ಕೋಟ್ಯಾಂತರ ರೂ. ಸ್ಮಾರ್ಟ್ ಸಿಟಿ ಯೋಜನೆ ಕಟ್ಟಡ: ಕಾಂಗ್ರೆಸ್-ಬಿಜೆಪಿ ಪಾಲಿಟಿಕ್ಸ್‌ಗೆ ಬಲಿಯಾದ ಕದ್ರಿ ಫುಡ್ ಕೋರ್ಟ್

ಕೋಟ್ಯಾಂತರ ರೂ. ಸ್ಮಾರ್ಟ್ ಸಿಟಿ ಯೋಜನೆ ಕಟ್ಟಡ: ಕಾಂಗ್ರೆಸ್-ಬಿಜೆಪಿ ಪಾಲಿಟಿಕ್ಸ್‌ಗೆ ಬಲಿಯಾದ ಕದ್ರಿ ಫುಡ್ ಕೋರ್ಟ್

Published : Nov 04, 2023, 10:28 AM IST

ಸರ್ಕಾರ ಬದಲಾದಾಗ ದೊಡ್ಡ ದೊಡ್ಡ ನಾಯಕರು ಸಚಿವ ಸ್ಥಾನ, ನಿಗಮ ಮಂಡಳಿಗಳಲ್ಲಿ ಸ್ಥಾನ ಪಡೆಯೋಕೆ ಕಸರತ್ತು ಮಾಡ್ತಾರೆ. ಕಾರ್ಯಕರ್ತರು ನಾಯಕರ ಕೈ ಕಾಲು ಹಿಡಿದು ಸಣ್ಣಪುಟ್ಟ ಕೆಲಸ ಮಾಡಿಸೋದು ಸಾಮಾನ್ಯ. ಆದರೆ ಮಂಗಳೂರಿನ ಸ್ಮಾರ್ಟ್ ಸಿಟಿ ವ್ಯಾಪಾರಿ ಮಳಿಗೆಗಳ ಹಂಚಿಕೆಯಲ್ಲೂ ರಾಜಕೀಯ ಹಸ್ತಕ್ಷೇಪದ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ನಾಯಕರು ತಮ್ಮ ಆಪ್ತರಿಗೆ ಮಳಿಗೆ ಕೊಡಿಸಲು ಯತ್ನಿಸ್ತಿದಾರೆ ಅಂತ ಬಿಜೆಪಿ ಆರೋಪಿಸಿದೆ. 
 

ಸ್ಮಾರ್ಟ್ ಸಿಟಿ ಯೋಜನೆ(Smart City Project) ಅದೆಷ್ಟೋ ನಗರಗಳ ಅಭಿವೃದ್ಧಿಯ ದಿಕ್ಕನ್ನೇ ಬದಲಿಸಿದ ಯೋಜನೆ ಇದೆ. ಕಡಲ ತಡಿ ಮಂಗಳೂರು(Mangalore) ಕೂಡ ಹಲವು ವಿಚಾರಗಳಲ್ಲಿ ಸ್ಮಾರ್ಟ್ ಟಚ್ ಪಡೆದಿದೆ. ರಸ್ತೆ, ಪಾರ್ಕ್ ಸೇರಿದಂತೆ ಅನೇಕ ಜಾಗಗಳು ಅಭಿವೃದ್ಧಿಯಾಗಿದೆ. ಆದರೆ ಕದ್ರಿ ಪಾರ್ಕ್ ರಸ್ತೆಯ ಫುಡ್ ಕೋರ್ಟ್(Kadri Food Court) ಮಾತ್ರ ಇದಕ್ಕೆಲ್ಲಾ ವ್ಯತಿರಿಕ್ತ. 2023ರ ಮಾರ್ಚ್‌ನಲ್ಲಿ ಬಿಜೆಪಿ(BJP) ಸರ್ಕಾರ ಈ ಫುಡ್‌ ಕೋರ್ಟ್‌ನನ್ನು ಉದ್ಘಾಟಿಸಿತ್ತು. 12 ಕೋಟಿ ವೆಚ್ಚದಲ್ಲಿ 38 ಸ್ಮಾರ್ಟ್ ಸಿಟಿ ಫುಡ್ ಕೋರ್ಟ್ ಕೂಡ ಸಿದ್ಧಾಗಿತ್ತು. ಆದರೆ ಏಳೆಂಟು ತಿಂಗಳು ಕಳೆದರೂ ಇನ್ನೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ಉದ್ಯಮಿಯೊಬ್ಬರು ಟೆಂಡರ್ ಮೂಲಕ ಪಡೆದು ವ್ಯಾಪಾರ ಆರಂಭಿಸಲು ಸಿದ್ದತೆ ನಡೆಸಿದ್ದರು. ಆದರೆ ಅಷ್ಟೋತ್ತಿಗೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಕಾರಣಕ್ಕೆ ಎಲ್ಲವೂ ಸ್ಥಗಿತವಾಗಿತ್ತು. ಈಗ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹಳೆಯ ಟೆಂಡರ್ ರದ್ದುಗೊಳಿಸಿದ ಆರೋಪ ಕೇಳಿ ಬಂದಿದೆ. ಸದ್ಯ ಕಾಂಗ್ರೆಸ್ ನಾಯಕರ ಆಪ್ತರು ಕೆಲವೊಂದು ದಾಖಲೆ ತಯಾರಿಸಿ ಮಳಿಗೆ ಪಡೆಯಲು ಸಿದ್ದತೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಕದ್ರಿ ಪಾರ್ಕ್‌ ಉದ್ಯಾನವನ ರಸ್ತೆ ಮತ್ತು ಹೊರ ಆವರಣದ ಸಮಗ್ರ ಅಭಿವೃದ್ಧಿ ಸುಮಾರು 16 ಕೋ.ಟಿ. ರೂ. ವೆಚ್ಚದಲ್ಲಿ ನಡೆದಿದೆ. 850 ಮೀ. ಉದ್ದದ ಕಾಂಕೀಟ್‌ ರಸ್ತೆ ಎರಡೂ ಬದಿಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಫುಡ್ ಕೋರ್ಟ್ ಆರಂಭಕ್ಕೆ ಮಾತ್ರ ಉದ್ಘಾಟನೆ ಭಾಗ್ಯ ಬಂದಿಲ್ಲ. ಟೆಂಡರ್ ವಿಚಾರವೇ ಇಷ್ಟೆಲ್ಲಾ ಗೊಂದಲಕ್ಕೆ ಕಾರಣ ಎನ್ನುತ್ತಿದ್ದಾರೆ  ಸ್ಥಳೀಯರು. 

ಇದನ್ನೂ ವೀಕ್ಷಿಸಿ:  ದಸರಾದಲ್ಲಿ ಭಾಗಿಯಾಗಿದ್ದ ಕಲಾವಿದರ ಅಸಮಾಧಾನ: ಸ್ಪರ್ಧೆಯಲ್ಲಿ ಗೆದ್ರೂ ಸಿಗದ ಬಹುಮಾನದ ಮೊತ್ತ !

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more