದಕ್ಕೆಲ್ಲಾ ವ್ಯತಿರಿಕ್ತ. 2023ರ ಮಾರ್ಚ್‌ನಲ್ಲಿ ಬಿಜೆಪಿ(BJP) ಸರ್ಕಾರ ಈ ಫುಡ್‌ ಕೋರ್ಟ್‌ನನ್ನು ಉದ್ಘಾಟಿಸಿತ್ತು. 12 ಕೋಟಿ ವೆಚ್ಚದಲ್ಲಿ 38 ಸ್ಮಾರ್ಟ್ ಸಿಟಿ ಫುಡ್ ಕೋರ್ಟ್ ಕೂಡ ಸಿದ್ಧಾಗಿತ್ತು. ಆದರೆ ಏಳೆಂಟು ತಿಂಗಳು ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಉದ್ಯಮಿಯೊಬ್ಬರು ಟೆಂಡರ್ ಮೂಲಕ ಪಡೆದು ವ್ಯಾಪಾರ ಆರಂಭಿಸಲು ಸಿದ್ದತೆ ನಡೆಸಿದ್ದರು. ಆದರೆ ಅಷ್ಟೋತ್ತಿಗೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಕಾರಣಕ್ಕೆ ಎಲ್ಲವೂ ಸ್ಥಗಿತವಾಗಿತ್ತು. ಈಗ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹಳೆಯ ಟೆಂಡರ್ ರದ್ದುಗೊಳಿಸಿದ ಆರೋಪ ಕೇಳಿ ಬಂದಿದೆ. ಸದ್ಯ ಕಾಂಗ್ರೆಸ್ ನಾಯಕರ ಆಪ್ತರು ಕೆಲವೊಂದು ದಾಖಲೆ ತಯಾರಿಸಿ ಮಳಿಗೆ ಪಡೆಯಲು ಸಿದ್ದತೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಕದ್ರಿ ಪಾರ್ಕ್‌ ಉದ್ಯಾನವನ ರಸ್ತೆ ಮತ್ತು ಹೊರ ಆವರಣದ ಸಮಗ್ರ ಅಭಿವೃದ್ಧಿ ಸುಮಾರು 16 ಕೋ.ಟಿ. ರೂ. ವೆಚ್ಚದಲ್ಲಿ ನಡೆದಿದೆ. 850 ಮೀ. ಉದ್ದದ ಕಾಂಕೀಟ್‌ ರಸ್ತೆ ಎರಡೂ ಬದಿಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಫುಡ್ ಕೋರ್ಟ್ ಆರಂಭಕ್ಕೆ ಮಾತ್ರ ಉದ್ಘಾಟನೆ ಭಾಗ್ಯ ಬಂದಿಲ್ಲ. ಟೆಂಡರ್ ವಿಚಾರವೇ ಇಷ್ಟೆಲ್ಲಾ ಗೊಂದಲಕ್ಕೆ ಕಾರಣ ಎನ್ನುತ್ತಿದ್ದಾರೆ  ಸ್ಥಳೀಯರು. 

ಇದನ್ನೂ ವೀಕ್ಷಿಸಿ:  ದಸರಾದಲ್ಲಿ ಭಾಗಿಯಾಗಿದ್ದ ಕಲಾವಿದರ ಅಸಮಾಧಾನ: ಸ್ಪರ್ಧೆಯಲ್ಲಿ ಗೆದ್ರೂ ಸಿಗದ ಬಹುಮಾನದ ಮೊತ್ತ !

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more