ಕೋಟ್ಯಾಂತರ ರೂ. ಸ್ಮಾರ್ಟ್ ಸಿಟಿ ಯೋಜನೆ ಕಟ್ಟಡ: ಕಾಂಗ್ರೆಸ್-ಬಿಜೆಪಿ ಪಾಲಿಟಿಕ್ಸ್‌ಗೆ ಬಲಿಯಾದ ಕದ್ರಿ ಫುಡ್ ಕೋರ್ಟ್

ಕೋಟ್ಯಾಂತರ ರೂ. ಸ್ಮಾರ್ಟ್ ಸಿಟಿ ಯೋಜನೆ ಕಟ್ಟಡ: ಕಾಂಗ್ರೆಸ್-ಬಿಜೆಪಿ ಪಾಲಿಟಿಕ್ಸ್‌ಗೆ ಬಲಿಯಾದ ಕದ್ರಿ ಫುಡ್ ಕೋರ್ಟ್

Published : Nov 04, 2023, 10:28 AM IST

ಸರ್ಕಾರ ಬದಲಾದಾಗ ದೊಡ್ಡ ದೊಡ್ಡ ನಾಯಕರು ಸಚಿವ ಸ್ಥಾನ, ನಿಗಮ ಮಂಡಳಿಗಳಲ್ಲಿ ಸ್ಥಾನ ಪಡೆಯೋಕೆ ಕಸರತ್ತು ಮಾಡ್ತಾರೆ. ಕಾರ್ಯಕರ್ತರು ನಾಯಕರ ಕೈ ಕಾಲು ಹಿಡಿದು ಸಣ್ಣಪುಟ್ಟ ಕೆಲಸ ಮಾಡಿಸೋದು ಸಾಮಾನ್ಯ. ಆದರೆ ಮಂಗಳೂರಿನ ಸ್ಮಾರ್ಟ್ ಸಿಟಿ ವ್ಯಾಪಾರಿ ಮಳಿಗೆಗಳ ಹಂಚಿಕೆಯಲ್ಲೂ ರಾಜಕೀಯ ಹಸ್ತಕ್ಷೇಪದ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ನಾಯಕರು ತಮ್ಮ ಆಪ್ತರಿಗೆ ಮಳಿಗೆ ಕೊಡಿಸಲು ಯತ್ನಿಸ್ತಿದಾರೆ ಅಂತ ಬಿಜೆಪಿ ಆರೋಪಿಸಿದೆ. 
 

ಸ್ಮಾರ್ಟ್ ಸಿಟಿ ಯೋಜನೆ(Smart City Project) ಅದೆಷ್ಟೋ ನಗರಗಳ ಅಭಿವೃದ್ಧಿಯ ದಿಕ್ಕನ್ನೇ ಬದಲಿಸಿದ ಯೋಜನೆ ಇದೆ. ಕಡಲ ತಡಿ ಮಂಗಳೂರು(Mangalore) ಕೂಡ ಹಲವು ವಿಚಾರಗಳಲ್ಲಿ ಸ್ಮಾರ್ಟ್ ಟಚ್ ಪಡೆದಿದೆ. ರಸ್ತೆ, ಪಾರ್ಕ್ ಸೇರಿದಂತೆ ಅನೇಕ ಜಾಗಗಳು ಅಭಿವೃದ್ಧಿಯಾಗಿದೆ. ಆದರೆ ಕದ್ರಿ ಪಾರ್ಕ್ ರಸ್ತೆಯ ಫುಡ್ ಕೋರ್ಟ್(Kadri Food Court) ಮಾತ್ರ ಇದಕ್ಕೆಲ್ಲಾ ವ್ಯತಿರಿಕ್ತ. 2023ರ ಮಾರ್ಚ್‌ನಲ್ಲಿ ಬಿಜೆಪಿ(BJP) ಸರ್ಕಾರ ಈ ಫುಡ್‌ ಕೋರ್ಟ್‌ನನ್ನು ಉದ್ಘಾಟಿಸಿತ್ತು. 12 ಕೋಟಿ ವೆಚ್ಚದಲ್ಲಿ 38 ಸ್ಮಾರ್ಟ್ ಸಿಟಿ ಫುಡ್ ಕೋರ್ಟ್ ಕೂಡ ಸಿದ್ಧಾಗಿತ್ತು. ಆದರೆ ಏಳೆಂಟು ತಿಂಗಳು ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಉದ್ಯಮಿಯೊಬ್ಬರು ಟೆಂಡರ್ ಮೂಲಕ ಪಡೆದು ವ್ಯಾಪಾರ ಆರಂಭಿಸಲು ಸಿದ್ದತೆ ನಡೆಸಿದ್ದರು. ಆದರೆ ಅಷ್ಟೋತ್ತಿಗೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಕಾರಣಕ್ಕೆ ಎಲ್ಲವೂ ಸ್ಥಗಿತವಾಗಿತ್ತು. ಈಗ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹಳೆಯ ಟೆಂಡರ್ ರದ್ದುಗೊಳಿಸಿದ ಆರೋಪ ಕೇಳಿ ಬಂದಿದೆ. ಸದ್ಯ ಕಾಂಗ್ರೆಸ್ ನಾಯಕರ ಆಪ್ತರು ಕೆಲವೊಂದು ದಾಖಲೆ ತಯಾರಿಸಿ ಮಳಿಗೆ ಪಡೆಯಲು ಸಿದ್ದತೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಕದ್ರಿ ಪಾರ್ಕ್‌ ಉದ್ಯಾನವನ ರಸ್ತೆ ಮತ್ತು ಹೊರ ಆವರಣದ ಸಮಗ್ರ ಅಭಿವೃದ್ಧಿ ಸುಮಾರು 16 ಕೋ.ಟಿ. ರೂ. ವೆಚ್ಚದಲ್ಲಿ ನಡೆದಿದೆ. 850 ಮೀ. ಉದ್ದದ ಕಾಂಕೀಟ್‌ ರಸ್ತೆ ಎರಡೂ ಬದಿಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಫುಡ್ ಕೋರ್ಟ್ ಆರಂಭಕ್ಕೆ ಮಾತ್ರ ಉದ್ಘಾಟನೆ ಭಾಗ್ಯ ಬಂದಿಲ್ಲ. ಟೆಂಡರ್ ವಿಚಾರವೇ ಇಷ್ಟೆಲ್ಲಾ ಗೊಂದಲಕ್ಕೆ ಕಾರಣ ಎನ್ನುತ್ತಿದ್ದಾರೆ  ಸ್ಥಳೀಯರು. 

ಇದನ್ನೂ ವೀಕ್ಷಿಸಿ:  ದಸರಾದಲ್ಲಿ ಭಾಗಿಯಾಗಿದ್ದ ಕಲಾವಿದರ ಅಸಮಾಧಾನ: ಸ್ಪರ್ಧೆಯಲ್ಲಿ ಗೆದ್ರೂ ಸಿಗದ ಬಹುಮಾನದ ಮೊತ್ತ !

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more