ಕೋಟ್ಯಾಂತರ ರೂ. ಸ್ಮಾರ್ಟ್ ಸಿಟಿ ಯೋಜನೆ ಕಟ್ಟಡ: ಕಾಂಗ್ರೆಸ್-ಬಿಜೆಪಿ ಪಾಲಿಟಿಕ್ಸ್‌ಗೆ ಬಲಿಯಾದ ಕದ್ರಿ ಫುಡ್ ಕೋರ್ಟ್

ಕೋಟ್ಯಾಂತರ ರೂ. ಸ್ಮಾರ್ಟ್ ಸಿಟಿ ಯೋಜನೆ ಕಟ್ಟಡ: ಕಾಂಗ್ರೆಸ್-ಬಿಜೆಪಿ ಪಾಲಿಟಿಕ್ಸ್‌ಗೆ ಬಲಿಯಾದ ಕದ್ರಿ ಫುಡ್ ಕೋರ್ಟ್

Published : Nov 04, 2023, 10:28 AM IST

ಸರ್ಕಾರ ಬದಲಾದಾಗ ದೊಡ್ಡ ದೊಡ್ಡ ನಾಯಕರು ಸಚಿವ ಸ್ಥಾನ, ನಿಗಮ ಮಂಡಳಿಗಳಲ್ಲಿ ಸ್ಥಾನ ಪಡೆಯೋಕೆ ಕಸರತ್ತು ಮಾಡ್ತಾರೆ. ಕಾರ್ಯಕರ್ತರು ನಾಯಕರ ಕೈ ಕಾಲು ಹಿಡಿದು ಸಣ್ಣಪುಟ್ಟ ಕೆಲಸ ಮಾಡಿಸೋದು ಸಾಮಾನ್ಯ. ಆದರೆ ಮಂಗಳೂರಿನ ಸ್ಮಾರ್ಟ್ ಸಿಟಿ ವ್ಯಾಪಾರಿ ಮಳಿಗೆಗಳ ಹಂಚಿಕೆಯಲ್ಲೂ ರಾಜಕೀಯ ಹಸ್ತಕ್ಷೇಪದ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ನಾಯಕರು ತಮ್ಮ ಆಪ್ತರಿಗೆ ಮಳಿಗೆ ಕೊಡಿಸಲು ಯತ್ನಿಸ್ತಿದಾರೆ ಅಂತ ಬಿಜೆಪಿ ಆರೋಪಿಸಿದೆ. 
 

ಸ್ಮಾರ್ಟ್ ಸಿಟಿ ಯೋಜನೆ(Smart City Project) ಅದೆಷ್ಟೋ ನಗರಗಳ ಅಭಿವೃದ್ಧಿಯ ದಿಕ್ಕನ್ನೇ ಬದಲಿಸಿದ ಯೋಜನೆ ಇದೆ. ಕಡಲ ತಡಿ ಮಂಗಳೂರು(Mangalore) ಕೂಡ ಹಲವು ವಿಚಾರಗಳಲ್ಲಿ ಸ್ಮಾರ್ಟ್ ಟಚ್ ಪಡೆದಿದೆ. ರಸ್ತೆ, ಪಾರ್ಕ್ ಸೇರಿದಂತೆ ಅನೇಕ ಜಾಗಗಳು ಅಭಿವೃದ್ಧಿಯಾಗಿದೆ. ಆದರೆ ಕದ್ರಿ ಪಾರ್ಕ್ ರಸ್ತೆಯ ಫುಡ್ ಕೋರ್ಟ್(Kadri Food Court) ಮಾತ್ರ ಇದಕ್ಕೆಲ್ಲಾ ವ್ಯತಿರಿಕ್ತ. 2023ರ ಮಾರ್ಚ್‌ನಲ್ಲಿ ಬಿಜೆಪಿ(BJP) ಸರ್ಕಾರ ಈ ಫುಡ್‌ ಕೋರ್ಟ್‌ನನ್ನು ಉದ್ಘಾಟಿಸಿತ್ತು. 12 ಕೋಟಿ ವೆಚ್ಚದಲ್ಲಿ 38 ಸ್ಮಾರ್ಟ್ ಸಿಟಿ ಫುಡ್ ಕೋರ್ಟ್ ಕೂಡ ಸಿದ್ಧಾಗಿತ್ತು. ಆದರೆ ಏಳೆಂಟು ತಿಂಗಳು ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಉದ್ಯಮಿಯೊಬ್ಬರು ಟೆಂಡರ್ ಮೂಲಕ ಪಡೆದು ವ್ಯಾಪಾರ ಆರಂಭಿಸಲು ಸಿದ್ದತೆ ನಡೆಸಿದ್ದರು. ಆದರೆ ಅಷ್ಟೋತ್ತಿಗೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಕಾರಣಕ್ಕೆ ಎಲ್ಲವೂ ಸ್ಥಗಿತವಾಗಿತ್ತು. ಈಗ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹಳೆಯ ಟೆಂಡರ್ ರದ್ದುಗೊಳಿಸಿದ ಆರೋಪ ಕೇಳಿ ಬಂದಿದೆ. ಸದ್ಯ ಕಾಂಗ್ರೆಸ್ ನಾಯಕರ ಆಪ್ತರು ಕೆಲವೊಂದು ದಾಖಲೆ ತಯಾರಿಸಿ ಮಳಿಗೆ ಪಡೆಯಲು ಸಿದ್ದತೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಕದ್ರಿ ಪಾರ್ಕ್‌ ಉದ್ಯಾನವನ ರಸ್ತೆ ಮತ್ತು ಹೊರ ಆವರಣದ ಸಮಗ್ರ ಅಭಿವೃದ್ಧಿ ಸುಮಾರು 16 ಕೋ.ಟಿ. ರೂ. ವೆಚ್ಚದಲ್ಲಿ ನಡೆದಿದೆ. 850 ಮೀ. ಉದ್ದದ ಕಾಂಕೀಟ್‌ ರಸ್ತೆ ಎರಡೂ ಬದಿಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಫುಡ್ ಕೋರ್ಟ್ ಆರಂಭಕ್ಕೆ ಮಾತ್ರ ಉದ್ಘಾಟನೆ ಭಾಗ್ಯ ಬಂದಿಲ್ಲ. ಟೆಂಡರ್ ವಿಚಾರವೇ ಇಷ್ಟೆಲ್ಲಾ ಗೊಂದಲಕ್ಕೆ ಕಾರಣ ಎನ್ನುತ್ತಿದ್ದಾರೆ  ಸ್ಥಳೀಯರು. 

ಇದನ್ನೂ ವೀಕ್ಷಿಸಿ:  ದಸರಾದಲ್ಲಿ ಭಾಗಿಯಾಗಿದ್ದ ಕಲಾವಿದರ ಅಸಮಾಧಾನ: ಸ್ಪರ್ಧೆಯಲ್ಲಿ ಗೆದ್ರೂ ಸಿಗದ ಬಹುಮಾನದ ಮೊತ್ತ !

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more